MIRROR FOCUS

#KRSDam | ಕೊಂಚ ಭರವಸೆ ಮೂಡಿಸಿ ಮತ್ತೆ ಕೈಕೊಟ್ಟ ಮಳೆ | ಮೂರೇ ದಿನಕ್ಕೆ ಕೆಆರ್‌ಎಸ್ ಒಳಹರಿವಿನಲ್ಲಿ ತೀವ್ರ ಕುಸಿತ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ವಾರ ಕೊಂಚ ಮಟ್ಟಿಗೆ ಮಳೆ ಸುರಿಯವ ಲಕ್ಷಣ ಕಂಡುಬಂದಿತ್ತು. ಕೆಲವೆಡೆ ಮಳೆಯೂ ಅಗಿ ಸ್ವಲ್ಪ ಮಟ್ಟಿಗೆ ಕೆಆರ್ ಎಸ್ ಗೆ ನೀರು ಹರಿದು ಬಂದಿತ್ತು. ಆದರೆ ಮಳೆ ನಿರೀಕ್ಷೆಯಲ್ಲಿದ್ದ ಹಳೆ ಮೈಸೂರು ಭಾಗದ ಜನರಿಗೆ ಮತ್ತೆ ನಿರಾಸೆ ಉಂಟಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ನಿಂತ ಹಿನ್ನೆಲೆ ಮೂರೇ ದಿನಕ್ಕೆ ಕೆಆರ್‍ಎಸ್ ಡ್ಯಾಂಗೆ ಒಳಹರಿವು ತೀವ್ರ ಪ್ರಮಾಣದಲ್ಲಿ ಕಡಿಮೆಯಾಗಿದೆ. ಈ ಮೂಲಕ ಡ್ಯಾಂಗೆ ಹರಿದು ಬರುತ್ತಿದ್ದ ನೀರಿನ ಪ್ರಮಾಣ ಗಣನೀಯ ಇಳಿಕೆ ಕಂಡಿದೆ.

Advertisement
11,800 ಕ್ಯೂಸೆಕ್‍ನಿಂದ 4,046 ಕ್ಯೂಸೆಕ್‍ಗೆ ಒಳಹರಿವು ಇಳಿಕೆಯಾಗಿದ್ದು, ಇದರಿಂದ ಮತ್ತೆ ಮಂಡ್ಯ ಜಿಲ್ಲೆಯ ಅನ್ನದಾತರು ಸೇರಿದಂತೆ ಕಾವೇರಿ ನೀರು ಆಶ್ರಯಿಸಿದ ಜನರಿಗೆ ತೀವ್ರ ಆಘಾತ ಉಂಟಾಗಿದೆ. ಒಳಹರಿವು ಹೆಚ್ಚಳದಿಂದ ಕೆಆರ್‌ಎಸ್‌ಗೆ 3 ಟಿಎಂಸಿ ನೀರು ಹರಿದು ಬಂದಿತ್ತು. ಸದ್ಯ ಡ್ಯಾಂ 101.80 ಅಡಿ ಭರ್ತಿಯಾಗಿದೆ.

ಒಂದು ವೇಳೆ ಮಳೆ ಮುಂದುವರೆದರೆ ಬೆಳೆ ಜೊತೆಗೆ ಕುಡಿಯುವ ನೀರಿನ ಸಮಸ್ಯೆ ದೂರಾಗುವ ನಿರೀಕ್ಷೆ ಜನರಲ್ಲಿತ್ತು. ಆದರೆ ಮೂರೇ ದಿನಕ್ಕೆ ಮಳೆರಾಯ ಕೈಕೊಟ್ಟಿದ್ದಾನೆ. ಇಂದರಿಂದ ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಕಾವೇರಿ ವಿವಾದ ಮುಂದುವರೆಯುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ.

