Advertisement
ಸುದ್ದಿಗಳು

ಜ.7 ಸಾರಡ್ಕದಲ್ಲಿ ಕೃಷಿ ಹಬ್ಬ | ಕೃಷಿ ಸಮಸ್ಯೆಗಳಿಗೆ ಪರಿಹಾರದ ಬಗ್ಗೆ ಚಿಂತನೆ | ಸಂವಾದ-ಗೋಷ್ಠಿ |

Share

 ಕೃಷಿ ಬೆಲೆ ಕುಸಿತವಾದರೆ ಏನು ಮಾಡಬಹುದು..? ಕೃಷಿಗೆ ಯುವಕರು ಬರುವುದು ಹೇಗೆ..? ಕೃಷಿ ಕಾರ್ಮಿಕರ ಸಮಸ್ಯೆಗೆ ಪರಿಹಾರ ಹೇಗೆ..? ಇನ್ನೂ ಹತ್ತಾರು ಪ್ರಶ್ನೆಗಳು… ಈ ಎಲ್ಲಾ ಪ್ರಶ್ನೆಗಳಿಗೆ  ಉತ್ತರ ಹೇಗೆ? ಸಾಮೂಹಿಕ ಚಿಂತನೆ ಹೇಗೆ..? ಇದೆಲ್ಲಾ ಮಾತುಕತೆ ನಡೆಸುವುದು ಹಾಗೂ ಕೃಷಿ ಹಬ್ಬವು  ಜ.7 ರಂದು ಅಡ್ಯನಡ್ಕ ಬಳಿಯ ಸಾರಡ್ಕದಲ್ಲಿ ನಡೆಯಲಿದೆ. 

Advertisement
Advertisement

ಸಾರಡ್ಕದ ಆರಾಧನಾ ಕಲಾಭವನ ಸಾರಥ್ಯದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಹಲವು ಗೋಷ್ಟಿಗಳು, ಸಂವಾದಗಳು ನಡೆಯಲಿದೆ. ಕಾರ್ಯಕ್ರಮವನ್ನು ಕೇಪು  ಪಂಚಾಯತ್ ಅಧ್ಯಕ್ಷರಾದ ರಾಘವ ಸಾರಡ್ಕ ನೆರವೇರಿಸಲಿರುವರು ಅಧ್ಯಕ್ಷತೆಯನ್ನು ಅಡಿಕೆ ಪತ್ರಿಕೆ ಸಂಪಾದಕ ಶ್ರೀಪಡ್ರೆ ವಹಿಸುವರು. ಅತಿಥಿಗಳಾಗಿ ಅಖಿಲ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ ಕಿನಿಲ, ಅಡ್ಯನಡ್ಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗೋವಿಂದ ಪ್ರಕಾಶ್‌ ಸಾಯ ಮೊದಲಾದವರು ಭಾಗವಹಿಸುವರು ಎಂದು ಕೃಷಿ ಹಬ್ಬ ಆಯೋಜನಕ ಶಂಕರ್‌ ಸಾರಡ್ಕ ತಿಳಿಸಿದ್ದಾರೆ.

ಸಭಾಕಾರ್ಯಕ್ರಮದ ಬಳಿಕ ಸಂವಾದ ಕಾರ್ಯಕ್ರಮ ನಡೆಯಲಿದೆ. ಕೃಷಿಯಲ್ಲಿ ಸಾಧನೆಗೈದ ಸಾಧಕರ ಜೊತೆ ಸಂವಾದ ನಡೆಯಲಿದೆ. ಮಧ್ಯಾಹ್ನದ ಬಳಿಕ ಕೃಷಿಕರು ತಯಾರಿಸಿದ ಯಂತ್ರಗಳು ಹಾಗೂ ಅವುಗಳ ಅಭಿವೃದ್ಧಿ , ಕೃಷಿ ಮಾರುಕಟ್ಟೆ ಇತ್ಯಾದಿಗಳ ಬಗ್ಗೆ ಸಂವಾದ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿವಿಧ ಬಗೆಯ ಮಳಿಗೆಗಳು ಇರಲಿದೆ ಎಂದು ಶಂಕರ ಸಾರಡ್ಕ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

4 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago