ಮಕ್ಕಳ(Children) ಪಾಲಿಗೆ ಪರೀಕ್ಷೆ(Exam) ಅನ್ನೋದು ಕಬ್ಬಿಣದ ಕಡಲೇ ಕಾಯಿ. ಜೀವನದ ಪ್ರಮುಖ ಘಟ್ಟಗಳು ಹೌದು, ಹತ್ತನೇ ತರಗತಿ(SSLC) ಹಾಗೂ ಪಿಯುಸಿಯಲ್ಲಿ(PUC) ಮಕ್ಕಳು ಅಗತ್ಯವಾಗಿ ಪರೀಕ್ಷೆಗಳನ್ನು ಎದುರಿಸಲೇ ಬೇಕು. ಹೆಚ್ಚಿನ ಅಂಕ(Marks) ಗಳಿಸಿದರೆ ಅವರ ಮುಂದಿನ ಕಲಿಕೆಯ ಹಾದಿ ಸುಗಮವಾಗುತ್ತದೆ. ಹಾಗಾಂತ ಎಲ್ಲಾ ಮಕ್ಕಳು ಜಾಸ್ತಿ ಅಂಕಗಳನ್ನೇ ಪಡೆಯೋದು ಅಸಾಧ್ಯ. ಅದನ್ನು ಪೋಷಕರು(Parents) ಹಾಗೂ ಮಕ್ಕಳು , ಹಾಗೇ ಶಿಕ್ಷಕರು(Teachers) ಅರಿತಿರಬೇಕು. ಪರೀಕ್ಷೆಯಲ್ಲಿ ಪಾಸು ಫೇಲ್(Pass-Fail) ಆಗೋದು ಸಾಮಾನ್ಯ. ಪಾಸ್ ಆದವ್ರು ಬುದ್ದಿವಂತರಲ್ಲ, ಫೇಲ್ ಆದವರು ದಡ್ಡರಲ್ಲ. ಹಾಗಾಗಿ ಪಾಸ್-ಫೇಲ್ ಎಂಬುದು ಜೀವನದ ಒಂದು ಭಾಗ ಅಷ್ಟೇ. ಫೇಲ್ (Fail) ಆದ ಕೂಡಲೇ ಯಾವುದೇ ಕಾರಣಕ್ಕೂ ಕಠಿಣ ನಿರ್ಧಾರ ತೆಗೆದುಕೊಳ್ಳುವುದು ಬೇಡ. ನಿಮ್ಮ ಭವಿಷ್ಯ(Future) ಇನ್ನೂ ಸಾಕಷ್ಟಿದೆ ಈ ಕುರಿತು ಮಾನಸಿಕ ಆರೋಗ್ಯ ತಜ್ಞರಾದ(Psychiatrist) ಡಾ. ವಿನಯ್ ಅವರು ತಿಳಿಸಿರುವ ಮಾಹಿತಿ ಇಲ್ಲಿದೆ.
ಆತುರದ ನಿರ್ಧಾರ ಬೇಡ : ಹೌದು, ಪರೀಕ್ಷೆ ಎಂದಿಗೂ ನಮ್ಮ ಜೀವನ ನಿರ್ಧಾರ ಮಾಡುವುದಿಲ್ಲ. ಫೇಲ್ ಆದವರು ಕೂಡ ಜೀವನದಲ್ಲಿ ಸಾಧನೆ ಮಾಡಿದ್ದಾರೆ. ಹಾಗಾಗಿ ಪರೀಕ್ಷೆಯ ಫಲಿತಾಂಶ ಬಂದ ನಂತರದಲ್ಲಿ ಎಂದಿಗೂ ನಾವುಗಳು ಯಾವುದೇ ಕಾರಣಕ್ಕೂ ಆತುರದ ನಿರ್ಧಾರ ಬೇಡವೇ ಬೇಡ. ನನ್ನ ಜೀವನ ಮುಗಿಯಿತು ಈ ತರಹದ ನಿರ್ಧಾರಗಳನ್ನ ಎಂದಿಗೂ ದಯವಿಟ್ಟು ತೆಗೆದುಕೊಳ್ಳಬೇಡಿ ಎಂದು ಖ್ಯಾತ ಮಾನಸಿಕ ತಜ್ಞರಾದ ಡಾ. ವಿನಯ್ ಅವ್ರು ತಿಳಿಸುತ್ತಾರೆ.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…