ಮತ್ತೊಂದೆಡೆ ರಾಜ್ಯ ಸರ್ಕಾರ ಹಾಗೂ ಕಾವೇರಿ ಪ್ರಾಧಿಕಾರದ ವಿರುದ್ಧ ಮಂಡ್ಯದಲ್ಲಿ ಪ್ರತಿಭಟನೆಗಳು ಇಂದು ಸಹ ಮುಂದುವರಿದಿವೆ. 32ನೇ ದಿನಕ್ಕೆ ರೈತ ಹಿತರಕ್ಷಣಾ ಸಮಿತಿಯ ಸತ್ಯಾಗ್ರಹ ಕಾಲಿಟ್ಟಿದೆ. ಇಂದಿನ ಧರಣಿಯಲ್ಲಿ ಪತ್ರಕರ್ತರು ಭಾಗಿಯಾಗಿ ಸರ್ಕಾರದ ಮೇಲೆ ಒತ್ತಡ ಹಾಕಲಿದ್ದಾರೆ. ಕನ್ನಡ ಸೇನೆಯಿಂದಲೂ ಸಂಜಯ ಸರ್ಕಲ್‍ನಿಂದ ವಿಶ್ವೇಶ್ವರಯ್ಯ ಪ್ರತಿಮೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಅತ್ತ ಶ್ರೀರಂಗಪಟ್ಟಣದಲ್ಲೂ ಸಹ ಭೂಮಿ ತಾಯಿ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

– ಅಂತರ್ಜಾಲ ಮಾಹಿತಿ

 

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಾರ್ವಜನಿಕ ಬದುಕಿನಲ್ಲಿ ನಿರಾಸೆಯ ಸ್ಫೋಟ…

ಸಾರ್ವಜನಿಕ ಬದುಕು ಅಂದರೆ ಹತ್ತಾರು ಜನರೊಡನೆ ಕೂಡಿ ಕೆಲಸ ಮಾಡಬೇಕು.ಈ ಹತ್ತಾರು ಜನ…

13 minutes ago

ಏಪ್ರಿಲ್ 2 ಕೆಲವು ವಿಶೇಷ ರಾಶಿಚಕ್ರ ಚಿಹ್ನೆಗಳಿಗೆ ಶುಭವಾಗಲಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

36 minutes ago

ಭದ್ರ ಜಲಾಶಯದಿಂದ ತುಂಗಭದ್ರಾ ನದಿಗೆ 8 ಸಾವಿರ ಕ್ಯೂಸೆಕ್ ನೀರು | ನದಿಪಾತ್ರದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ

ಹಾವೇರಿ, ಗದಗ, ವಿಜಯನಗರ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ಕುಡಿಯುವ ನೀರಿನ ಯೋಜನೆಗಳಿಗೆ ಹಾಗೂ…

9 hours ago

ಮನ್ರೇಗಾ ಕೂಲಿ ದರ ದಿನಕ್ಕೆ 370 ರೂಪಾಯಿಗೆ ಏರಿಕೆ

ಕೂಲಿ ಕಾರ್ಮಿಕರು ಜೀವನ ನಿರ್ವಹಣೆ ಮಾಡಲು ದೂರದ ನಗರಗಳಿಗೆ ವಲಸೆ ಹೋಗದೆ ಉದ್ಯೋಗ…

9 hours ago

ನಾಳೆಯಿಂದ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಎಚ್ಚರಿಕೆ |

ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕೆಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ…

10 hours ago

15 ದಶಲಕ್ಷ ಮಹಿಳೆಯರಿಗೆ ಸ್ತನ ಕ್ಯಾನ್ಸರ್ ತಪಾಸಣೆ | 200 ಡೇ-ಕೇರ್ ಕ್ಯಾನ್ಸರ್ ಕೇಂದ್ರ ಸ್ಥಾಪನೆ

ಭಾರತದಲ್ಲಿ 1.4 ಮಿಲಿಯನ್ ಹೊಸ ಕ್ಯಾನ್ಸರ್ ಪ್ರಕರಣಗಳು ವರದಿಯಾಗುತ್ತಿವೆ. ಈ ಪೈಕಿ ಸುಮಾರು…

11 hours ago