ಕೃಷಿ ಬೆಲೆ ಕುಸಿತವಾದರೆ ಏನು ಮಾಡಬಹುದು..? ಕೃಷಿಗೆ ಯುವಕರು ಬರುವುದು ಹೇಗೆ..? ಕೃಷಿ ಕಾರ್ಮಿಕರ ಸಮಸ್ಯೆಗೆ ಪರಿಹಾರ ಹೇಗೆ..? ಇನ್ನೂ ಹತ್ತಾರು ಪ್ರಶ್ನೆಗಳು… ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಹೇಗೆ? ಸಾಮೂಹಿಕ ಚಿಂತನೆ ಹೇಗೆ..? ಇದೆಲ್ಲಾ ಮಾತುಕತೆ ನಡೆಸುವುದು ಹಾಗೂ ಕೃಷಿ ಹಬ್ಬವು ಜ.7 ರಂದು ಅಡ್ಯನಡ್ಕ ಬಳಿಯ ಸಾರಡ್ಕದಲ್ಲಿ ನಡೆಯಲಿದೆ.
ಸಾರಡ್ಕದ ಆರಾಧನಾ ಕಲಾಭವನ ಸಾರಥ್ಯದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಹಲವು ಗೋಷ್ಟಿಗಳು, ಸಂವಾದಗಳು ನಡೆಯಲಿದೆ. ಕಾರ್ಯಕ್ರಮವನ್ನು ಕೇಪು ಪಂಚಾಯತ್ ಅಧ್ಯಕ್ಷರಾದ ರಾಘವ ಸಾರಡ್ಕ ನೆರವೇರಿಸಲಿರುವರು ಅಧ್ಯಕ್ಷತೆಯನ್ನು ಅಡಿಕೆ ಪತ್ರಿಕೆ ಸಂಪಾದಕ ಶ್ರೀಪಡ್ರೆ ವಹಿಸುವರು. ಅತಿಥಿಗಳಾಗಿ ಅಖಿಲ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ ಕಿನಿಲ, ಅಡ್ಯನಡ್ಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗೋವಿಂದ ಪ್ರಕಾಶ್ ಸಾಯ ಮೊದಲಾದವರು ಭಾಗವಹಿಸುವರು ಎಂದು ಕೃಷಿ ಹಬ್ಬ ಆಯೋಜನಕ ಶಂಕರ್ ಸಾರಡ್ಕ ತಿಳಿಸಿದ್ದಾರೆ.
ಸಭಾಕಾರ್ಯಕ್ರಮದ ಬಳಿಕ ಸಂವಾದ ಕಾರ್ಯಕ್ರಮ ನಡೆಯಲಿದೆ. ಕೃಷಿಯಲ್ಲಿ ಸಾಧನೆಗೈದ ಸಾಧಕರ ಜೊತೆ ಸಂವಾದ ನಡೆಯಲಿದೆ. ಮಧ್ಯಾಹ್ನದ ಬಳಿಕ ಕೃಷಿಕರು ತಯಾರಿಸಿದ ಯಂತ್ರಗಳು ಹಾಗೂ ಅವುಗಳ ಅಭಿವೃದ್ಧಿ , ಕೃಷಿ ಮಾರುಕಟ್ಟೆ ಇತ್ಯಾದಿಗಳ ಬಗ್ಗೆ ಸಂವಾದ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿವಿಧ ಬಗೆಯ ಮಳಿಗೆಗಳು ಇರಲಿದೆ ಎಂದು ಶಂಕರ ಸಾರಡ್ಕ ತಿಳಿಸಿದ್ದಾರೆ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…