Advertisement
MIRROR FOCUS

#KRSDam | ಕೊಂಚ ಭರವಸೆ ಮೂಡಿಸಿ ಮತ್ತೆ ಕೈಕೊಟ್ಟ ಮಳೆ | ಮೂರೇ ದಿನಕ್ಕೆ ಕೆಆರ್‌ಎಸ್ ಒಳಹರಿವಿನಲ್ಲಿ ತೀವ್ರ ಕುಸಿತ

Share

ಕಳೆದ ವಾರ ಕೊಂಚ ಮಟ್ಟಿಗೆ ಮಳೆ ಸುರಿಯವ ಲಕ್ಷಣ ಕಂಡುಬಂದಿತ್ತು. ಕೆಲವೆಡೆ ಮಳೆಯೂ ಅಗಿ ಸ್ವಲ್ಪ ಮಟ್ಟಿಗೆ ಕೆಆರ್ ಎಸ್ ಗೆ ನೀರು ಹರಿದು ಬಂದಿತ್ತು. ಆದರೆ ಮಳೆ ನಿರೀಕ್ಷೆಯಲ್ಲಿದ್ದ ಹಳೆ ಮೈಸೂರು ಭಾಗದ ಜನರಿಗೆ ಮತ್ತೆ ನಿರಾಸೆ ಉಂಟಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ನಿಂತ ಹಿನ್ನೆಲೆ ಮೂರೇ ದಿನಕ್ಕೆ ಕೆಆರ್‍ಎಸ್ ಡ್ಯಾಂಗೆ ಒಳಹರಿವು ತೀವ್ರ ಪ್ರಮಾಣದಲ್ಲಿ ಕಡಿಮೆಯಾಗಿದೆ. ಈ ಮೂಲಕ ಡ್ಯಾಂಗೆ ಹರಿದು ಬರುತ್ತಿದ್ದ ನೀರಿನ ಪ್ರಮಾಣ ಗಣನೀಯ ಇಳಿಕೆ ಕಂಡಿದೆ.

11,800 ಕ್ಯೂಸೆಕ್‍ನಿಂದ 4,046 ಕ್ಯೂಸೆಕ್‍ಗೆ ಒಳಹರಿವು ಇಳಿಕೆಯಾಗಿದ್ದು, ಇದರಿಂದ ಮತ್ತೆ ಮಂಡ್ಯ ಜಿಲ್ಲೆಯ ಅನ್ನದಾತರು ಸೇರಿದಂತೆ ಕಾವೇರಿ ನೀರು ಆಶ್ರಯಿಸಿದ ಜನರಿಗೆ ತೀವ್ರ ಆಘಾತ ಉಂಟಾಗಿದೆ. ಒಳಹರಿವು ಹೆಚ್ಚಳದಿಂದ ಕೆಆರ್‌ಎಸ್‌ಗೆ 3 ಟಿಎಂಸಿ ನೀರು ಹರಿದು ಬಂದಿತ್ತು. ಸದ್ಯ ಡ್ಯಾಂ 101.80 ಅಡಿ ಭರ್ತಿಯಾಗಿದೆ.

ಒಂದು ವೇಳೆ ಮಳೆ ಮುಂದುವರೆದರೆ ಬೆಳೆ ಜೊತೆಗೆ ಕುಡಿಯುವ ನೀರಿನ ಸಮಸ್ಯೆ ದೂರಾಗುವ ನಿರೀಕ್ಷೆ ಜನರಲ್ಲಿತ್ತು. ಆದರೆ ಮೂರೇ ದಿನಕ್ಕೆ ಮಳೆರಾಯ ಕೈಕೊಟ್ಟಿದ್ದಾನೆ. ಇಂದರಿಂದ ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಕಾವೇರಿ ವಿವಾದ ಮುಂದುವರೆಯುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ.

ಮತ್ತೊಂದೆಡೆ ರಾಜ್ಯ ಸರ್ಕಾರ ಹಾಗೂ ಕಾವೇರಿ ಪ್ರಾಧಿಕಾರದ ವಿರುದ್ಧ ಮಂಡ್ಯದಲ್ಲಿ ಪ್ರತಿಭಟನೆಗಳು ಇಂದು ಸಹ ಮುಂದುವರಿದಿವೆ. 32ನೇ ದಿನಕ್ಕೆ ರೈತ ಹಿತರಕ್ಷಣಾ ಸಮಿತಿಯ ಸತ್ಯಾಗ್ರಹ ಕಾಲಿಟ್ಟಿದೆ. ಇಂದಿನ ಧರಣಿಯಲ್ಲಿ ಪತ್ರಕರ್ತರು ಭಾಗಿಯಾಗಿ ಸರ್ಕಾರದ ಮೇಲೆ ಒತ್ತಡ ಹಾಕಲಿದ್ದಾರೆ. ಕನ್ನಡ ಸೇನೆಯಿಂದಲೂ ಸಂಜಯ ಸರ್ಕಲ್‍ನಿಂದ ವಿಶ್ವೇಶ್ವರಯ್ಯ ಪ್ರತಿಮೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಅತ್ತ ಶ್ರೀರಂಗಪಟ್ಟಣದಲ್ಲೂ ಸಹ ಭೂಮಿ ತಾಯಿ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

– ಅಂತರ್ಜಾಲ ಮಾಹಿತಿ

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

4 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

10 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

18 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

22 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago