#PriceHike | ಟೊಮೆಟೋ ಬಳಿಕ ಗೃಹಿಣಿಯರಿಗೆ ಶ್ರಾವಣ ಮಾಸದಲ್ಲೇ ಈರುಳ್ಳಿ-ಬೆಳ್ಳುಳ್ಳಿ ಬೆಲೆ ಏರಿಕೆ ಶಾಕ್ | ಮತ್ತೆ ಗ್ರಾಹಕರ ಜೇಬಿಗೆ ಕತ್ತರಿ

August 15, 2023
11:01 AM
ಮಾರ್ಕೆಟ್​ನಲ್ಲಿ ಈರುಳ್ಳಿ ಹಾಗೂ ಬೆಳ್ಳುಳ್ಳಿ ಬೆಲೆ ದುಬಾರಿಯಾಗ್ತಿದೆ. ಮಾರ್ಕೆಟ್​ನಲ್ಲಿ ವಾರದ ಹಿಂದೆ 25 ರೂ. ಇದ್ದ ಕೆಜಿ ಈರುಳ್ಳಿ, ಈಗ 30 ರಿಂದ 40 ರೂ. ಆಗಿದೆ. ಇನ್ನು 80 ರಿಂದ 100 ರೂಪಾಯಿ ಇದ್ದ ಬೆಳ್ಳುಳ್ಳಿ, 200 ರೂ.ಗೆ ಏರಿಕೆಯಾಗಿದ್ದು, ಶ್ರಾವಣ ಮಾಸದ ಆರಂಭದಲ್ಲಿ ಗ್ರಾಹಕರನ್ನ ಕಂಗಾಲಾಗಿಸಿದೆ.

ತರಕಾರಿ ಬೆಲೆ ಏರಿಗೆ ಅನ್ನೋದು ಹಾವು ಏಣಿ ಆಟ ಇದ್ದಂತೆ. ಇಷ್ಟು ದಿನ ಟೊಮೆಟೋ ಗ್ರಾಹಕರ ಜೇಬಿಗೆ ಕತ್ತರಿ ಹಾಕಿದ್ರೆ, ಅದು ಕೊಂಚ ಇಳಿಕೆ ಹಾದಿ ಹಿಡಿದಿದೆ. ಈಗ ಈರುಳ್ಳಿ, ಬೆಳ್ಳುಳ್ಳಿಯ ಸರದಿ. ಇನ್ನೇನು ಸಾಲು ಸಾಲು ಹಬ್ಬಗಳು ಆರಂಭವಾಗುತ್ತವೆ. ಈ ಸಂಧರ್ಭದಲ್ಲಿ ಈ ರೀತಿ ಬೆಲೆ ಏರಿದರೆ ಹೇಗೆ ಎಂದು ಗೃಹಣಿಯರು ಬೇಸರಿಸಿಕೊಂಡಿದ್ದಾರೆ. ಮುಂದಿನ ದಿನದಲ್ಲಿ ಈರುಳ್ಳಿ ಕೆಜಿಗೆ 50 ರಿಂದ 60 ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದೆಯಂತೆ.

ಟೊಮ್ಯಾಟೋ ತಲೆನೋವು ಇನ್ನೂ ತಣ್ಣಗಾಗಿಲ್ಲ.. ಟೊಮೆಟೋ ಬೆಲೆ ಪೂರ್ತಿಯಾಗಿ ಇಳಿದಿಲ್ಲ.. ಆಗಲೇ ಮತ್ತೆರಡು ತರಕಾರಿಗಳು ಜನರ ಜೇಬಿಗೆ ಕತ್ತರಿ ಹಾಕೋಕೆ ರೆಡಿ ಆಗಿವೆ. ದುಬಾರಿ ದುನಿಯಾದ ಬಿರುಗಾಳಿಗೆ ಬೆಂಗಳೂರಿಗರು ಮತ್ತೊಮ್ಮೆ ಸಿಲುಕುವ ಎಲ್ಲಾ ಲಕ್ಷಣಗಳು ಕಾಣ್ತಿವೆ. ಅದರ ಎಫೆಕ್ಟ್‌ ಉಳಿದ ಜಿಲ್ಲೆ, ತಾಲೂಕುಗಳಿಗೂ ತಟ್ಟುತ್ತದೆ.  ಮಳೆ ಎಫೆಕ್ಟ್​ನಿಂದಾಗಿ ಕಳೆದ ಮೂರು ತಿಂಗಳಿನಿಂದ ಟೊಮ್ಯಾಟೋ ಸೆಂಚುರಿ, ಡಬಲ್​ ಸೆಂಚುರಿ ಬಾರಿಸಿದ್ದು ಉಂಟು.  ಆದ್ರೀಗ ಟೊಮೆಟೋ ಬೆಲೆ ದಿನ ದಿನಕ್ಕೂ ಇಳಿಕೆಯಾಗ್ತಿದೆ. ಜನರು ಕೊಂಚ ನಿಟ್ಟುಸಿರು ಬಿಡ್ತಿದ್ದಾರೆ.

