Advertisement
ಸುದ್ದಿಗಳು

ಕೃಷಿ ಹಬ್ಬದಲ್ಲಿ ಕೃಷಿಕರೊಂದಿಗಿನ ಸಂವಾದ | ಕೃಷಿಗೆ ಯುವಾಕರ್ಷಣೆ ಹೇಗೆ ? ಹಳ್ಳಿಗಳು ವೃದ್ಧಾಶ್ರಮವಾಗುವುದರ ತಡೆ ಹೇಗೆ..?

Share

ಕೃಷಿ ಬೆಳವಣಿಗೆಗೆ ಪೂರಕವಾದ ಸಂಗತಿಗಳು. ಕೃಷಿಗೆ ಡಿಜಿಟಲ್‌ ಟಚ್‌, ಕಾಳುಮೆಣಸು ಕೃಷಿ, ಹಣ್ಣುಗಳ ಮೌಲ್ಯವರ್ಧನೆ, ಗೋಸಾಕಾಣಿಕೆ, ಎಗ್ರಿ ಟೂರಿಸಂ, ಕೃಷಿಕರೇ ಅಭಿವೃದ್ಧಿ ಪಡಿಸಿದ ಕೃಷಿಯಂತ್ರಗಳು… ಇದಿಷ್ಟು ಕೃಷಿಕರೊಂದಿಗೆ ಕೃಷಿಕರೇ ನಡೆಸಿದ ಸಂವಾದ. ಇದೆಲ್ಲದರ ಜೊತೆಗೆ ಕೃಷಿಗೆ ಯುವಾಕರ್ಷಣೆ ಹೇಗೆ..? ಮತ್ತು ಹಳ್ಳಿಗಳು ವೃದ್ಧಾಶ್ರಮವಾಗದಂತೆ ನೋಡುವುದು  ಹೇಗೆ..? ಇದೆಲ್ಲಾ ಚರ್ಚೆಯಾದ್ದು ದಕ್ಷಿಣ ಕನ್ನಡ ಜಿಲ್ಲೆಯ ಅಡ್ಯನಡ್ಕ ಬಳಿಯ ಸಾರಡ್ಕದಲ್ಲಿ  ನಡೆದ ಕೃಷಿ ಹಬ್ಬದಲ್ಲಿ.

ಸಾರಡ್ಕದ ಆರಾಧನಾ ಕಲಾಭವನದಲ್ಲಿ ಕೃಷಿ ಹಬ್ಬ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಾಧಕ ಕೃಷಿಕರೊಂದಿಗೆ ಸಂವಾದ ನಡೆಯಿತು. ಕೃಷಿಕ ಸುರೇಶ್‌ ಬಲ್ನಾಡು ಮಾತನಾಡಿ, ಮಕ್ಕಳಿಗೂ ಕೃಷಿ ಜವಾಬ್ದಾರಿ ನೀಡಬೇಕಿದೆ. ಹೀಗೆ ಬಂದಾಗ ಕೃಷಿ ಜವಾಬ್ದಾರಿ ಮಾತ್ರವಲ್ಲ ಆರ್ಥಿಕ ಸ್ವಾತಂತ್ರ್ಯವೂ ಅಗತ್ಯವಾಗಿ ನೀಡಬೇಕು ಎಂದರು. ಹಳ್ಳಿ ವೃದ್ಧಾಶ್ರಮವಾಗದಂತೆ, ಕೃಷಿಗೆ ಯುವಾಕರ್ಷಣೆಗೆ ಹೆತ್ತವರೇ ಅಗತ್ಯವಾಗಿ ನೋಡಿಕೊಳ್ಳಬೇಕಿದೆ ಎಂದರು. ಯುವಕರು ಹಾಗೂ ಕೃಷಿಕರು ಒಂದಾದರೆ ಕೃಷಿಯಲ್ಲೂ ಹೊಸ ಸಾಧ್ಯತೆ ಸಾಧ್ಯವಿದೆ ಎಂದರು. (ಆಡಿಯೋ ಇಲ್ಲಿದೆ...)

ಹಿಪ್ಪಲಿ ಕಾಳುಮೆಣಸು ಕೃಷಿಯ ಬಗ್ಗೆ ಮಾತನಾಡಿದ ವಿಜಯಾನಂದ ಶರ್ಮ ಪಂಜಿಕಲ್ಲು, ಕೃಷಿಕರೇ ಕಸಿ ಕಟ್ಟುವುದಕ್ಕೆ ಕಲಿತುಕೊಳ್ಳಬೇಕು. ಉಲ್ಟಾ ಕಸಿ ಮಾಡಿದರೆ ಹೆಚ್ಚು ಪ್ರಯೋಜನಕಾರಿಯಾಗಿದೆ. ನಿಮ್ಮ ತೋಟದಲ್ಲಿ ಬೆಳೆಯುವ ಉತ್ತಮ ತಳಿಯನ್ನೇ ಆಯ್ಕೆ ಮಾಡಿಕೊಳ್ಳುವುದು ಹೆಚ್ಚು ಉತ್ತಮ ಎಂದರು.

ಹಣ್ಣುಗಳ ಮೌಲ್ಯವರ್ಧನೆ ಮಾಡುವ ವೆಂಕಟಕೃಷ್ಣ ಶರ್ಮ ಮಾತನಾಡಿ, ಮನೆಯಲ್ಲಿ ಹಾಳಾಗುವ ಹಣ್ಣುಗಳಿಗೆ ಮಾನ-ಮೌಲ್ಯವರ್ಧನೆ ಮಾಡಿದರೆ ಕೃಷಿಯಲ್ಲಿ ಸೋಲಿಲ್ಲ. ಪ್ರಯೋಗದ ಮೂಲಕವೇ ಕೃಷಿಕ ಬೆಳೆಯಬೇಕಿದೆ ಎಂದರು.

