ಕೃಷಿ ಬೆಲೆ ಕುಸಿತವಾದರೆ ಏನು ಮಾಡಬಹುದು..? ಕೃಷಿಗೆ ಯುವಕರು ಬರುವುದು ಹೇಗೆ..? ಕೃಷಿ ಕಾರ್ಮಿಕರ ಸಮಸ್ಯೆಗೆ ಪರಿಹಾರ ಹೇಗೆ..? ಇನ್ನೂ ಹತ್ತಾರು ಪ್ರಶ್ನೆಗಳು… ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಹೇಗೆ? ಸಾಮೂಹಿಕ ಚಿಂತನೆ ಹೇಗೆ..? ಇದೆಲ್ಲಾ ಮಾತುಕತೆ ನಡೆಸುವುದು ಹಾಗೂ ಕೃಷಿ ಹಬ್ಬವು ಜ.7 ರಂದು ಅಡ್ಯನಡ್ಕ ಬಳಿಯ ಸಾರಡ್ಕದಲ್ಲಿ ನಡೆಯಲಿದೆ.
ಸಾರಡ್ಕದ ಆರಾಧನಾ ಕಲಾಭವನ ಸಾರಥ್ಯದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಹಲವು ಗೋಷ್ಟಿಗಳು, ಸಂವಾದಗಳು ನಡೆಯಲಿದೆ. ಕಾರ್ಯಕ್ರಮವನ್ನು ಕೇಪು ಪಂಚಾಯತ್ ಅಧ್ಯಕ್ಷರಾದ ರಾಘವ ಸಾರಡ್ಕ ನೆರವೇರಿಸಲಿರುವರು ಅಧ್ಯಕ್ಷತೆಯನ್ನು ಅಡಿಕೆ ಪತ್ರಿಕೆ ಸಂಪಾದಕ ಶ್ರೀಪಡ್ರೆ ವಹಿಸುವರು. ಅತಿಥಿಗಳಾಗಿ ಅಖಿಲ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ ಕಿನಿಲ, ಅಡ್ಯನಡ್ಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗೋವಿಂದ ಪ್ರಕಾಶ್ ಸಾಯ ಮೊದಲಾದವರು ಭಾಗವಹಿಸುವರು ಎಂದು ಕೃಷಿ ಹಬ್ಬ ಆಯೋಜನಕ ಶಂಕರ್ ಸಾರಡ್ಕ ತಿಳಿಸಿದ್ದಾರೆ.
ಸಭಾಕಾರ್ಯಕ್ರಮದ ಬಳಿಕ ಸಂವಾದ ಕಾರ್ಯಕ್ರಮ ನಡೆಯಲಿದೆ. ಕೃಷಿಯಲ್ಲಿ ಸಾಧನೆಗೈದ ಸಾಧಕರ ಜೊತೆ ಸಂವಾದ ನಡೆಯಲಿದೆ. ಮಧ್ಯಾಹ್ನದ ಬಳಿಕ ಕೃಷಿಕರು ತಯಾರಿಸಿದ ಯಂತ್ರಗಳು ಹಾಗೂ ಅವುಗಳ ಅಭಿವೃದ್ಧಿ , ಕೃಷಿ ಮಾರುಕಟ್ಟೆ ಇತ್ಯಾದಿಗಳ ಬಗ್ಗೆ ಸಂವಾದ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿವಿಧ ಬಗೆಯ ಮಳಿಗೆಗಳು ಇರಲಿದೆ ಎಂದು ಶಂಕರ ಸಾರಡ್ಕ ತಿಳಿಸಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…