ಮಂಗಳೂರಿನ ಸೇನಾ ನೇಮಕಾತಿ ಕಚೇರಿಯಿಂದ ಜನವರಿ 30 ರಿಂದ ಫೆಬ್ರವರಿ 10ರವರೆಗೆ ಮೂಡಬಿದ್ರಿಯ ಸ್ವರಾಜ್ ಮೈದಾನದಲ್ಲಿ ಅಗ್ನಿವೀರ್ ನೇಮಕಾತಿ ರ್ಯಾಲಿ ನಡೆಯಲಿದೆ.
ರಾಜ್ಯದ ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಂದ ಕಿರುಪಟ್ಟಿ ಮಾಡಲಾದ ಅಭ್ಯರ್ಥಿಗಳಿಗಾಗಿ ಈ ರ್ಯಾಲಿಯನ್ನು ಆಯೋಜಿಸಲಾಗಿದೆ.
ಜೂನ್ 30, 2025ರಿಂದ ಜುಲೈ 10, 2025ರವರೆಗೆ ನಡೆಸಲಾದ ಆನ್ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ (CEE)ಯಲ್ಲಿ ಅರ್ಹತೆ ಪಡೆದ ಅಗ್ನಿವೀರ್ ಅರ್ಜಿದಾರರನ್ನು ರ್ಯಾಲಿಗೆ ಆಹ್ವಾನಿಸಲಾಗಿದೆ. ಸೇನೆಯಲ್ಲಿ ಎಲ್ಲಾ ವರ್ಗಗಳ ದಾಖಲಾತಿಗಾಗಿ ಈ ನೇಮಕಾತಿ ರ್ಯಾಲಿ ನಡೆಯಲಿದ್ದು, ವಯಸ್ಸು, ಶಿಕ್ಷಣ ಅರ್ಹತೆ, ನೋಂದಣಿ ಸೇರಿದಂತೆ ಇತರ ಮಾನದಂಡಗಳ ವಿವರಗಳನ್ನು ಸೇನಾ ನೇಮಕಾತಿ ಕಚೇರಿ ಪ್ರಕಟಿಸಿದ ಅಧಿಸೂಚನೆಯಲ್ಲಿ ನೀಡಲಾಗಿದೆ.
ಆನ್ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶದ ಆಧಾರದ ಮೇಲೆ ಶಾರ್ಟ್ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ಪ್ರವೇಶ ಕಾರ್ಡ್ಗಳನ್ನು ನೀಡಲಾಗಿದ್ದು, ಅವು ಅಭ್ಯರ್ಥಿಗಳ ವೈಯಕ್ತಿಕ ಖಾತೆ ಹಾಗೂ ನೋಂದಾಯಿತ ಇಮೇಲ್ ಐಡಿ ಮೂಲಕ ಭಾರತೀಯ ಸೇನೆಯ ಅಧಿಕೃತ ವೆಬ್ಸೈಟ್ನಲ್ಲಿ ಲಭ್ಯವಿರುತ್ತದೆ.
ಆಯ್ಕೆ ಪ್ರಕ್ರಿಯೆ ಆನ್ಲೈನ್ CEEಯಲ್ಲಿನ ಕಾರ್ಯಕ್ಷಮತೆ, ನೇಮಕಾತಿ ರ್ಯಾಲಿಯಲ್ಲಿ ನಡೆಯುವ ಪರೀಕ್ಷೆಗಳು ಹಾಗೂ ಅಂತಿಮ ಅರ್ಹತೆಯ ಆಧಾರದ ಮೇಲೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…
ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…
ಶಿರಾಡಿ ಘಾಟ್ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…
ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…
ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…