ಕೃಷಿ ಬೆಲೆ ಕುಸಿತವಾದರೆ ಏನು ಮಾಡಬಹುದು..? ಕೃಷಿಗೆ ಯುವಕರು ಬರುವುದು ಹೇಗೆ..? ಕೃಷಿ ಕಾರ್ಮಿಕರ ಸಮಸ್ಯೆಗೆ ಪರಿಹಾರ ಹೇಗೆ..? ಇನ್ನೂ ಹತ್ತಾರು ಪ್ರಶ್ನೆಗಳು… ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಹೇಗೆ? ಸಾಮೂಹಿಕ ಚಿಂತನೆ ಹೇಗೆ..? ಇದೆಲ್ಲಾ ಮಾತುಕತೆ ನಡೆಸುವುದು ಹಾಗೂ ಕೃಷಿ ಹಬ್ಬವು ಜ.7 ರಂದು ಅಡ್ಯನಡ್ಕ ಬಳಿಯ ಸಾರಡ್ಕದಲ್ಲಿ ನಡೆಯಲಿದೆ.
ಸಾರಡ್ಕದ ಆರಾಧನಾ ಕಲಾಭವನ ಸಾರಥ್ಯದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಹಲವು ಗೋಷ್ಟಿಗಳು, ಸಂವಾದಗಳು ನಡೆಯಲಿದೆ. ಕಾರ್ಯಕ್ರಮವನ್ನು ಕೇಪು ಪಂಚಾಯತ್ ಅಧ್ಯಕ್ಷರಾದ ರಾಘವ ಸಾರಡ್ಕ ನೆರವೇರಿಸಲಿರುವರು ಅಧ್ಯಕ್ಷತೆಯನ್ನು ಅಡಿಕೆ ಪತ್ರಿಕೆ ಸಂಪಾದಕ ಶ್ರೀಪಡ್ರೆ ವಹಿಸುವರು. ಅತಿಥಿಗಳಾಗಿ ಅಖಿಲ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ ಕಿನಿಲ, ಅಡ್ಯನಡ್ಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗೋವಿಂದ ಪ್ರಕಾಶ್ ಸಾಯ ಮೊದಲಾದವರು ಭಾಗವಹಿಸುವರು ಎಂದು ಕೃಷಿ ಹಬ್ಬ ಆಯೋಜನಕ ಶಂಕರ್ ಸಾರಡ್ಕ ತಿಳಿಸಿದ್ದಾರೆ.
ಸಭಾಕಾರ್ಯಕ್ರಮದ ಬಳಿಕ ಸಂವಾದ ಕಾರ್ಯಕ್ರಮ ನಡೆಯಲಿದೆ. ಕೃಷಿಯಲ್ಲಿ ಸಾಧನೆಗೈದ ಸಾಧಕರ ಜೊತೆ ಸಂವಾದ ನಡೆಯಲಿದೆ. ಮಧ್ಯಾಹ್ನದ ಬಳಿಕ ಕೃಷಿಕರು ತಯಾರಿಸಿದ ಯಂತ್ರಗಳು ಹಾಗೂ ಅವುಗಳ ಅಭಿವೃದ್ಧಿ , ಕೃಷಿ ಮಾರುಕಟ್ಟೆ ಇತ್ಯಾದಿಗಳ ಬಗ್ಗೆ ಸಂವಾದ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿವಿಧ ಬಗೆಯ ಮಳಿಗೆಗಳು ಇರಲಿದೆ ಎಂದು ಶಂಕರ ಸಾರಡ್ಕ ತಿಳಿಸಿದ್ದಾರೆ.
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…