Advertisement
ಸುದ್ದಿಗಳು

ಅಗ್ನಿಪಥ ಯೋಜನೆಗೆ ದಿಲ್ಲಿ ಹೈಕೋರ್ಟ್ ಅಸ್ತು | ರಾಷ್ಟ್ರೀಯ ಹಿತಾಸಕ್ತಿಯ ಯೋಜನೆ ಎಂದ ಕೋರ್ಟ್ |

Share

ದೇಶದ ಯುವಕರ ಶಕ್ತಿಯನ್ನು ಬಳಸಿಕೊಂಡು ಸೇನೆಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಆರಂಭಿಸಿದ  ಯೋಜನೆ  ಅಗ್ನಿಪಥ ಯೋಜನೆ. ಈ ಯೋಜನೆ ಜಾರಿಯಾದ ಕೋಡಲೇ ದೇಶದಾದ್ಯಂತ ಭಾರಿ ಪರ ವಿರೋಧ ಚರ್ಚೆಗಳು ನಡೆದವು. ಕೆಲವರು ಇದು ಸರಿಯಾದ ಯೋಜನೆ ಅಂದ್ರೆ ಇದರಿಂದ ಯುವಕರಿಗೆ ಏನು ಲಾಭವಿಲ್ಲ ಎಂದು ವಾದಿಸಿದರು. ಹಾಗಾಗಿ ಅಗ್ನಿವೀರರನ್ನು ನೇಮಕ ಮಾಡಿಕೊಳ್ಳುವ ಕೇಂದ್ರ ಸರಕಾರದ ಅಗ್ನಿಪಥ ಯೋಜನೆಯನ್ನು ಪ್ರಶ್ನಿಸಿ ದಿಲ್ಲಿ ಹೈಕೋರ್ಟ್ ನಲ್ಲಿ ಅರ್ಜಿಯನ್ನು ಸಲ್ಲಿಸಲಾಗಿತ್ತು.  ನ್ಯಾಯಮೂರ್ತಿ ಸತೀಶ್‌ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮಣಿಯಮ್ ಪ್ರಸಾದ್‌ ಅವರಿದ್ದ ವಿಭಾಗೀಯ ಪೀಠವು ಈಗ ಈ ಅರ್ಜಿಯನ್ನು ವಜಾಗೊಳಿಸಿದೆ. ದೇಶದ ಹಿತಸಾಕ್ತಿಯ ದೃಷ್ಟಿಯಿಂದ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ನೇಮಕಾತಿ ಪ್ರಕ್ರಿಯೆಗಳ ಬಗ್ಗೆ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ದಿಲ್ಲಿ ಹೈಕೋರ್ಟ್‌ ಕಳೆದ ವರ್ಷ ಡಿಸೆಂಬರ್‌ನಲ್ಲಿ ತೀರ್ಪು ಕಾಯ್ದಿರಿಸಿತ್ತು. ಸಶಸ್ತ್ರ ಪಡೆಗಳ ನೇಮಕಾತಿ ನಿಯಮಾವಳಿಗಳಿಗೆ ಮಹತ್ವದ ಬದಲಾವಣೆ ತರುವ ಮೂಲಕ 2022ರ ಜೂನ್‌ನಲ್ಲಿ ಅಗ್ನಿಪಥ ಯೋಜನೆಯನ್ನು ಪರಿಚಯಿಸಲಾಯಿತು. ಈ ಯೋಜನೆಯ ಅಡಿಯಲ್ಲಿ 17.5 ವರ್ಷ ವಯಸ್ಸಿನವರಿಂದ 21 ವರ್ಷ ವಯಸ್ಸಿನೊಳಗಿನ 46,000 ಜನರನ್ನು ‘ಅಗ್ನಿವೀರರು’ ಎಂಬ ಹೆಸರಿನಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಭಾರತೀಯ ಸೇನೆಯ ಭೂಸೇನೆ, ವಾಯುಸೇನೆ ಹಾಗೂ ನೌಕಾಪಡೆಗಳಿಗೆ ನಾಲ್ಕು ವರ್ಷದ ಅವಧಿಗೆ ನೇಮಕಾತಿ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ. ಬಳಿಕ ಸರಕಾರವು 2022ನೇ ಸಾಲಿನ ನೇಮಕಾತಿಗೆ ಗರಿಷ್ಠ ವಯೋಮಿತಿಯನ್ನು 23 ವರ್ಷಕ್ಕೆ ವಿಸ್ತರಿಸಿತು. ನಾಲ್ಕು ವರ್ಷದ ಅವಧಿಯ ಸೇವೆ ಮತ್ತು ತರಬೇತಿಯನ್ನು ಪೂರೈಸಿದ ಅಗ್ನಿವೀರರಲ್ಲಿ ಶೇಕಡ 25ರಷ್ಟು ಅಭ್ಯರ್ಥಿಗಳನ್ನು ಮಾತ್ರ ಕಾಯಂ ಹುದ್ದೆಗಳಿಗೆ ನಿಯೋಜಿಸಲಾಗುತ್ತದೆ. ಉಳಿದ ಅಭ್ಯರ್ಥಿಗಳು ಸೇವೆಯಿಂದ ನಿವೃತ್ತಿ ಹೊಂದುತ್ತಾರೆ.

