Advertisement
MIRROR FOCUS

ಸಾರಡ್ಕದಲ್ಲಿ ಕೃಷಿ ಹಬ್ಬ | ಅಡಿಕೆ ಇಲ್ಲದ ಕೃಷಿ ಚಿಂತನೆ ಆರಂಭವಾಗಲಿ – ಶ್ರೀಪಡ್ರೆ |

Share

 ಮುಂದಿನ ದಿನಗಳಲ್ಲಿ ಅಡಿಕೆ ಇಲ್ಲದ ಕೃಷಿ ಚಿಂತನೆಗಳು ಕೃಷಿಕರಲ್ಲಿ ಆರಂಭವಾಗಬೇಕಿದೆ.ಅಡಿಕೆಯೇ ಅಂತಿಮ ಕೃಷಿ ಅಲ್ಲ. ಧಾರಣೆ ದೃಷ್ಠಿಯಿಂದ ಮಾತ್ರವಲ್ಲ ಏಕ ಕೃಷಿಯೂ ಅಪಾಯಕಾರಿ ಎಂದು ಅಡಿಕೆ ಪತ್ರಿಕೆ ಸಂಪಾದಕ ಶ್ರೀಪಡ್ರೆ ಹೇಳಿದರು.

ಅವರು ಅಡ್ಯನಡ್ಕ ಬಳಿಯ ಸಾರಡ್ಕದ ಆರಾಧನಾ ಕಲಾಕೇಂದ್ರದ ಆಶ್ರಯದಲ್ಲಿ ನಡೆದ ಕೃಷಿ ಹಬ್ಬದ ಉದ್ಘಾಟನಾ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿ ಮಾತನಾಡಿದರು. ಇಂದು ಅಡಿಕೆ ಕೃಷಿ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಈಗಾಗಲೇ ನಡೆದಿದೆ. ಅಡಿಕೆ ಕೊಯ್ಲು, ತೆಂಗಿನ ಕೊಯ್ಲು, ಔಷಧಿ ಸಿಂಪಡಣೆ ಸೇರಿದಂತೆ ತಾಂತ್ರಿಕವಾದ ಎಲ್ಲಾ ಅಗತ್ಯಗಳೂ ಪೂರೈಕೆ ವೇಳೆಯೇ ಮಾರುಕಟ್ಟೆ ಬಗ್ಗೆ ಚರ್ಚೆ ಆರಂಭವಾಗಿದೆ. ವಿವಿಧ ರೋಗಗಳ ಸಮಸ್ಯೆ ಬಂದಿದೆ. ಹೀಗಿರುವಾಗ ಅಡಿಕೆಯ ಬಗ್ಗೆಯೇ ಮೋಹ ಹೆಚ್ಚಾಗುವ ಬದಲಾಗಿ ಪರ್ಯಾಯವಾದ ಯೋಚನೆಗಳೂ ಅಗತ್ಯವಾಗಿದೆ ಎಂದರು.  ಹಾಗೆಂದು ತಕ್ಷಣವೇ ನಿರಾಸೆಯ ಅಗತ್ಯವೂ ಇಲ್ಲ. ಅಡಿಕೆ ಇರಲಿ, ಆದರೆ ಅಡಿಕೆಯ ಭವಿಷ್ಯದ ಬಗ್ಗೆಯೂ ಯೋಚನೆ ನಡೆಯಲಿ.  ಮುಂದೆ ಸಣ್ಣ ಸಣ್ಣ ಯಂತ್ರಗಳ ಆವಿಷ್ಕಾರ, ಬಳಕೆಯ ಕಡೆಗೆ ಹೆಚ್ಚು ಗಮನ ಅಗತ್ಯ ಇದೆ ಎಂದು ಶ್ರೀಪಡ್ರೆ ಹೇಳಿದರು.

ಅತಿಥಿಗಳಾಗಿದ್ದ ಅಡ್ಯನಡ್ಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗೋವಿಂದ ಪ್ರಕಾಶ್‌ ಸಾಯ, ಕೋವಿಡ್‌ ನಂತರ ಕೃಷಿಗೆ ವರವಾಗಿದೆ. ಕೃಷಿಗೆ ಭವಿಷ್ಯ ಇಲ್ಲ ಎನ್ನುವ ಮನೋಸ್ಥಿತಿ ಬೇಕಾಗಿಲ್ಲ. ಕೃಷಿಗೂ, ಕೃಷಿಕನಿಗೂ ಮಾನ ಸಿಗುವ ಕೆಲಸ ಆಗಬೇಕಿದೆ ಎಂದರು.

ಕಾರ್ಯಕ್ರಮವನ್ನು ಕೇಪು  ಪಂಚಾಯತ್ ಅಧ್ಯಕ್ಷರಾದ ರಾಘವ ಸಾರಡ್ಕ ಉದ್ಘಾಟಿಸಿದರು. ಅತಿಥಿಗಳಾಗಿ  ಅಖಿಲ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ ಕಿನಿಲ ಭಾಗವಹಿಸಿದ್ದರು. ಇದೇ ಸಂದರ್ಭ ಜಲಶೋಧಕರಾದ ಉದಯ ಅವರನ್ನು ಗೌರವಿಸಲಾಯಿತು.

ಕೃಷಿ ಹಬ್ಬದ ಸಂಚಾಲಕ ಶಂಕರ ಸಾರಡ್ಕ ಸ್ವಾಗತಿಸಿ ಪ್ರಸ್ತಾವನೆಗೈದರು. ಆರಾಧನಾ ಕಲಾಭವನದ ಮಾಲಕಿ ಗೀತಾ ಸಾರಡ್ಕ ವಂದಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಸಾಧಕ ಕೃಷಿಕರೊಂದಿಗೆ ಸಂವಾದ, ಕೃಷಿ ಉಪಕರಣ ಸಾಧಕ ಕೃಷಿಕರ ಜೊತೆ ಸಂವಾದ ಕಾರ್ಯಕ್ರಮ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತಿನಹೊಳೆ ಯೋಜನೆಗೆ ಮತ್ತೆ ಚುರುಕು – ಒಂದು ವಾರದಲ್ಲಿ ಕಾಮಗಾರಿ ಆರಂಭಕ್ಕೆ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ

ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಒಂದು ವಾರದಲ್ಲಿ ಪುನರಾರಂಭಿಸಲು ಉಪಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಪ್ರಮುಖ…

6 hours ago

ಕೆಆರ್ಎಸ್ ಡ್ಯಾಂ ಎಚ್ಚರಿಕೆ- 15 ದಿನಗಳಲ್ಲಿ 8 ಅಡಿ ನೀರು ಕುಸಿತ – ಕಾವೇರಿ ಪ್ರದೇಶದಲ್ಲಿ ನೀರಿನ ಅಭಾವ ಭೀತಿ!

ಕೆಆರ್ಎಸ್ ಅಣೆಕಟ್ಟಿನ ನೀರಿನ ಮಟ್ಟ ಕೇವಲ 15 ದಿನಗಳಲ್ಲಿ 8 ಅಡಿ ಕುಸಿದಿದೆ.…

6 hours ago

ತುಮಕೂರಿನಲ್ಲಿ ನವಿಲುಗಳಿಗೆ H5N1 ಸೋಂಕು ದೃಢ: 4 ಗ್ರಾಮಗಳು ಕಂಟೋನ್ಮೆಂಟ್ ವಲಯ ಘೋಷಣೆ, ಕೋಳಿ ಫಾರಂಗಳ ಮೇಲೆ ಕಣ್ಣಿಟ್ಟ ಅಧಿಕಾರಿಗಳು

ತುಮಕೂರಿನಲ್ಲಿ ನವಿಲುಗಳಲ್ಲಿ H5N1 ಸೋಂಕು ದೃಢಪಟ್ಟಿದ್ದು, ನಾಲ್ಕು ಗ್ರಾಮಗಳನ್ನು ಕಂಟೋನ್ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ.…

6 hours ago

ಯಾದಗಿರಿ ನೀರಿನ ಸಂಕಷ್ಟಕ್ಕೆ ತಾತ್ಕಾಲಿಕ ಪರಿಹಾರ – 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿ ಮೂಲಕ ನೀರು ಪೂರೈಕೆ

ಯಾದಗಿರಿ ಜಿಲ್ಲೆಯ 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ.…

6 hours ago

ಗುರುವಾಯನಕೆರೆ–ಉಪ್ಪಿನಂಗಡಿ ಹೆದ್ದಾರಿ ಅಭಿವೃದ್ಧಿಗೆ ₹13 ಕೋಟಿ ಮಂಜೂರು – ಸಂಚಾರ ಸುಗಮ, ಪ್ರವಾಸೋದ್ಯಮಕ್ಕೂ ಉತ್ತೇಜನ

ಗುರುವಾಯನಕೆರೆ–ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ₹13 ಕೋಟಿ ಅನುಮೋದನೆ ನೀಡಲಾಗಿದೆ. ಈ ಯೋಜನೆಯಿಂದ…

6 hours ago

ಹೊಳೆಹೊನ್ನೂರು ಅಡಿಕೆ ಕಳ್ಳತನ ದೊಡ್ಡ ಬೇಟೆ – 350 ಚೀಲ ಅಡಿಕೆ, ಲಾರಿ ವಶ – ಆರೋಪಿಗಳು ಪರಾರಿ

ಹೊಳೆಹೊನ್ನೂರಿನಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣದಲ್ಲಿ 350 ಚೀಲ ಅಡಿಕೆ ಮತ್ತು ಲಾರಿಯನ್ನು…

7 hours ago