#KRSDam | ಕೊಂಚ ಭರವಸೆ ಮೂಡಿಸಿ ಮತ್ತೆ ಕೈಕೊಟ್ಟ ಮಳೆ | ಮೂರೇ ದಿನಕ್ಕೆ ಕೆಆರ್‌ಎಸ್ ಒಳಹರಿವಿನಲ್ಲಿ ತೀವ್ರ ಕುಸಿತ

October 6, 2023
4:50 PM
KRS Damನ 11,800 ಕ್ಯೂಸೆಕ್‍ನಿಂದ 4,046 ಕ್ಯೂಸೆಕ್‍ಗೆ ಒಳಹರಿವು ಇಳಿಕೆಯಾಗಿದ್ದು, ಇದರಿಂದ ಮತ್ತೆ ಮಂಡ್ಯ ಜಿಲ್ಲೆಯ ಅನ್ನದಾತರು ಸೇರಿದಂತೆ ಕಾವೇರಿ ನೀರು ಆಶ್ರಯಿಸಿದ ಜನರಿಗೆ ತೀವ್ರ ಆಘಾತ ಉಂಟಾಗಿದೆ. ಒಳಹರಿವು ಹೆಚ್ಚಳದಿಂದ ಕೆಆರ್‌ಎಸ್‌ಗೆ 3 ಟಿಎಂಸಿ ನೀರು ಹರಿದು ಬಂದಿತ್ತು. ಸದ್ಯ ಡ್ಯಾಂ 101.80 ಅಡಿ ಭರ್ತಿಯಾಗಿದೆ.

ಕಳೆದ ವಾರ ಕೊಂಚ ಮಟ್ಟಿಗೆ ಮಳೆ ಸುರಿಯವ ಲಕ್ಷಣ ಕಂಡುಬಂದಿತ್ತು. ಕೆಲವೆಡೆ ಮಳೆಯೂ ಅಗಿ ಸ್ವಲ್ಪ ಮಟ್ಟಿಗೆ ಕೆಆರ್ ಎಸ್ ಗೆ ನೀರು ಹರಿದು ಬಂದಿತ್ತು. ಆದರೆ ಮಳೆ ನಿರೀಕ್ಷೆಯಲ್ಲಿದ್ದ ಹಳೆ ಮೈಸೂರು ಭಾಗದ ಜನರಿಗೆ ಮತ್ತೆ ನಿರಾಸೆ ಉಂಟಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ನಿಂತ ಹಿನ್ನೆಲೆ ಮೂರೇ ದಿನಕ್ಕೆ ಕೆಆರ್‍ಎಸ್ ಡ್ಯಾಂಗೆ ಒಳಹರಿವು ತೀವ್ರ ಪ್ರಮಾಣದಲ್ಲಿ ಕಡಿಮೆಯಾಗಿದೆ. ಈ ಮೂಲಕ ಡ್ಯಾಂಗೆ ಹರಿದು ಬರುತ್ತಿದ್ದ ನೀರಿನ ಪ್ರಮಾಣ ಗಣನೀಯ ಇಳಿಕೆ ಕಂಡಿದೆ.

Advertisement
11,800 ಕ್ಯೂಸೆಕ್‍ನಿಂದ 4,046 ಕ್ಯೂಸೆಕ್‍ಗೆ ಒಳಹರಿವು ಇಳಿಕೆಯಾಗಿದ್ದು, ಇದರಿಂದ ಮತ್ತೆ ಮಂಡ್ಯ ಜಿಲ್ಲೆಯ ಅನ್ನದಾತರು ಸೇರಿದಂತೆ ಕಾವೇರಿ ನೀರು ಆಶ್ರಯಿಸಿದ ಜನರಿಗೆ ತೀವ್ರ ಆಘಾತ ಉಂಟಾಗಿದೆ. ಒಳಹರಿವು ಹೆಚ್ಚಳದಿಂದ ಕೆಆರ್‌ಎಸ್‌ಗೆ 3 ಟಿಎಂಸಿ ನೀರು ಹರಿದು ಬಂದಿತ್ತು. ಸದ್ಯ ಡ್ಯಾಂ 101.80 ಅಡಿ ಭರ್ತಿಯಾಗಿದೆ.

