Advertisement
ಪ್ರಮುಖ

#Agriculture | ಮಲೆನಾಡಲ್ಲಿ ಅಗರ್‌ವುಡ್‌ ಕಟಾವು-ಸಂಸ್ಕರಣೆಗೆ ಆರಂಭ | ಅಡಿಕೆಯ ಉಪಬೆಳೆಯಾಗಿ ಆದಾಯ ತರಬಹುದೇ…?

Share

ಅಗರ್‌ವುಡ್‌ ಅನೇಕ ವರ್ಷಗಳಿಂದ ಕೃಷಿಕರ ವಲಯದಲ್ಲಿ ಚರ್ಚೆಯಾಗುತ್ತಿತ್ತು. ಅದರ ಆದಾಯ ಹೇಗೆ? ಕೃಷಿ ಸವಾಲುಗಳು ಏನು? ಕಟಾವು ಹೇಗೆ ? ಇತ್ಯಾದಿಗಳ ಬಗ್ಗೆ ಮಾತುಕತೆಗಳಾಗುತ್ತಿದ್ದವು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಅಗರ್‌ವುಡ್‌ ಕಟಾವು ಮಾಡಿ ಸಂಸ್ಕರಣೆಯ ಹಂತ ನಡೆಯುತ್ತಿದೆ. ಕೆಲವು ರೈತರಿಗೆ ಆದಾಯ ಲಭ್ಯವಾಗಿದೆ. ನಿರೀಕ್ಷಿತ ಮಟ್ಟದಲ್ಲಿ ಇಲ್ಲವಾದರೂ ಅಡಿಕೆಯ ಉಪಬೆಳೆಯಾಗಿ ಉತ್ತಮವಾದ ಆದಾಯ ಎನ್ನುವುದು  ಕೃಷಿಕರ ಅಭಿಪ್ರಾಯ.

Advertisement
Advertisement

ದಕ್ಷಿಣ ಕನ್ನಡ ಸೇರಿದಂತೆ ಮಲೆನಾಡು ಭಾಗಗಳಲ್ಲಿ ಭತ್ತದ ನಂತರ ವಾಣಿಜ್ಯ ಬೆಳೆಯಾಗಿ ಅಡಿಕೆ ಸ್ಥಾನ ಪಡೆದುಕೊಂಡಿದೆ. ಇದರ ಜೊತೆಗೆ ಉಪಬೆಳೆಯಾಗಿ ಅಗರ್‌ವುಡ್‌ ನೆಡಬಹುದು ಎನ್ನುವ ಸಲಹೆ ಇತ್ತು. ಆದರೆ ಹಲವು ಉಪಬೆಳೆಗಳಲ್ಲಿ ಕೈಸುಟ್ಟುಕೊಂಡ ಕೃಷಿಕರು ಸಂದೇಹದಿಂದಲೇ ನೋಡುತ್ತಿದ್ದರು. ಕೆಲವು ವರ್ಷದ ಹಿಂದೆ ಉಪಬೆಳೆಯಾಗಿ ನೆಟ್ಟಿದ್ದ ಅಗರ್‌ ಗಿಡಗಳನ್ನು ಭವಿಷ್ಯ ಇಲ್ಲ ಎಂದು ಕಡಿದು ಹಾಕಿದ ಕೃಷಿಕರೂ ಇದ್ದಾರೆ.

Advertisement

ಇದೀಗ ಅಡಿಕೆ ಹಳದಿ ಎಲೆರೋಗ, ಎಲೆ ಚುಕ್ಕಿ ರೋಗ ಸೇರಿದಂತೆ ಹಲವು ರೋಗಗಳು ಅಡಿಕೆಯನ್ನು ಕಾಡುತ್ತಿದೆ. ಈ ಸಂದರ್ಭದಲ್ಲಿ ಉಪಬೆಳೆಗಳು ಹೆಚ್ಚಿನ ಆದಾಯ ತರುವಂತಾದರೆ ಕೃಷಿಕರು ನೆಮ್ಮದಿಯ ಬದುಕು ಸಾಗಿಸಲು ಸಾಧ್ಯವಿದೆ. ಹೀಗಾಗಿ ಈಗ ಅಗರ್‌ವುಡ್‌ ಕೂಡಾ ಉಪಬೆಳೆಯಾದರೂ ಅದರ ಮಾರುಕಟ್ಟೆ, ಮರ ಸಾಯಿಸುವ ಪ್ರಕ್ರಿಯೆ ಇದೆಲ್ಲವೂ ದೂರದ ಮಾತಾಗಿತ್ತು. ಇದೀಗ ಮಲೆನಾಡು ಭಾಗಗಳಲ್ಲಿಯೇ ಈ ಪ್ರಕ್ರಿಯೆ ಆರಂಭಗೊಂಡಿದೆ. ಪ್ರಾಯೋಗಿಕ ಹಂತದಲ್ಲಿರುವುದರಿಂದ ತಾಂತ್ರಿಕ ಅಂಶಗಳೊಂದಿಗೆ ಬೆಳವಣಿಗೆ ಕಾಣುತ್ತಿದೆ. ಸುಳ್ಯ ತಾಲೂಕಿನ ಪಂಜದಲ್ಲಿ ಕೃಷಿಕ ತೀರ್ಥಾನಂದ ಕೊಡೆಂಕಿರಿ ಅವರು ಅಗರ್‌ ಸಂಸ್ಕರಣೆಯ ಕಡೆಗೆ ಗಮನ ನೀಡುತ್ತಿದ್ದಾರೆ. ಅದರ ಜೊತೆಗೆ ಇನ್ನೋಕ್ಯುಲೇಷನ್ ಬಗ್ಗೆಯೂ ಕೃಷಿಕರಿಗೆ ನೆರವಾಗುತ್ತಿದ್ದಾರೆ. ಅಸ್ಸಾಂನಿಂದ ನುರಿತ ಕಾರ್ಮಿಕರು ಆಗಮಿಸಿದ್ದು, ಅಗರ್‌ ಸಂಗ್ರಹದ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

