ಕಳೆದ ವಾರ ಕೊಂಚ ಮಟ್ಟಿಗೆ ಮಳೆ ಸುರಿಯವ ಲಕ್ಷಣ ಕಂಡುಬಂದಿತ್ತು. ಕೆಲವೆಡೆ ಮಳೆಯೂ ಅಗಿ ಸ್ವಲ್ಪ ಮಟ್ಟಿಗೆ ಕೆಆರ್ ಎಸ್ ಗೆ ನೀರು ಹರಿದು ಬಂದಿತ್ತು. ಆದರೆ ಮಳೆ ನಿರೀಕ್ಷೆಯಲ್ಲಿದ್ದ ಹಳೆ ಮೈಸೂರು ಭಾಗದ ಜನರಿಗೆ ಮತ್ತೆ ನಿರಾಸೆ ಉಂಟಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ನಿಂತ ಹಿನ್ನೆಲೆ ಮೂರೇ ದಿನಕ್ಕೆ ಕೆಆರ್ಎಸ್ ಡ್ಯಾಂಗೆ ಒಳಹರಿವು ತೀವ್ರ ಪ್ರಮಾಣದಲ್ಲಿ ಕಡಿಮೆಯಾಗಿದೆ. ಈ ಮೂಲಕ ಡ್ಯಾಂಗೆ ಹರಿದು ಬರುತ್ತಿದ್ದ ನೀರಿನ ಪ್ರಮಾಣ ಗಣನೀಯ ಇಳಿಕೆ ಕಂಡಿದೆ.
ಒಂದು ವೇಳೆ ಮಳೆ ಮುಂದುವರೆದರೆ ಬೆಳೆ ಜೊತೆಗೆ ಕುಡಿಯುವ ನೀರಿನ ಸಮಸ್ಯೆ ದೂರಾಗುವ ನಿರೀಕ್ಷೆ ಜನರಲ್ಲಿತ್ತು. ಆದರೆ ಮೂರೇ ದಿನಕ್ಕೆ ಮಳೆರಾಯ ಕೈಕೊಟ್ಟಿದ್ದಾನೆ. ಇಂದರಿಂದ ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಕಾವೇರಿ ವಿವಾದ ಮುಂದುವರೆಯುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ.
ಮತ್ತೊಂದೆಡೆ ರಾಜ್ಯ ಸರ್ಕಾರ ಹಾಗೂ ಕಾವೇರಿ ಪ್ರಾಧಿಕಾರದ ವಿರುದ್ಧ ಮಂಡ್ಯದಲ್ಲಿ ಪ್ರತಿಭಟನೆಗಳು ಇಂದು ಸಹ ಮುಂದುವರಿದಿವೆ. 32ನೇ ದಿನಕ್ಕೆ ರೈತ ಹಿತರಕ್ಷಣಾ ಸಮಿತಿಯ ಸತ್ಯಾಗ್ರಹ ಕಾಲಿಟ್ಟಿದೆ. ಇಂದಿನ ಧರಣಿಯಲ್ಲಿ ಪತ್ರಕರ್ತರು ಭಾಗಿಯಾಗಿ ಸರ್ಕಾರದ ಮೇಲೆ ಒತ್ತಡ ಹಾಕಲಿದ್ದಾರೆ. ಕನ್ನಡ ಸೇನೆಯಿಂದಲೂ ಸಂಜಯ ಸರ್ಕಲ್ನಿಂದ ವಿಶ್ವೇಶ್ವರಯ್ಯ ಪ್ರತಿಮೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಅತ್ತ ಶ್ರೀರಂಗಪಟ್ಟಣದಲ್ಲೂ ಸಹ ಭೂಮಿ ತಾಯಿ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.
– ಅಂತರ್ಜಾಲ ಮಾಹಿತಿ
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…