Advertisement
MIRROR FOCUS

#KRSDam | ಕೊಂಚ ಭರವಸೆ ಮೂಡಿಸಿ ಮತ್ತೆ ಕೈಕೊಟ್ಟ ಮಳೆ | ಮೂರೇ ದಿನಕ್ಕೆ ಕೆಆರ್‌ಎಸ್ ಒಳಹರಿವಿನಲ್ಲಿ ತೀವ್ರ ಕುಸಿತ

Share

ಕಳೆದ ವಾರ ಕೊಂಚ ಮಟ್ಟಿಗೆ ಮಳೆ ಸುರಿಯವ ಲಕ್ಷಣ ಕಂಡುಬಂದಿತ್ತು. ಕೆಲವೆಡೆ ಮಳೆಯೂ ಅಗಿ ಸ್ವಲ್ಪ ಮಟ್ಟಿಗೆ ಕೆಆರ್ ಎಸ್ ಗೆ ನೀರು ಹರಿದು ಬಂದಿತ್ತು. ಆದರೆ ಮಳೆ ನಿರೀಕ್ಷೆಯಲ್ಲಿದ್ದ ಹಳೆ ಮೈಸೂರು ಭಾಗದ ಜನರಿಗೆ ಮತ್ತೆ ನಿರಾಸೆ ಉಂಟಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ನಿಂತ ಹಿನ್ನೆಲೆ ಮೂರೇ ದಿನಕ್ಕೆ ಕೆಆರ್‍ಎಸ್ ಡ್ಯಾಂಗೆ ಒಳಹರಿವು ತೀವ್ರ ಪ್ರಮಾಣದಲ್ಲಿ ಕಡಿಮೆಯಾಗಿದೆ. ಈ ಮೂಲಕ ಡ್ಯಾಂಗೆ ಹರಿದು ಬರುತ್ತಿದ್ದ ನೀರಿನ ಪ್ರಮಾಣ ಗಣನೀಯ ಇಳಿಕೆ ಕಂಡಿದೆ.

11,800 ಕ್ಯೂಸೆಕ್‍ನಿಂದ 4,046 ಕ್ಯೂಸೆಕ್‍ಗೆ ಒಳಹರಿವು ಇಳಿಕೆಯಾಗಿದ್ದು, ಇದರಿಂದ ಮತ್ತೆ ಮಂಡ್ಯ ಜಿಲ್ಲೆಯ ಅನ್ನದಾತರು ಸೇರಿದಂತೆ ಕಾವೇರಿ ನೀರು ಆಶ್ರಯಿಸಿದ ಜನರಿಗೆ ತೀವ್ರ ಆಘಾತ ಉಂಟಾಗಿದೆ. ಒಳಹರಿವು ಹೆಚ್ಚಳದಿಂದ ಕೆಆರ್‌ಎಸ್‌ಗೆ 3 ಟಿಎಂಸಿ ನೀರು ಹರಿದು ಬಂದಿತ್ತು. ಸದ್ಯ ಡ್ಯಾಂ 101.80 ಅಡಿ ಭರ್ತಿಯಾಗಿದೆ.

ಒಂದು ವೇಳೆ ಮಳೆ ಮುಂದುವರೆದರೆ ಬೆಳೆ ಜೊತೆಗೆ ಕುಡಿಯುವ ನೀರಿನ ಸಮಸ್ಯೆ ದೂರಾಗುವ ನಿರೀಕ್ಷೆ ಜನರಲ್ಲಿತ್ತು. ಆದರೆ ಮೂರೇ ದಿನಕ್ಕೆ ಮಳೆರಾಯ ಕೈಕೊಟ್ಟಿದ್ದಾನೆ. ಇಂದರಿಂದ ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಕಾವೇರಿ ವಿವಾದ ಮುಂದುವರೆಯುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ.

ಮತ್ತೊಂದೆಡೆ ರಾಜ್ಯ ಸರ್ಕಾರ ಹಾಗೂ ಕಾವೇರಿ ಪ್ರಾಧಿಕಾರದ ವಿರುದ್ಧ ಮಂಡ್ಯದಲ್ಲಿ ಪ್ರತಿಭಟನೆಗಳು ಇಂದು ಸಹ ಮುಂದುವರಿದಿವೆ. 32ನೇ ದಿನಕ್ಕೆ ರೈತ ಹಿತರಕ್ಷಣಾ ಸಮಿತಿಯ ಸತ್ಯಾಗ್ರಹ ಕಾಲಿಟ್ಟಿದೆ. ಇಂದಿನ ಧರಣಿಯಲ್ಲಿ ಪತ್ರಕರ್ತರು ಭಾಗಿಯಾಗಿ ಸರ್ಕಾರದ ಮೇಲೆ ಒತ್ತಡ ಹಾಕಲಿದ್ದಾರೆ. ಕನ್ನಡ ಸೇನೆಯಿಂದಲೂ ಸಂಜಯ ಸರ್ಕಲ್‍ನಿಂದ ವಿಶ್ವೇಶ್ವರಯ್ಯ ಪ್ರತಿಮೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಅತ್ತ ಶ್ರೀರಂಗಪಟ್ಟಣದಲ್ಲೂ ಸಹ ಭೂಮಿ ತಾಯಿ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

– ಅಂತರ್ಜಾಲ ಮಾಹಿತಿ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

3 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

12 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

12 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

17 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

17 hours ago