Advertisement
MIRROR FOCUS

ಬರೋಬ್ಬರಿ 25 ವರ್ಷದ ಬಳಿಕ ಜೆಡಿಎಸ್‌ಗೆ ಕೇಂದ್ರದಲ್ಲಿ ಮಂತ್ರಿ ಸ್ಥಾನ | ಎಚ್‌ ಡಿ ಕುಮಾರಸ್ವಾಮಿಯವರಿಗೆ ಕೃಷಿ ಮಂತ್ರಿ ನಿರೀಕ್ಷೆ |

Share

ಬರೋಬ್ಬರಿ 25 ವರ್ಷದ ಬಳಿಕ ಜೆಡಿಎಸ್‌ಗೆ (JDS) ಕೇಂದ್ರದಲ್ಲಿ ಮಂತ್ರಿಗಿರಿ ಒಲಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಮೂರನೇ ಅಧಿಕಾರ ಅವಧಿಯಲ್ಲಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರಿಗೆ ಕ್ಯಾಬಿನೆಟ್‌ ಮಂತ್ರಿಗಿರಿ (Cabinet Minister) ಸಿಕ್ಕಿದೆ. ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಅವಧಿಯಲ್ಲಿ 1996-97ರಲ್ಲಿ ದೇವೇಗೌಡರು (HD Devegowda) ಪ್ರಧಾನಿಯಾಗಿದ್ದರು. ಈ ಸಂದರ್ಭದಲ್ಲಿ ಕೆಲ ಕಾಲ ಗೃಹ ಖಾತೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದರು.

ದೇವೇಗೌಡರು (Devegowda)  ಪ್ರಧಾನಿಯಾಗಿದ್ದ ಸಮಯದಲ್ಲಿ ಅಂದು ಜೆಡಿಎಸ್‌ ನಾಯಕರಾಗಿದ್ದ ಎಸ್‌.ಆರ್‌. ಬೊಮ್ಮಾಯಿ ಮತ್ತು ಸಿಎಂ ಇಬ್ರಾಹಿಂ ಅವರಿಗೆ ಕೇಂದ್ರದಲ್ಲಿ ಮಂತ್ರಿ ಸ್ಥಾನ ಸಿಕ್ಕಿತ್ತು. ಆ ನಂತರ ಜೆಡಿಎಸ್‌ನಿಂದ ಸಂಸತ್‌ಗೆ ಆಯ್ಕೆ ಆಗುತ್ತಿದ್ದರೂ ಯಾರಿಗೂ ಮಂತ್ರಿ ಸ್ಥಾನ ಸಿಕ್ಕಿರಲಿಲ್ಲ.  2004, 2009ರ ಚುನಾವಣೆಯಲ್ಲಿ ಯುಪಿಎ (UPA)  ಸರ್ಕಾರ ಅಧಿಕಾರದಲ್ಲಿದ್ದರೆ 2014 ರಿಂದ 2024ರ ವರೆಗೆ ಎನ್‌ಡಿಎ (NDA) ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿತ್ತು. 2014ರ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳದ ಜೆಡಿಎಸ್‌ 2019ರಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಂಡು ಕೇವಲ ಒಂದು ಸ್ಥಾನ ಮಾತ್ರ ಗೆದ್ದುಕೊಂಡಿತ್ತು.

ಈ ಚುನಾವಣೆಯಲ್ಲಿ ಮೊದಲೇ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್‌ ಹಾಸನ, ಮಂಡ್ಯ, ಕೋಲಾರದಲ್ಲಿ ಸ್ಪರ್ಧಿಸಿತ್ತು. ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ಸೋತರೆ, ಮಂಡ್ಯದಲ್ಲಿ ಎಚ್‌ಡಿ ಕುಮಾರಸ್ವಾಮಿ, ಕೋಲಾರದಲ್ಲಿ ಮಲ್ಲೇಶ್‌ ಬಾಬು ಜಯಗಳಿಸಿದ್ದರು. ಎನ್‌ಡಿಎ ಸರ್ಕಾರದಲ್ಲಿ ಜೆಡಿಎಸ್‌ ಪ್ರಮುಖ ಮಿತ್ರಪಕ್ಷವಾಗಿರುವ ಕಾರಣ ಕುಮಾರಸ್ವಾಮಿ ಅವರಿಗೆ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ಸಿಕ್ಕಿದೆ.  ಅಷ್ಟೇ ಅಲ್ಲದೇ ಮೊದಲ ಬಾರಿಗೆ ಕೇಂದ್ರದಲ್ಲಿ ಕುಮಾರಸ್ವಾಮಿ ಅವರಿಗೆ ಮಂತ್ರಿ ಸ್ಥಾನ ಒಲಿದಿದೆ.  ಜೆಡಿಎಸ್‌ ಯಾವಾಗಲೂ ರೈತರ ಪರ ಇರೋ ಪಕ್ಷ  ಅಂತನೇ ತಮ್ಮ ಅಸ್ತಿತ್ವವನ್ನು ಕಂಡುಕೊಂಡ ಪಕ್ಷ. ಹಾಗಾಗಿ ಈ ಬಾರಿ ಕುಮಾರಣ್ಣನಿಗೆ ಕೃಷಿ ಮಂತ್ರಿ ಸಿಗಬೇಕು ಅನ್ನುವ ನಿರೀಕ್ಷೆ  ರೈತರದ್ದು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

3 hours ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

10 hours ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

10 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

19 hours ago

ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ

ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…

20 hours ago

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

1 day ago