ಒಂದು ವೇಳೆ ಮಳೆ ಮುಂದುವರೆದರೆ ಬೆಳೆ ಜೊತೆಗೆ ಕುಡಿಯುವ ನೀರಿನ ಸಮಸ್ಯೆ ದೂರಾಗುವ ನಿರೀಕ್ಷೆ ಜನರಲ್ಲಿತ್ತು. ಆದರೆ ಮೂರೇ ದಿನಕ್ಕೆ ಮಳೆರಾಯ ಕೈಕೊಟ್ಟಿದ್ದಾನೆ. ಇಂದರಿಂದ ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಕಾವೇರಿ ವಿವಾದ ಮುಂದುವರೆಯುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ.

Advertisement

ಮತ್ತೊಂದೆಡೆ ರಾಜ್ಯ ಸರ್ಕಾರ ಹಾಗೂ ಕಾವೇರಿ ಪ್ರಾಧಿಕಾರದ ವಿರುದ್ಧ ಮಂಡ್ಯದಲ್ಲಿ ಪ್ರತಿಭಟನೆಗಳು ಇಂದು ಸಹ ಮುಂದುವರಿದಿವೆ. 32ನೇ ದಿನಕ್ಕೆ ರೈತ ಹಿತರಕ್ಷಣಾ ಸಮಿತಿಯ ಸತ್ಯಾಗ್ರಹ ಕಾಲಿಟ್ಟಿದೆ. ಇಂದಿನ ಧರಣಿಯಲ್ಲಿ ಪತ್ರಕರ್ತರು ಭಾಗಿಯಾಗಿ ಸರ್ಕಾರದ ಮೇಲೆ ಒತ್ತಡ ಹಾಕಲಿದ್ದಾರೆ. ಕನ್ನಡ ಸೇನೆಯಿಂದಲೂ ಸಂಜಯ ಸರ್ಕಲ್‍ನಿಂದ ವಿಶ್ವೇಶ್ವರಯ್ಯ ಪ್ರತಿಮೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಅತ್ತ ಶ್ರೀರಂಗಪಟ್ಟಣದಲ್ಲೂ ಸಹ ಭೂಮಿ ತಾಯಿ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

– ಅಂತರ್ಜಾಲ ಮಾಹಿತಿ

 

Advertisement

Advertisement
Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆಯ ವೈರಲ್‌ ರೋಗಗಳಿಗೆ ಸೂಕ್ತ ಪರಿಹಾರಕ್ಕೆ ಚಿಂತನೆ | ಅಡಿಕೆ ಹಾನಿಕಾರಕವಲ್ಲ- ತಕ್ಷಣ ವರದಿಗೆ ಸೂಚನೆ | ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ |
August 21, 2025
11:13 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ 13,644 ಕೆರೆಗಳ ಒತ್ತುವರಿ | ಈ ಪೈಕಿ 7,986 ಕೆರೆಗಳ ಒತ್ತುವರಿ ತೆರವು
August 21, 2025
10:01 PM
by: The Rural Mirror ಸುದ್ದಿಜಾಲ
ಅಂತರ್ಜಲ ವಿನಿಮಯ, ನಿಯಂತ್ರಣ ತಿದ್ದುಪಡಿ ವಿಧೇಯಕ | ವಿಧಾನಪರಿಷತ್ ನಲ್ಲಿ ಅಂಗೀಕಾರ | ಬೋರ್ ವೆಲ್ ಕೊರೆಯಲು ಇನ್ನು ಅನುಮತಿ ಬೇಕು |
August 21, 2025
9:58 PM
by: The Rural Mirror ಸುದ್ದಿಜಾಲ
ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆ | ಹವಾಮಾನ ಇಲಾಖೆ ಎಚ್ಚರಿಕೆ
August 21, 2025
9:11 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group