ಎಗ್ರಿ ಟೂರಿಸಂ ಬಗ್ಗೆ ಮಾತನಾಡಿದ ಪಾರ್ಥ ವಾರಣಾಸಿ, ಕೃಷಿಯೊಂದಿಗೆ ಆದಾಯ ತರುವ ಸಾಕಷ್ಟು ಯೋಚನೆಗಳು ಯುವಕರಲ್ಲಿದೆ. ಅದನ್ನು ಕೃಷಿ ಪ್ರವಾಸೋದ್ಯಮದ ಅಡಿಗೆ ತಂದರೆ ಆದಾಯವೂ ಇದೆ. ಕೃಷಿ ಒಂದು ಆಸಕ್ತಿಯಾಗಿ ಬೆಳೆಸಿದರೆ ಸೋಲಿಲ್ಲ ಎಂದರು.

ದೇಸೀ ತಳಿ ಗೋವು ಸಾಕಾಣಿಗೆ ಬಗ್ಗೆ ಮಾತನಾಡಿದ ಸುಬ್ರಹ್ಮಣ್ಯ ಪ್ರಸಾದ್‌ ನೆಕ್ಕರಕಳೆಯ ಗೋವು ಒಂದು ಸಂಪತ್ತು. ಗೋವಿನ ಮೂಲಕವೇ ಬದುಕು ಸಾಧ್ಯವಿದೆ. ಕಳೆದ ಹಲವು ವರ್ಷಗಳಿಂದ ಅಡಿಕೆ ಇಲ್ಲದೆಯೇ ಬದುಕ ಬೇಕು ಎಂಬ ಛಲ ಇದೆ. ಅದು ಸಾಕಾರವಾಗುತ್ತಿದೆ ಎಂದು ಹೇಳಿದರು.

ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರಸ್ವತಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ಚಂದ್ರ ಎಸ್‌ ಆರ್‌, ಕೃಷಿ ಸಾಧಕರಲ್ಲಿ ಸಾಕಷ್ಟು ಅನುಭವದ ಮಾಹಿತಿಗಳು ಇರುತ್ತದೆ. ಕೃಷಿ ಬೆಳೆಯಲು ಅನುಭವವೇ ಮುಖ್ಯವಾಗಿದೆ. ಕೃಷಿಗೆ ಯುವಕರು ಬರಬೇಕು ಹಾಗೂ ಹಳ್ಳಿಗಳು ವೃದ್ಧಾಶ್ರಮವಾಗುವುದು ತಪ್ಪಬೇಕಾದರೆ ಹೊಸಹೊಸ ಆವಿಷ್ಕಾರಗಳ ಬಳಕೆ ಅಗತ್ಯ ಇದೆ ಎಂದರು.

ಆ ಬಳಿಕ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಿಂಗಾರ ದೋಟಿ ಕೊಯ್ಲು ಬಗ್ಗೆ ರಾಮ ಕಿಶೋರ ಮಂಚಿ ಮಾತನಾಡಿದರು.‌ ಕೃಷಿ ಸಲಕರಣೆಗಳ ಬಗ್ಗೆ ಸೀತಾರಾಮ ಭಟ್, ಡಂಪರ್‌ ಸ್ಕೂಟರ್‌ ರಿಕ್ಷಾ ಬಗ್ಗೆ ಪುರುಷೋತ್ತಮ ಸವಣೂರು, ಅಡಿಕೆ ಸುಲಿಯುವ ಯಂತ್ರದ ಬಗ್ಗೆ ನಾರಾಯಣ ನೆಲ್ಲಿತ್ತಾಯ, ಕೃಷಿ ಉತ್ಪನ್ನಗಳ ಸೋಶಿಯಲ್‌ ಮೀಡಿಯಾ ಮಾರುಕಟ್ಟೆ ಬಗ್ಗೆ ಸುದರ್ಶನ ಭಟ್‌ ನೀರ್ಚಾಲು ಮಾತನಾಡಿದರು. ಸಂವಾದದ ಅಧ್ಯಕ್ಷತೆಯನ್ನು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ವಹಿಸಿದ್ದರು. ಡಾ.ಅಶ್ವಿನಿ ಕೃಷ್ಣಮೂರ್ತಿ ವಾರಣಾಸಿ ಸಂವಾದವನ್ನು ಸಮನ್ವಯಗೊಳಿಸಿದರು.ಅಡಿಕೆ ಪತ್ರಿಕೆ ಸಹಾಯಕ ಸಂಪಾದಕ ನಾ.ಕಾರಂತ ಪೆರಾಜೆ , ಮಹೇಶ್ ಪುಚ್ಚಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು. ಶಂಕರ್‌ ಸಾರಡ್ಕ ಸ್ವಾಗತಿಸಿ ಗೀತಾ ಸಾರಡ್ಕ ವಂದಿಸಿದರು.

An agricultural festival was held at Aradhana Kalabhavan in Saradka. In this program there was an interaction with the professional farmers. On this occasion, agricultural professionals gave solutions to many agricultural problems.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

7 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

14 hours ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

14 hours ago

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

22 hours ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

22 hours ago

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧ

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…

23 hours ago