Advertisement

ಅಗರ್ ವುಡ್ ಅಂತ ಕರೆಸಿಕೊಳ್ಳುವ ಮರ ಜಗತ್ತಿನಾದ್ಯಂತ ಅತ್ಯಂತ ಹೆಚ್ಚಿನ ಬೇಡಿಕೆಯಿರುವ ಔಧ್ ಎಂಬ ಸುವಾಸನಾ ದ್ರವ್ಯಕ್ಕೆ ಬಳಕೆಯಾಗುತ್ತದೆ. ಮಳೆಕಾಡುಗಳಲ್ಲಿ ಬೆಳೆಯುವ ಈ ಮರದಲ್ಲಿ ಸುಮಾರು ಹದಿನೇಳು ಉಪಜಾತಿಗಳಿವೆ.ಈ ಮರಗಳಿಗೆ ಒಂದು ರೀತಿಯ ಶಿಲೀಂದ್ರ  ಸೋಂಕು ಉಂಟಾಗಿ ಈ ಮರಗಳ ತಿರುಳಿನ ಭಾಗದಲ್ಲಿ ದಟ್ಟ ಕಂದು – ಕಪ್ಪು ಬಣ್ಣದ ಅಂಟು ಸ್ರವಿಸುತ್ತದೆ ಮತ್ತು ಕೆಲ ವರ್ಷಗಳಲ್ಲಿ ಮರದ ತಿರುಳು ಗಟ್ಟಿಯಾಗಿ ಕಡು ಕಂದುಬಣ್ಣಕ್ಕೆ ತಿರುಗುತ್ತದೆ. ಇದು ಅತ್ಯಂತ ಸುವಾಸನಾಯುಕ್ತವಾಗಿದ್ದು ಇದನ್ನು ಉರಿಸಿದರೆ ಆಹ್ಲಾದಕರವಾದ ಪರಿಮಳ ಬರುತ್ತದೆ. ಇದರಿಂದ ತೈಲವನ್ನೂ ತಯಾರಿಸಲಾಗುತ್ತದೆ. ಹಾಗಾಗಿ ಇದಕ್ಕೆ ಜಾಗತಿಕವಾಗಿ ಬಹಳಷ್ಟು ಬೇಡಿಕೆ ಮತ್ತು ಬಹಳ ಬೆಲೆಯೂ ಇದೆ. ಹೆಚ್ಚಾಗಿ ಯುರೋಪ್ ಮತ್ತು ಅರಬ್ ದೇಶಗಳಲ್ಲಿ ಇದಕ್ಕೆ ಬೇಡಿಕೆ ಹೆಚ್ಚು. ಸುಗಂಧ ದ್ರವ್ಯ ತಯಾರಿಕಾ ಕೈಗಾರಿಕೆಗಳೂ ಇದನ್ನು ಬಳಸಿಕೊಂಡು ಅತ್ಯುಕೃಷ್ಟವಾದ ಸುಗಂಧವನ್ನು ತಯಾರಿಸುತ್ತದೆ.  ಹೀಗಾಗಿ ಅಗರ್ ವುಡ್ ಗೆ ಜಾಗತಿಕವಾಗಿ ಒಳ್ಳೆಯ ಬೇಡಿಕೆ ಮತ್ತು ಬೆಲೆ ಎರಡೂ ಇದೆ.

ಸಾಮಾನ್ಯವಾಗಿ ಮಳೆಕಾಡುಗಳಲ್ಲಿ ಈ ಮರಗಳಿಗೆ ಒಂದು ನಿರ್ದಿಷ್ಟ ಶಿಲೀಂಧ್ರ ಸೋಂಕು ಉಂಟಾಗಿ ಆ ಮರದ ತಿರುಳಿನಲ್ಲಿ ಅಗರ್ ವುಡ್ ಉತ್ಪತ್ತಿಯಾಗುತ್ತದೆ. ಆದರೆ ಇಲ್ಲಿ ಬೆಳೆಯುವ ಮರಗಳಿಗೆ ಶಿಲೀಂಧ್ರವನ್ನು ಇಂಜೆಕ್ಷನ್ ಮೂಲಕ ಚುಚ್ಚಿ ಕೃತಕವಾಗಿ ಸೋಂಕಿಗೊಳಪಡಿಸಲಾಗುತ್ತದೆ. ಹೀಗೆ ಶಿಲೀಂದ್ರ ಸೋಂಕಿಗೊಳಗಾದ ಮರಗಳ ತಿರುಳಿನಲ್ಲಿ ಆ ವಿಶಿಷ್ಟ ಪರಿಮಳದ ಅಂಟು ಉತ್ಪತ್ತಿಯಾಗಿ ಕೆಲ ವರ್ಷಗಳಲ್ಲಿ ಅದು ತಿರುಳಿನ ತುಂಬಾ ವ್ಯಾಪಿಸಿ ಗಟ್ಟಿಯಾಗುತ್ತದೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

3 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

3 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

3 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

3 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

4 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

4 hours ago