ಪ್ರಮುಖ

#PriceHike | ಟೊಮೆಟೋ ಬಳಿಕ ಗೃಹಿಣಿಯರಿಗೆ ಶ್ರಾವಣ ಮಾಸದಲ್ಲೇ ಈರುಳ್ಳಿ-ಬೆಳ್ಳುಳ್ಳಿ ಬೆಲೆ ಏರಿಕೆ ಶಾಕ್ | ಮತ್ತೆ ಗ್ರಾಹಕರ ಜೇಬಿಗೆ ಕತ್ತರಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ತರಕಾರಿ ಬೆಲೆ ಏರಿಗೆ ಅನ್ನೋದು ಹಾವು ಏಣಿ ಆಟ ಇದ್ದಂತೆ. ಇಷ್ಟು ದಿನ ಟೊಮೆಟೋ ಗ್ರಾಹಕರ ಜೇಬಿಗೆ ಕತ್ತರಿ ಹಾಕಿದ್ರೆ, ಅದು ಕೊಂಚ ಇಳಿಕೆ ಹಾದಿ ಹಿಡಿದಿದೆ. ಈಗ ಈರುಳ್ಳಿ, ಬೆಳ್ಳುಳ್ಳಿಯ ಸರದಿ. ಇನ್ನೇನು ಸಾಲು ಸಾಲು ಹಬ್ಬಗಳು ಆರಂಭವಾಗುತ್ತವೆ. ಈ ಸಂಧರ್ಭದಲ್ಲಿ ಈ ರೀತಿ ಬೆಲೆ ಏರಿದರೆ ಹೇಗೆ ಎಂದು ಗೃಹಣಿಯರು ಬೇಸರಿಸಿಕೊಂಡಿದ್ದಾರೆ. ಮುಂದಿನ ದಿನದಲ್ಲಿ ಈರುಳ್ಳಿ ಕೆಜಿಗೆ 50 ರಿಂದ 60 ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದೆಯಂತೆ.

Advertisement

ಟೊಮ್ಯಾಟೋ ತಲೆನೋವು ಇನ್ನೂ ತಣ್ಣಗಾಗಿಲ್ಲ.. ಟೊಮೆಟೋ ಬೆಲೆ ಪೂರ್ತಿಯಾಗಿ ಇಳಿದಿಲ್ಲ.. ಆಗಲೇ ಮತ್ತೆರಡು ತರಕಾರಿಗಳು ಜನರ ಜೇಬಿಗೆ ಕತ್ತರಿ ಹಾಕೋಕೆ ರೆಡಿ ಆಗಿವೆ. ದುಬಾರಿ ದುನಿಯಾದ ಬಿರುಗಾಳಿಗೆ ಬೆಂಗಳೂರಿಗರು ಮತ್ತೊಮ್ಮೆ ಸಿಲುಕುವ ಎಲ್ಲಾ ಲಕ್ಷಣಗಳು ಕಾಣ್ತಿವೆ. ಅದರ ಎಫೆಕ್ಟ್‌ ಉಳಿದ ಜಿಲ್ಲೆ, ತಾಲೂಕುಗಳಿಗೂ ತಟ್ಟುತ್ತದೆ.  ಮಳೆ ಎಫೆಕ್ಟ್​ನಿಂದಾಗಿ ಕಳೆದ ಮೂರು ತಿಂಗಳಿನಿಂದ ಟೊಮ್ಯಾಟೋ ಸೆಂಚುರಿ, ಡಬಲ್​ ಸೆಂಚುರಿ ಬಾರಿಸಿದ್ದು ಉಂಟು.  ಆದ್ರೀಗ ಟೊಮೆಟೋ ಬೆಲೆ ದಿನ ದಿನಕ್ಕೂ ಇಳಿಕೆಯಾಗ್ತಿದೆ. ಜನರು ಕೊಂಚ ನಿಟ್ಟುಸಿರು ಬಿಡ್ತಿದ್ದಾರೆ.

ಹೀಗಿರುವಾಗ ಮಾರ್ಕೆಟ್​ನಲ್ಲಿ ಈರುಳ್ಳಿ ಹಾಗೂ ಬೆಳ್ಳುಳ್ಳಿ ಬೆಲೆ ದುಬಾರಿಯಾಗ್ತಿದೆ.. ಬೆಂಗಳೂರಿನ ಕೆ.ಆರ್​ ಮಾರ್ಕೆಟ್​ನಲ್ಲಿ ವಾರದ ಹಿಂದೆ 25 ರೂ. ಇದ್ದ ಕೆಜಿ ಈರುಳ್ಳಿ, ಈಗ 30 ರಿಂದ 40 ರೂ. ಆಗಿದೆ. ಇನ್ನು 80 ರಿಂದ 100 ರೂಪಾಯಿ ಇದ್ದ ಬೆಳ್ಳುಳ್ಳಿ, 200 ರೂ.ಗೆ ಏರಿಕೆಯಾಗಿದ್ದು, ಶ್ರಾವಣ ಮಾಸದ ಆರಂಭದಲ್ಲಿ ಗ್ರಾಹಕರನ್ನ ಕಂಗಾಲಾಗಿಸಿದೆ. ಬೆಲೆ ಏರಿಕೆಗೆ ಬೇಸರ ವ್ಯಕ್ತಪಡಿಸಿದ ಮಹಿಳೆಯರು, ತರಕಾರಿ ಬೆಲೆಗಳು ಕಡಿಮೆ ಇದ್ರೆ ಜನರಿಗೆ ಅನುಕೂಲ.. ಸರ್ಕಾರ ಈ ಬಗ್ಗೆ ಎಚ್ಚೆತ್ತುಕೊಳ್ಳಲಿ ಅಂತ ಮನವಿ ಮಾಡ್ತಿದ್ದಾರೆ.

