Advertisement
MIRROR FOCUS

#AdityaL1Mission | ಚಂದ್ರನ ಭೇಟಿ ಮಾಡಿದ ಇಸ್ರೋ ಈಗ ಸೂರ್ಯನ ಸರದಿ | ಸೆ.2 ರಿಂದ ಆದಿತ್ಯ ಎಲ್​ 1 ಮಿಷನ್ ಆರಂಭ |

Share

 ಇಸ್ರೋ #ISRO ಸದಾ ಒಂದಲ್ಲ ಒಂದು ಸಾಹಸಕ್ಕೆ ಕೈ ಹಾಕುತ್ತಲೇ ಇರುತ್ತದೆ. ಇದೀಗ ಮೂನ್ ಮಿಷನ್ #moonmission ಅಡಿಯಲ್ಲಿ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ #ISRO  ಚಂದ್ರಯಾನ – 3 #chandrayana 3 ಅನ್ನು ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿಸುವ ಮೂಲಕ ಇತಿಹಾಸವನ್ನು ಸೃಷ್ಟಿಸಿತು. ಇದಾದ ಬಳಿಕ ಮಿಷನ್ ಸನ್ #missionsun ಅಡಿಯಲ್ಲಿ ಸೂರ್ಯನನ್ನು ತಲುಪಲು ಇಸ್ರೋ ಸಿದ್ಧತೆ ನಡೆಸಿದೆ. ಕೊರೋನಾ ನಂತರ ಇಸ್ರೋ ತನ್ನ ಕಾರ್ಯ ಚಟುವಟಿಕೆಯನ್ನು ಹೆಚ್ಚಿಸಿಕೊಂಡಿದೆ.

ಸೆಪ್ಟೆಂಬರ್ 2 ರಂದು, ಇಸ್ರೋ ಆದಿತ್ಯ-ಎಲ್1 #Aditya-L1 ಅನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ಶಾರ್  ಶ್ರೀಹರಿಕೋಟಾದಿಂದ PSLV ರಾಕೆಟ್ ಮೂಲಕ ಉಡಾವಣೆ ಮಾಡಲಿದೆ. ಇಸ್ರೋದ ಆದಿತ್ಯ ಎಲ್1 ಮಿಷನ್ ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಅತ್ಯಂತ ಕಷ್ಟಕರವಾದ ಮಿಷನ್ ಆಗಿದೆ. ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್ ಕೂಡ ಇತ್ತೀಚೆಗೆ ಭಾರತವು ಸೂರ್ಯನ ಮೇಲೆ ತಯಾರಿ ನಡೆಸುತ್ತಿದೆ ಎಂದು ಹೇಳಿದ್ದರು. ಕಳೆದ ಕೆಲವು ತಿಂಗಳುಗಳಿಂದ, ಬಾಹ್ಯಾಕಾಶ ಸಂಸ್ಥೆಯ ಗಮನವು ಚಂದ್ರಯಾನ -3 ಮೇಲೆ ಇತ್ತು. ಇಸ್ರೋ ಮುಂದಿನ ತಿಂಗಳುಗಳಲ್ಲಿ ಇತರ ಯೋಜನೆಗಳಲ್ಲಿ ಕೆಲಸ ಮಾಡುತ್ತಿದೆ. ಮಿಷನ್ ಮೂನ್ ನಂತರ ಈ ಕಾರ್ಯಾಚರಣೆಗಳನ್ನು ಪ್ರಾರಂಭಿಸಲಾಗುವುದು.

ಮಿಷನ್ ಮೂನ್‌ನ ಐತಿಹಾಸಿಕ ಯಶಸ್ಸಿನ ನಂತರ, ಭಾರತವು ಮುಂದಿನ ಮೂರು ತಿಂಗಳಲ್ಲಿ ಆದಿತ್ಯ ಎಲ್ 1 ಮತ್ತು ಗಗಯಾನ್ ಸೇರಿದಂತೆ ಹಲವಾರು ಪ್ರಮುಖ ಮಿಷನ್‌ಗಳನ್ನು ಪ್ರಾರಂಭಿಸಲಿದೆ ಎಂದು ಎಸ್ ಸೋಮನಾಥ್ ಹೇಳಿದರು.

ಆದಿತ್ಯ L1 ಮಿಷನ್ ಎಂದರೇನು?ಆದಿತ್ಯ L1 ಬಗ್ಗೆ ಮಾಹಿತಿ ನೀಡಿದ ಇಸ್ರೋ ಮುಖ್ಯಸ್ಥರು, ಇದು ಸೂರ್ಯನನ್ನು ಅಧ್ಯಯನ ಮಾಡುವ ಭಾರತದ ಮೊದಲ ಸೌರ ಮಿಷನ್ ಆಗಿದೆ. ಸೆಪ್ಟೆಂಬರ್ ಆರಂಭದಲ್ಲಿ ಈ ಬಾಹ್ಯಾಕಾಶ ನೌಕೆಯನ್ನು ಉಡಾವಣೆ ಮಾಡಲು ಸಿದ್ಧತೆಗಳು ನಡೆಯುತ್ತಿವೆ. ಯೋಜನೆಯನ್ನು ಜೋಡಿಸಿ ಶ್ರೀಹರಿಕೋಟಾ ಉಡಾವಣಾ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ISRO ಪ್ರಕಾರ, ಆದಿತ್ಯ L1 ಬಾಹ್ಯಾಕಾಶ ನೌಕೆಯು ಏಳು ರೀತಿಯ ವೈಜ್ಞಾನಿಕ ಪೇಲೋಡ್‌ಗಳನ್ನು ಹೊಂದಿರುತ್ತದೆ.ಅವು ಸೂರ್ಯನನ್ನು ವಿವಿಧ ರೀತಿಯಲ್ಲಿ ಅಧ್ಯಯನ ಮಾಡುತ್ತವೆ. ಈ ವಾಹನವು ಸುಮಾರು 5 ವರ್ಷಗಳ ಕಾಲ ಸೂರ್ಯನನ್ನು ಅಧ್ಯಯನ ಮಾಡುತ್ತವೆ.ಆದಿತ್ಯ-ಎಲ್ 1 ಎಂದು ಕರೆಯಲ್ಪಡುವ ಇದು ಭಾರತೀಯ ಬಾಹ್ಯಾಕಾಶ ನೌಕೆಯು ಭೂಮಿಯಿಂದ ಅತ್ಯಂತ ದೂರದಲ್ಲಿರುತ್ತದೆ.  ಅದನ್ನು 1.5 ಮಿಲಿಯನ್ ಕಿಲೋಮೀಟರ್ ದೂರದಲ್ಲಿ ಲ್ಯಾಂಗ್ರೇಂಜಿಯನ್ ಪಾಯಿಂಟ್ 1 ಎಂದು ಕರೆಯಲಾಗುವ ವಾಂಟೇಜ್ ಪಾಯಿಂಟ್‌ನಲ್ಲಿ ಇರಿಸಲಾಗುತ್ತದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

10 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

15 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

1 day ago