Advertisement
MIRROR FOCUS

#KRSDam | ಕೊಂಚ ಭರವಸೆ ಮೂಡಿಸಿ ಮತ್ತೆ ಕೈಕೊಟ್ಟ ಮಳೆ | ಮೂರೇ ದಿನಕ್ಕೆ ಕೆಆರ್‌ಎಸ್ ಒಳಹರಿವಿನಲ್ಲಿ ತೀವ್ರ ಕುಸಿತ

Share

ಕಳೆದ ವಾರ ಕೊಂಚ ಮಟ್ಟಿಗೆ ಮಳೆ ಸುರಿಯವ ಲಕ್ಷಣ ಕಂಡುಬಂದಿತ್ತು. ಕೆಲವೆಡೆ ಮಳೆಯೂ ಅಗಿ ಸ್ವಲ್ಪ ಮಟ್ಟಿಗೆ ಕೆಆರ್ ಎಸ್ ಗೆ ನೀರು ಹರಿದು ಬಂದಿತ್ತು. ಆದರೆ ಮಳೆ ನಿರೀಕ್ಷೆಯಲ್ಲಿದ್ದ ಹಳೆ ಮೈಸೂರು ಭಾಗದ ಜನರಿಗೆ ಮತ್ತೆ ನಿರಾಸೆ ಉಂಟಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ನಿಂತ ಹಿನ್ನೆಲೆ ಮೂರೇ ದಿನಕ್ಕೆ ಕೆಆರ್‍ಎಸ್ ಡ್ಯಾಂಗೆ ಒಳಹರಿವು ತೀವ್ರ ಪ್ರಮಾಣದಲ್ಲಿ ಕಡಿಮೆಯಾಗಿದೆ. ಈ ಮೂಲಕ ಡ್ಯಾಂಗೆ ಹರಿದು ಬರುತ್ತಿದ್ದ ನೀರಿನ ಪ್ರಮಾಣ ಗಣನೀಯ ಇಳಿಕೆ ಕಂಡಿದೆ.

Advertisement
Advertisement
Advertisement
Advertisement
11,800 ಕ್ಯೂಸೆಕ್‍ನಿಂದ 4,046 ಕ್ಯೂಸೆಕ್‍ಗೆ ಒಳಹರಿವು ಇಳಿಕೆಯಾಗಿದ್ದು, ಇದರಿಂದ ಮತ್ತೆ ಮಂಡ್ಯ ಜಿಲ್ಲೆಯ ಅನ್ನದಾತರು ಸೇರಿದಂತೆ ಕಾವೇರಿ ನೀರು ಆಶ್ರಯಿಸಿದ ಜನರಿಗೆ ತೀವ್ರ ಆಘಾತ ಉಂಟಾಗಿದೆ. ಒಳಹರಿವು ಹೆಚ್ಚಳದಿಂದ ಕೆಆರ್‌ಎಸ್‌ಗೆ 3 ಟಿಎಂಸಿ ನೀರು ಹರಿದು ಬಂದಿತ್ತು. ಸದ್ಯ ಡ್ಯಾಂ 101.80 ಅಡಿ ಭರ್ತಿಯಾಗಿದೆ.

ಒಂದು ವೇಳೆ ಮಳೆ ಮುಂದುವರೆದರೆ ಬೆಳೆ ಜೊತೆಗೆ ಕುಡಿಯುವ ನೀರಿನ ಸಮಸ್ಯೆ ದೂರಾಗುವ ನಿರೀಕ್ಷೆ ಜನರಲ್ಲಿತ್ತು. ಆದರೆ ಮೂರೇ ದಿನಕ್ಕೆ ಮಳೆರಾಯ ಕೈಕೊಟ್ಟಿದ್ದಾನೆ. ಇಂದರಿಂದ ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಕಾವೇರಿ ವಿವಾದ ಮುಂದುವರೆಯುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ.

Advertisement

ಮತ್ತೊಂದೆಡೆ ರಾಜ್ಯ ಸರ್ಕಾರ ಹಾಗೂ ಕಾವೇರಿ ಪ್ರಾಧಿಕಾರದ ವಿರುದ್ಧ ಮಂಡ್ಯದಲ್ಲಿ ಪ್ರತಿಭಟನೆಗಳು ಇಂದು ಸಹ ಮುಂದುವರಿದಿವೆ. 32ನೇ ದಿನಕ್ಕೆ ರೈತ ಹಿತರಕ್ಷಣಾ ಸಮಿತಿಯ ಸತ್ಯಾಗ್ರಹ ಕಾಲಿಟ್ಟಿದೆ. ಇಂದಿನ ಧರಣಿಯಲ್ಲಿ ಪತ್ರಕರ್ತರು ಭಾಗಿಯಾಗಿ ಸರ್ಕಾರದ ಮೇಲೆ ಒತ್ತಡ ಹಾಕಲಿದ್ದಾರೆ. ಕನ್ನಡ ಸೇನೆಯಿಂದಲೂ ಸಂಜಯ ಸರ್ಕಲ್‍ನಿಂದ ವಿಶ್ವೇಶ್ವರಯ್ಯ ಪ್ರತಿಮೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಅತ್ತ ಶ್ರೀರಂಗಪಟ್ಟಣದಲ್ಲೂ ಸಹ ಭೂಮಿ ತಾಯಿ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

– ಅಂತರ್ಜಾಲ ಮಾಹಿತಿ

Advertisement

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

17 mins ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago