ಪ್ರಮುಖ

#Agriculture | ಮಲೆನಾಡಲ್ಲಿ ಅಗರ್‌ವುಡ್‌ ಕಟಾವು-ಸಂಸ್ಕರಣೆಗೆ ಆರಂಭ | ಅಡಿಕೆಯ ಉಪಬೆಳೆಯಾಗಿ ಆದಾಯ ತರಬಹುದೇ…?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಗರ್‌ವುಡ್‌ ಅನೇಕ ವರ್ಷಗಳಿಂದ ಕೃಷಿಕರ ವಲಯದಲ್ಲಿ ಚರ್ಚೆಯಾಗುತ್ತಿತ್ತು. ಅದರ ಆದಾಯ ಹೇಗೆ? ಕೃಷಿ ಸವಾಲುಗಳು ಏನು? ಕಟಾವು ಹೇಗೆ ? ಇತ್ಯಾದಿಗಳ ಬಗ್ಗೆ ಮಾತುಕತೆಗಳಾಗುತ್ತಿದ್ದವು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಅಗರ್‌ವುಡ್‌ ಕಟಾವು ಮಾಡಿ ಸಂಸ್ಕರಣೆಯ ಹಂತ ನಡೆಯುತ್ತಿದೆ. ಕೆಲವು ರೈತರಿಗೆ ಆದಾಯ ಲಭ್ಯವಾಗಿದೆ. ನಿರೀಕ್ಷಿತ ಮಟ್ಟದಲ್ಲಿ ಇಲ್ಲವಾದರೂ ಅಡಿಕೆಯ ಉಪಬೆಳೆಯಾಗಿ ಉತ್ತಮವಾದ ಆದಾಯ ಎನ್ನುವುದು  ಕೃಷಿಕರ ಅಭಿಪ್ರಾಯ.

Advertisement
Advertisement

ದಕ್ಷಿಣ ಕನ್ನಡ ಸೇರಿದಂತೆ ಮಲೆನಾಡು ಭಾಗಗಳಲ್ಲಿ ಭತ್ತದ ನಂತರ ವಾಣಿಜ್ಯ ಬೆಳೆಯಾಗಿ ಅಡಿಕೆ ಸ್ಥಾನ ಪಡೆದುಕೊಂಡಿದೆ. ಇದರ ಜೊತೆಗೆ ಉಪಬೆಳೆಯಾಗಿ ಅಗರ್‌ವುಡ್‌ ನೆಡಬಹುದು ಎನ್ನುವ ಸಲಹೆ ಇತ್ತು. ಆದರೆ ಹಲವು ಉಪಬೆಳೆಗಳಲ್ಲಿ ಕೈಸುಟ್ಟುಕೊಂಡ ಕೃಷಿಕರು ಸಂದೇಹದಿಂದಲೇ ನೋಡುತ್ತಿದ್ದರು. ಕೆಲವು ವರ್ಷದ ಹಿಂದೆ ಉಪಬೆಳೆಯಾಗಿ ನೆಟ್ಟಿದ್ದ ಅಗರ್‌ ಗಿಡಗಳನ್ನು ಭವಿಷ್ಯ ಇಲ್ಲ ಎಂದು ಕಡಿದು ಹಾಕಿದ ಕೃಷಿಕರೂ ಇದ್ದಾರೆ.

ಇದೀಗ ಅಡಿಕೆ ಹಳದಿ ಎಲೆರೋಗ, ಎಲೆ ಚುಕ್ಕಿ ರೋಗ ಸೇರಿದಂತೆ ಹಲವು ರೋಗಗಳು ಅಡಿಕೆಯನ್ನು ಕಾಡುತ್ತಿದೆ. ಈ ಸಂದರ್ಭದಲ್ಲಿ ಉಪಬೆಳೆಗಳು ಹೆಚ್ಚಿನ ಆದಾಯ ತರುವಂತಾದರೆ ಕೃಷಿಕರು ನೆಮ್ಮದಿಯ ಬದುಕು ಸಾಗಿಸಲು ಸಾಧ್ಯವಿದೆ. ಹೀಗಾಗಿ ಈಗ ಅಗರ್‌ವುಡ್‌ ಕೂಡಾ ಉಪಬೆಳೆಯಾದರೂ ಅದರ ಮಾರುಕಟ್ಟೆ, ಮರ ಸಾಯಿಸುವ ಪ್ರಕ್ರಿಯೆ ಇದೆಲ್ಲವೂ ದೂರದ ಮಾತಾಗಿತ್ತು. ಇದೀಗ ಮಲೆನಾಡು ಭಾಗಗಳಲ್ಲಿಯೇ ಈ ಪ್ರಕ್ರಿಯೆ ಆರಂಭಗೊಂಡಿದೆ. ಪ್ರಾಯೋಗಿಕ ಹಂತದಲ್ಲಿರುವುದರಿಂದ ತಾಂತ್ರಿಕ ಅಂಶಗಳೊಂದಿಗೆ ಬೆಳವಣಿಗೆ ಕಾಣುತ್ತಿದೆ. ಸುಳ್ಯ ತಾಲೂಕಿನ ಪಂಜದಲ್ಲಿ ಕೃಷಿಕ ತೀರ್ಥಾನಂದ ಕೊಡೆಂಕಿರಿ ಅವರು ಅಗರ್‌ ಸಂಸ್ಕರಣೆಯ ಕಡೆಗೆ ಗಮನ ನೀಡುತ್ತಿದ್ದಾರೆ. ಅದರ ಜೊತೆಗೆ ಇನ್ನೋಕ್ಯುಲೇಷನ್ ಬಗ್ಗೆಯೂ ಕೃಷಿಕರಿಗೆ ನೆರವಾಗುತ್ತಿದ್ದಾರೆ. ಅಸ್ಸಾಂನಿಂದ ನುರಿತ ಕಾರ್ಮಿಕರು ಆಗಮಿಸಿದ್ದು, ಅಗರ್‌ ಸಂಗ್ರಹದ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಅಗರ್ ವುಡ್ ಅಂತ ಕರೆಸಿಕೊಳ್ಳುವ ಮರ ಜಗತ್ತಿನಾದ್ಯಂತ ಅತ್ಯಂತ ಹೆಚ್ಚಿನ ಬೇಡಿಕೆಯಿರುವ ಔಧ್ ಎಂಬ ಸುವಾಸನಾ ದ್ರವ್ಯಕ್ಕೆ ಬಳಕೆಯಾಗುತ್ತದೆ. ಮಳೆಕಾಡುಗಳಲ್ಲಿ ಬೆಳೆಯುವ ಈ ಮರದಲ್ಲಿ ಸುಮಾರು ಹದಿನೇಳು ಉಪಜಾತಿಗಳಿವೆ.ಈ ಮರಗಳಿಗೆ ಒಂದು ರೀತಿಯ ಶಿಲೀಂದ್ರ  ಸೋಂಕು ಉಂಟಾಗಿ ಈ ಮರಗಳ ತಿರುಳಿನ ಭಾಗದಲ್ಲಿ ದಟ್ಟ ಕಂದು – ಕಪ್ಪು ಬಣ್ಣದ ಅಂಟು ಸ್ರವಿಸುತ್ತದೆ ಮತ್ತು ಕೆಲ ವರ್ಷಗಳಲ್ಲಿ ಮರದ ತಿರುಳು ಗಟ್ಟಿಯಾಗಿ ಕಡು ಕಂದುಬಣ್ಣಕ್ಕೆ ತಿರುಗುತ್ತದೆ. ಇದು ಅತ್ಯಂತ ಸುವಾಸನಾಯುಕ್ತವಾಗಿದ್ದು ಇದನ್ನು ಉರಿಸಿದರೆ ಆಹ್ಲಾದಕರವಾದ ಪರಿಮಳ ಬರುತ್ತದೆ. ಇದರಿಂದ ತೈಲವನ್ನೂ ತಯಾರಿಸಲಾಗುತ್ತದೆ. ಹಾಗಾಗಿ ಇದಕ್ಕೆ ಜಾಗತಿಕವಾಗಿ ಬಹಳಷ್ಟು ಬೇಡಿಕೆ ಮತ್ತು ಬಹಳ ಬೆಲೆಯೂ ಇದೆ. ಹೆಚ್ಚಾಗಿ ಯುರೋಪ್ ಮತ್ತು ಅರಬ್ ದೇಶಗಳಲ್ಲಿ ಇದಕ್ಕೆ ಬೇಡಿಕೆ ಹೆಚ್ಚು. ಸುಗಂಧ ದ್ರವ್ಯ ತಯಾರಿಕಾ ಕೈಗಾರಿಕೆಗಳೂ ಇದನ್ನು ಬಳಸಿಕೊಂಡು ಅತ್ಯುಕೃಷ್ಟವಾದ ಸುಗಂಧವನ್ನು ತಯಾರಿಸುತ್ತದೆ.  ಹೀಗಾಗಿ ಅಗರ್ ವುಡ್ ಗೆ ಜಾಗತಿಕವಾಗಿ ಒಳ್ಳೆಯ ಬೇಡಿಕೆ ಮತ್ತು ಬೆಲೆ ಎರಡೂ ಇದೆ.

Advertisement

ಸಾಮಾನ್ಯವಾಗಿ ಮಳೆಕಾಡುಗಳಲ್ಲಿ ಈ ಮರಗಳಿಗೆ ಒಂದು ನಿರ್ದಿಷ್ಟ ಶಿಲೀಂಧ್ರ ಸೋಂಕು ಉಂಟಾಗಿ ಆ ಮರದ ತಿರುಳಿನಲ್ಲಿ ಅಗರ್ ವುಡ್ ಉತ್ಪತ್ತಿಯಾಗುತ್ತದೆ. ಆದರೆ ಇಲ್ಲಿ ಬೆಳೆಯುವ ಮರಗಳಿಗೆ ಶಿಲೀಂಧ್ರವನ್ನು ಇಂಜೆಕ್ಷನ್ ಮೂಲಕ ಚುಚ್ಚಿ ಕೃತಕವಾಗಿ ಸೋಂಕಿಗೊಳಪಡಿಸಲಾಗುತ್ತದೆ. ಹೀಗೆ ಶಿಲೀಂದ್ರ ಸೋಂಕಿಗೊಳಗಾದ ಮರಗಳ ತಿರುಳಿನಲ್ಲಿ ಆ ವಿಶಿಷ್ಟ ಪರಿಮಳದ ಅಂಟು ಉತ್ಪತ್ತಿಯಾಗಿ ಕೆಲ ವರ್ಷಗಳಲ್ಲಿ ಅದು ತಿರುಳಿನ ತುಂಬಾ ವ್ಯಾಪಿಸಿ ಗಟ್ಟಿಯಾಗುತ್ತದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಹಾಳೆತಟ್ಟೆಯ ಬಳಿಕ ಈಗ ಮಾವಿನಹಣ್ಣು | ಭಾರತದ 15 ಮಾವಿನ ಹಣ್ಣು ಶಿಪ್‌ಮೆಂಟ್‌ಗಳನ್ನು ತಿರಸ್ಕರಿಸಿದ ಅಮೇರಿಕಾ |

ಕಳೆದ ವಾರ ಅಡಿಕೆ ಹಾಳೆತಟ್ಟೆಯನ್ನು ಅಮೇರಿಕಾ ರಫ್ತು ಮಾಡಿತ್ತು, ಅದಾಗಿ ಈಗ ಮಾವಿನಹಣ್ಣು…

8 minutes ago

ದೀಪ ಹಚ್ಚುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ . 9535156490

44 minutes ago

ಮಳೆ ಸುದ್ದಿ ಏನು ? | ನಾಳೆಯೂ ರೆಡ್‌ ಎಲರ್ಟ್‌ ಎಲ್ಲಿ..?

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿನ್ನೆ ಸಂಜೆಯಿಂದ ಧಾರಾಕಾರ ಮಳೆಯಾಗುತ್ತಿದ,  ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.…

10 hours ago

ಸಿಂಧು ಜಲ ಒಪ್ಪಂದ ಅಮಾನತು – ದೇಶದ ಹಲವು ರಾಜ್ಯಗಳ ರೈತರಿಗೆ ಅನುಕೂಲ

ಸಿಂಧು ಜಲ ಒಪ್ಪಂದದ ಅಮಾನತ್ತಿನಿಂದ ಜಮ್ಮು ಮತ್ತು ಕಾಶ್ಮೀರ, ರಾಜಸ್ತಾನ, ಹರಿಯಾಣ, ಪಂಜಾಬ್…

12 hours ago

ಕಾಡಿನಲ್ಲಿ ಶೇಖರಿಸಿದ್ದ ಅಡಿಕೆ ವಶ | 327 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌ |

ಅಸ್ಸಾಂ ರೈಫಲ್ಸ್, ಕಸ್ಟಮ್ಸ್ ಪ್ರಿವೆಂಟಿವ್ ಫೋರ್ಸ್, ಚಂಫೈ ಅವರ ಸಹಯೋಗದೊಂದಿಗೆ ಮಿಜೋರಾಂನ ಚಂಫೈ…

16 hours ago

ಬೆಂಗಳೂರಿನಲ್ಲಿ ಭಾರಿ ಮಳೆ | ಬೆಂಗಳೂರು ಮಹಾನಗರ ಪಾಲಿಕೆ, SDRFನಿಂದ ರಕ್ಷಣಾ ಕಾರ್ಯ

ರಾಜಧಾನಿ ಬೆಂಗಳೂರು ಸೇರಿದಂತೆ  ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನರು ಹೈರಾಣರಾಗಿದ್ದು,  ಬೃಹತ್ ಬೆಂಗಳೂರು…

16 hours ago