#OnionPrices | ಕಣ್ಣಿರು ಸುರಿಯೋದು ಪಕ್ಕಾ | ಟೊಮೆಟೊ ನಂತರ ಈಗ ಈರುಳ್ಳಿ ಬೆಲೆ ಶೀಘ್ರದಲ್ಲೇ ಏರಿಕೆ ಸಾಧ್ಯತೆ…! | ಕಾರಣ ಏನು ?

ಇನ್ನು ಮುಂಗಾರು ಕೈಕೊಟ್ಟಿದ್ರಿಂದ ಚಿತ್ರದುರ್ಗ, ದಾವಣಗೆರೆ ಸೇರಿ ಇತರೆ ಕಡೆಯಿಂದ ಈರುಳ್ಳಿ ಲಭ್ಯವಾಗುತ್ತಿಲ್ಲ. ಸದ್ಯ ರಾಜ್ಯದಲ್ಲಿ ಸುಮಾರು 4,000 ಹೆಕ್ಟೇರ್‌ನಲ್ಲಿ ಈರುಳ್ಳಿ ಬೆಳೆ ಕೊರತೆ ಇದೆ. ಮಳೆ ವಿಳಂಬ ಆಗಿರೋದ್ರಿಂದ ಈರುಳ್ಳಿ ಕೊಯ್ಲು 6 ರಿಂದ 8 ವಾರಗಳ ಕಾಲ ವಿಳಂಬ ಆಗ್ತಿದೆ. ಮಹಾರಾಷ್ಟ್ರದ ನಾಸಿಕ್​ನಲ್ಲಿಯೂ ಇದೇ ಸಮಸ್ಯೆ ಇದೆ.. ಹೀಗಾಗಿ ಈರುಳ್ಳಿ ಕೊರತೆಯಿದ್ದು, ಈರುಳ್ಳಿಗೆ ದಿನ ದಿನಕ್ಕೂ ಡಿಮ್ಯಾಂಡ್​ ಹೆಚ್ಚಾಗ್ತಿದೆ. ಮುಂದಿನ ದಿನದಲ್ಲಿ ಈರುಳ್ಳಿ ಕೆಜಿಗೆ 50 ರಿಂದ 60 ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದ್ಯಂತೆ. ದುಬಾರಿ ದುನಿಯಾದ ಸಂಕೋಲೆಯಲ್ಲಿ ಸಿಲುಕಿರುವ ಸಿಲಿಕಾನ್​ ಸಿಟಿ ಜನರಿಗೆ ದರ ಹೊರೆ, ಬರೆ ಎಳೆಯುತ್ತಿರೋದಂತೂ ಸುಳ್ಳಲ್ಲ.

(Source :  Agencies )

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಷ್ಟ್ರೀಯ ಭದ್ರತೆ | ಪ್ರಧಾನಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ | ಹಲವು ವಿಷಯಗಳ ಕುರಿತು ಚರ್ಚೆ

ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ಎಲ್ಲಾ…

6 hours ago

ರಾಜ್ಯದ 6 ಜಿಲ್ಲೆಗಳಲ್ಲಿ ಶೀಥಲೀಕರಣ ಘಟಕ ನಿರ್ಮಾಣ

ರಾಜ್ಯದ 6 ಜಿಲ್ಲೆಗಳಲ್ಲಿ ತೋಟಗಾರಿಕಾ ಬೆಳೆಗಳಿಗೆ ಅನುಕೂಲವಾಗುವಂತೆ ಶೀಥಲೀಕರಣ ಘಟಕಗಳನ್ನು ನಿರ್ಮಿಸಲಾಗುತ್ತಿದೆ ಎಂದು…

6 hours ago

ಕೇಂದ್ರದ ಬೆಂಬಲಕ್ಕಾಗಿ  ವಿಶೇಷ ಜಾಥಾ | ಪಕ್ಷಾತೀತವಾಗಿ  ಬೆಂಬಲ

ದೇಶದ  ಸೈನಿಕರಿಗೆ ಗೌರವ ಸಲ್ಲಿಸಿ  ಕೇಂದ್ರ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ  ನಾಳೆ…

6 hours ago

ಆಪರೇಷನ್ ಸಿಂದೂರ ಕಾರ್ಯಾಚರಣೆ | ಸರ್ವ ಪಕ್ಷಗಳ ಸಭೆಯಲ್ಲಿ ಬೆಂಬಲ |

ಪಹಲ್ಗಾಮ್ ದಾಳಿಗೆ ಪ್ರತ್ಯುತ್ತರವಾಗಿ ಭಾರತವು ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಿನ್ನೆಯಷ್ಟೇ ನಡೆಸಿತು. ಇದಕ್ಕೆ…

6 hours ago

ಕೃಷಿಕರ ಪರವಾದ ಬರಹಗಾರರ ಮುಂದಿರುವ ಸವಾಲುಗಳು

ಕೃಷಿಯಲ್ಲಿ ಯಾವುದೇ ಬಲವಾದ ಸಂಘಟನೆ ಇಲ್ಲ. ನಮ್ಮ ಧ್ವನಿ ಎತ್ತಲು ಯಾರೂ ಇಲ್ಲ.ಇಂತಹ…

19 hours ago

ಮೇ 13 ರಿಂದ 25 ರವರೆಗೆ ಈ ರಾಶಿಗಳಿಗೆ ಅದೃಷ್ಟ!, ಕೆಲವು ರಾಶಿಗಳಿಗೆ ಕಠಿಣ ಕಾಲ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದು ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

20 hours ago