ಹೀಗಿರುವಾಗ ಮಾರ್ಕೆಟ್​ನಲ್ಲಿ ಈರುಳ್ಳಿ ಹಾಗೂ ಬೆಳ್ಳುಳ್ಳಿ ಬೆಲೆ ದುಬಾರಿಯಾಗ್ತಿದೆ.. ಬೆಂಗಳೂರಿನ ಕೆ.ಆರ್​ ಮಾರ್ಕೆಟ್​ನಲ್ಲಿ ವಾರದ ಹಿಂದೆ 25 ರೂ. ಇದ್ದ ಕೆಜಿ ಈರುಳ್ಳಿ, ಈಗ 30 ರಿಂದ 40 ರೂ. ಆಗಿದೆ. ಇನ್ನು 80 ರಿಂದ 100 ರೂಪಾಯಿ ಇದ್ದ ಬೆಳ್ಳುಳ್ಳಿ, 200 ರೂ.ಗೆ ಏರಿಕೆಯಾಗಿದ್ದು, ಶ್ರಾವಣ ಮಾಸದ ಆರಂಭದಲ್ಲಿ ಗ್ರಾಹಕರನ್ನ ಕಂಗಾಲಾಗಿಸಿದೆ. ಬೆಲೆ ಏರಿಕೆಗೆ ಬೇಸರ ವ್ಯಕ್ತಪಡಿಸಿದ ಮಹಿಳೆಯರು, ತರಕಾರಿ ಬೆಲೆಗಳು ಕಡಿಮೆ ಇದ್ರೆ ಜನರಿಗೆ ಅನುಕೂಲ.. ಸರ್ಕಾರ ಈ ಬಗ್ಗೆ ಎಚ್ಚೆತ್ತುಕೊಳ್ಳಲಿ ಅಂತ ಮನವಿ ಮಾಡ್ತಿದ್ದಾರೆ.

#OnionPrices | ಕಣ್ಣಿರು ಸುರಿಯೋದು ಪಕ್ಕಾ | ಟೊಮೆಟೊ ನಂತರ ಈಗ ಈರುಳ್ಳಿ ಬೆಲೆ ಶೀಘ್ರದಲ್ಲೇ ಏರಿಕೆ ಸಾಧ್ಯತೆ…! | ಕಾರಣ ಏನು ?

ಇನ್ನು ಮುಂಗಾರು ಕೈಕೊಟ್ಟಿದ್ರಿಂದ ಚಿತ್ರದುರ್ಗ, ದಾವಣಗೆರೆ ಸೇರಿ ಇತರೆ ಕಡೆಯಿಂದ ಈರುಳ್ಳಿ ಲಭ್ಯವಾಗುತ್ತಿಲ್ಲ. ಸದ್ಯ ರಾಜ್ಯದಲ್ಲಿ ಸುಮಾರು 4,000 ಹೆಕ್ಟೇರ್‌ನಲ್ಲಿ ಈರುಳ್ಳಿ ಬೆಳೆ ಕೊರತೆ ಇದೆ. ಮಳೆ ವಿಳಂಬ ಆಗಿರೋದ್ರಿಂದ ಈರುಳ್ಳಿ ಕೊಯ್ಲು 6 ರಿಂದ 8 ವಾರಗಳ ಕಾಲ ವಿಳಂಬ ಆಗ್ತಿದೆ. ಮಹಾರಾಷ್ಟ್ರದ ನಾಸಿಕ್​ನಲ್ಲಿಯೂ ಇದೇ ಸಮಸ್ಯೆ ಇದೆ.. ಹೀಗಾಗಿ ಈರುಳ್ಳಿ ಕೊರತೆಯಿದ್ದು, ಈರುಳ್ಳಿಗೆ ದಿನ ದಿನಕ್ಕೂ ಡಿಮ್ಯಾಂಡ್​ ಹೆಚ್ಚಾಗ್ತಿದೆ. ಮುಂದಿನ ದಿನದಲ್ಲಿ ಈರುಳ್ಳಿ ಕೆಜಿಗೆ 50 ರಿಂದ 60 ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದ್ಯಂತೆ. ದುಬಾರಿ ದುನಿಯಾದ ಸಂಕೋಲೆಯಲ್ಲಿ ಸಿಲುಕಿರುವ ಸಿಲಿಕಾನ್​ ಸಿಟಿ ಜನರಿಗೆ ದರ ಹೊರೆ, ಬರೆ ಎಳೆಯುತ್ತಿರೋದಂತೂ ಸುಳ್ಳಲ್ಲ.

(Source :  Agencies )

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ
ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ
August 4, 2026
9:14 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror