Advertisement
MIRROR FOCUS

ಕೃಷಿ ಆಧಾರಿತ ಕೈಗಾರಿಕೆ ಉತ್ತೇಜನದಿಂದ ರೈತರ ಭವಿಷ್ಯ ರೂಪಾಂತರ

Share

ರಾಜಸ್ಥಾನದಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳನ್ನು ಉತ್ತೇಜಿಸುವ ಮೂಲಕ ರೈತರ ಭವಿಷ್ಯವನ್ನು ಸಂಪೂರ್ಣವಾಗಿ ಬದಲಾಯಿಸಬಹುದು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಬಿಕಾನೇರ್–ಜೋಧಪುರ ಹೆದ್ದಾರಿಯಲ್ಲಿ ಆಯೋಜಿಸಲಾದ ಕೃಷಿ ಉದ್ಯಮಿಗಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಲಾಭದಾಯಕ ಕೃಷಿ ಹಾಗೂ ಗ್ರಾಮೀಣ ಕೈಗಾರಿಕೆಗಳ ಅಭಿವೃದ್ಧಿಯೇ ರೈತರ ಆದಾಯ ಹೆಚ್ಚಿಸುವ ಪ್ರಮುಖ ಮಾರ್ಗ ಎಂದು ಅಭಿಪ್ರಾಯಪಟ್ಟರು.

ಕೃಷಿ ಆಧಾರಿತ ಕೈಗಾರಿಕೆಗಳು ಹಾಗೂ ಪ್ರಗತಿಪರ ರೈತರೊಂದಿಗೆ ಸಂವಾದ ನಡೆಸಿದ ಸಚಿವರು, ರೈತರ ಆದಾಯವನ್ನು ಹೆಚ್ಚಿಸಲು, ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಲು, ಉದ್ಯೋಗಾವಕಾಶಗಳನ್ನು ವಿಸ್ತರಿಸಲು  ಸರ್ಕಾರವು ವಿಶೇಷ ಉಪಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದರು.  ಇತ್ತೀಚೆಗೆ ಯುರೋಪಿಯನ್ ಒಕ್ಕೂಟದೊಂದಿಗೆ ಮಾಡಿರುವ ಒಪ್ಪಂದವು ಕೃಷಿ ಕೈಗಾರಿಕೆ ಮತ್ತು ರೈತರಿಗೆ ಲಾಭ ತಂದೊಡ್ಡಲಿದೆ ಎಂದರು.

ಸ್ಥಳೀಯ ಮಣ್ಣು ಹಾಗೂ ನೀರಿನ ಅಗತ್ಯಗಳನ್ನು ಆಧರಿಸಿ ಬೆಳೆಗಳನ್ನು ಆಯ್ಕೆ ಮಾಡುವುದು ಮತ್ತು ಕೃಷಿಯನ್ನು ಹೆಚ್ಚು ಲಾಭದಾಯಕವಾಗಿಸಲು ಸಂಶೋಧನೆ ಮತ್ತು ಸಮಗ್ರ ಕೃಷಿ ಪದ್ಧತಿಗೆ ಸರ್ಕಾರ ಒತ್ತು ನೀಡುತ್ತಿದೆ ಎಂದು ಚೌಹಾಣ್ ಹೇಳಿದರು. ಮಾರುಕಟ್ಟೆಗಳಲ್ಲಿ ಕಾಣಿಸಿಕೊಳ್ಳುವ ಡಬಲ್ ತೆರಿಗೆ ಸಮಸ್ಯೆಯನ್ನು ನಿವಾರಿಸುವ ಕುರಿತು ಚರ್ಚೆ ನಡೆಯುತ್ತಿದೆ. ಇದು ರೈತರಿಗೆ ನೇರ ಆರ್ಥಿಕ ಪ್ರಯೋಜನ ನೀಡಲಿದೆ ಎಂದು ಅವರು ಹೇಳಿದರು. ರೈತರಿಗಾಗಿ ಮುಂದಿನ ದಿನಗಳಲ್ಲಿ ಲಾಭದಾಯಕ ಕೃಷಿ, ಪಶುಸಂಗೋಪನೆ, ಮೇಕೆ ಮತ್ತು ಕುರಿ ಸಾಕಾಣಿಕೆ, ಜೇನು ಸಾಕಣೆ ಮೂಲಕ ಸಣ್ಣ ರೈತರಲ್ಲಿ ಉದ್ಯೋಗ ಸೃಷ್ಟಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.  ಕಾರ್ಯಕ್ರಮದಲ್ಲಿ ಉದ್ಯಮಿಗಳು ಮತ್ತು ರೈತ ನಾಯಕರು ಮಾತನಾಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

The Rural Mirror ವಿಶ್ಲೇಷಣೆ:  ಕೃಷಿ ಕೈಗಾರಿಕೆ, ಸಮಗ್ರ ಕೃಷಿ ಮತ್ತು ಪಶುಸಂಗೋಪನೆ ಆಧಾರಿತ ಉದ್ಯೋಗ ಮಾದರಿಯು ರಾಜಸ್ಥಾನದಂತಹ ಒಣ ಪ್ರದೇಶಗಳಲ್ಲಿ ರೈತರ ಆದಾಯವನ್ನು ದೀರ್ಘಾವಧಿಯಲ್ಲಿ ಹೆಚ್ಚಿಸುವ ಸಾಮರ್ಥ್ಯ ಹೊಂದಿದೆ. ಸಣ್ಣ ರೈತರಿಗಾಗಿ ಸ್ಥಳೀಯ ಅಗತ್ಯಾಧಾರಿತ ಯೋಜನೆಗಳು ಕೃಷಿ ಕ್ಷೇತ್ರದ ಭವಿಷ್ಯವನ್ನು ಬಲಪಡಿಸುವ ನಿರೀಕ್ಷೆಯಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

3 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

3 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

11 hours ago