ಕೇಂದ್ರ ಸರಕಾರದಿಂದ ಈ ಯೋಜನೆಯ ಘೋಷಣೆಯಾಗುತ್ತಿದ್ದಂತೆ ದೇಶದ ಹಲವು ಭಾಗಗಳಲ್ಲಿ ಜೋರು ಪ್ರತಿಭಟನೆಗಳು ನಡೆದವು. ಕೆಲವು ಕಡೆ ಪ್ರತಿಭಟನೆಗಳು ಹಿಂಸಾರೂಪಕ್ಕೆ ತಿರುಗಿತು. ಈ ಯೋಜನೆಯಿಂದಾಗಿ ಉದ್ಯೋಗ ಭದ್ರತೆ ಇಲ್ಲದಾಗುತ್ತದೆ ಎಂದು ಚರ್ಚೆಗಳು ನಡೆದವು. ಪಿಂಚಣಿ ವ್ಯವಸ್ಥೆ ಇರುವುದಿಲ್ಲ ಹಾಗೂ ಸಾಮಾಜಿಕ ಭದ್ರತೆಯ ಅನುಕೂಲಗಳು ಇರುವುದಿಲ್ಲ, ನಾಲ್ಕು ವರ್ಷಗಳ ಬಳಿಕ ಅಗ್ನಿವೀರರು ನಿರುದ್ಯೋಗಿಗಳಾಗುತ್ತಾರೆ ಎಂದು ಉದ್ಯೋಗಾಕಾಂಕ್ಷಿಗಳ ಗುಂಪು ಆರೋಪಿಸಿತ್ತು.

ಕೈಗಾರಿಕಾ ವಲಯಗಳಲ್ಲಿ ಹಾಗೂ ಸಾರ್ವಜನಿಕ ವಲಯ ಸಂಸ್ಥೆಗಳಲ್ಲಿ ಅಗ್ನಿವೀರರಿಗೆ ಆದ್ಯತೆ ನೀಡುವುದಾಗಿ ಕೇಂದ್ರ ಸರಕಾರ ತಿಳಿಸಿದೆ. ಭಾರತೀಯ ಸೇನೆಯು ನಾಲ್ಕು ವರ್ಷ ಸೇವೆ ಪೂರೈಸಿದವರಲ್ಲಿ ಶೇಕಡ 25ರಷ್ಟು ಅಗ್ನಿವೀರರು ಶಾಶ್ವತ ಸೇವೆಗೆ ನಿಯೋಜನೆಗೊಳ್ಳುವ ಅವಕಾಶ ಪಡೆಯುತ್ತಾರೆ. ಅಗ್ನಿವೀರರು ನಿಗದಿತ ಸೇವೆಯ ಪೂರೈಕೆ ಬಳಿಕ ಸಾಮಾನ್ಯ ಕೇಡರ್‌ಗೂ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಅಗ್ನಿಪಥ ಯೋಜನೆಯ ಅಡಿಯಲ್ಲಿ ನೇಮಕಗೊಳ್ಳುವ ಅಗ್ನಿವೀರಿಗೆ ಮೊದಲ ವರ್ಷ 4.76 ಲಕ್ಷ ರೂಪಾಯಿ ಸಂಬಳ ನಿಗದಿಯಾಗಿರಲಿದೆ. ತಿಂಗಳಿಗೆ ಸುಮಾರು 30 ಸಾವಿರ ರೂಪಾಯಿ ಸಿಗಲಿದೆ. ವರ್ಷದಿಂದ ವರ್ಷಕ್ಕೆ ವೇತನ ಶ್ರೇಣಿಯಲ್ಲಿ ಬದಲಾವಣೆಯಾಗಲಿದ್ದು, ಕೊನೆಯ ವರ್ಷ (4ನೇ ವರ್ಷ) ವೇತನವು 6.92 ಲಕ್ಷ ರೂಪಾಯಿಗೆ ಹೆಚ್ಚಲಿದೆ. ನಾಲ್ಕು ವರ್ಷಗಳ ನಂತರ ಅಗ್ನಿವೀರರಿಗೆ ಪಿಂಚಣಿ ಸಿಗುವುದಿಲ್ಲ. ಆದರೆ, ತಿಂಗಳ ವೇತನದಲ್ಲಿ ಶೇಕಡ 30ರಷ್ಟು ಸೇವಾ ನಿಧಿಗೆ ಕಡಿತಗೊಳಿಸಲಾಗುತ್ತದೆ. ಅಂತಿಮವಾಗಿ 10 ಲಕ್ಷಕ್ಕೂ ಹೆಚ್ಚು ಮೊತ್ತವನ್ನು ನೀಡಲಾಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

12 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

20 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

1 day ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

2 days ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

2 days ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago