Advertisement
MIRROR FOCUS

ಬರೋಬ್ಬರಿ 25 ವರ್ಷದ ಬಳಿಕ ಜೆಡಿಎಸ್‌ಗೆ ಕೇಂದ್ರದಲ್ಲಿ ಮಂತ್ರಿ ಸ್ಥಾನ | ಎಚ್‌ ಡಿ ಕುಮಾರಸ್ವಾಮಿಯವರಿಗೆ ಕೃಷಿ ಮಂತ್ರಿ ನಿರೀಕ್ಷೆ |

Share

ಬರೋಬ್ಬರಿ 25 ವರ್ಷದ ಬಳಿಕ ಜೆಡಿಎಸ್‌ಗೆ (JDS) ಕೇಂದ್ರದಲ್ಲಿ ಮಂತ್ರಿಗಿರಿ ಒಲಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಮೂರನೇ ಅಧಿಕಾರ ಅವಧಿಯಲ್ಲಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರಿಗೆ ಕ್ಯಾಬಿನೆಟ್‌ ಮಂತ್ರಿಗಿರಿ (Cabinet Minister) ಸಿಕ್ಕಿದೆ. ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಅವಧಿಯಲ್ಲಿ 1996-97ರಲ್ಲಿ ದೇವೇಗೌಡರು (HD Devegowda) ಪ್ರಧಾನಿಯಾಗಿದ್ದರು. ಈ ಸಂದರ್ಭದಲ್ಲಿ ಕೆಲ ಕಾಲ ಗೃಹ ಖಾತೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದರು.

ದೇವೇಗೌಡರು (Devegowda)  ಪ್ರಧಾನಿಯಾಗಿದ್ದ ಸಮಯದಲ್ಲಿ ಅಂದು ಜೆಡಿಎಸ್‌ ನಾಯಕರಾಗಿದ್ದ ಎಸ್‌.ಆರ್‌. ಬೊಮ್ಮಾಯಿ ಮತ್ತು ಸಿಎಂ ಇಬ್ರಾಹಿಂ ಅವರಿಗೆ ಕೇಂದ್ರದಲ್ಲಿ ಮಂತ್ರಿ ಸ್ಥಾನ ಸಿಕ್ಕಿತ್ತು. ಆ ನಂತರ ಜೆಡಿಎಸ್‌ನಿಂದ ಸಂಸತ್‌ಗೆ ಆಯ್ಕೆ ಆಗುತ್ತಿದ್ದರೂ ಯಾರಿಗೂ ಮಂತ್ರಿ ಸ್ಥಾನ ಸಿಕ್ಕಿರಲಿಲ್ಲ.  2004, 2009ರ ಚುನಾವಣೆಯಲ್ಲಿ ಯುಪಿಎ (UPA)  ಸರ್ಕಾರ ಅಧಿಕಾರದಲ್ಲಿದ್ದರೆ 2014 ರಿಂದ 2024ರ ವರೆಗೆ ಎನ್‌ಡಿಎ (NDA) ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿತ್ತು. 2014ರ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳದ ಜೆಡಿಎಸ್‌ 2019ರಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಂಡು ಕೇವಲ ಒಂದು ಸ್ಥಾನ ಮಾತ್ರ ಗೆದ್ದುಕೊಂಡಿತ್ತು.

Advertisement

ಈ ಚುನಾವಣೆಯಲ್ಲಿ ಮೊದಲೇ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್‌ ಹಾಸನ, ಮಂಡ್ಯ, ಕೋಲಾರದಲ್ಲಿ ಸ್ಪರ್ಧಿಸಿತ್ತು. ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ಸೋತರೆ, ಮಂಡ್ಯದಲ್ಲಿ ಎಚ್‌ಡಿ ಕುಮಾರಸ್ವಾಮಿ, ಕೋಲಾರದಲ್ಲಿ ಮಲ್ಲೇಶ್‌ ಬಾಬು ಜಯಗಳಿಸಿದ್ದರು. ಎನ್‌ಡಿಎ ಸರ್ಕಾರದಲ್ಲಿ ಜೆಡಿಎಸ್‌ ಪ್ರಮುಖ ಮಿತ್ರಪಕ್ಷವಾಗಿರುವ ಕಾರಣ ಕುಮಾರಸ್ವಾಮಿ ಅವರಿಗೆ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ಸಿಕ್ಕಿದೆ.  ಅಷ್ಟೇ ಅಲ್ಲದೇ ಮೊದಲ ಬಾರಿಗೆ ಕೇಂದ್ರದಲ್ಲಿ ಕುಮಾರಸ್ವಾಮಿ ಅವರಿಗೆ ಮಂತ್ರಿ ಸ್ಥಾನ ಒಲಿದಿದೆ.  ಜೆಡಿಎಸ್‌ ಯಾವಾಗಲೂ ರೈತರ ಪರ ಇರೋ ಪಕ್ಷ  ಅಂತನೇ ತಮ್ಮ ಅಸ್ತಿತ್ವವನ್ನು ಕಂಡುಕೊಂಡ ಪಕ್ಷ. ಹಾಗಾಗಿ ಈ ಬಾರಿ ಕುಮಾರಣ್ಣನಿಗೆ ಕೃಷಿ ಮಂತ್ರಿ ಸಿಗಬೇಕು ಅನ್ನುವ ನಿರೀಕ್ಷೆ  ರೈತರದ್ದು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

17 hours ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

18 hours ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

1 day ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

1 day ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 days ago