ಕೃಷಿ ಬೆಲೆ ಕುಸಿತವಾದರೆ ಏನು ಮಾಡಬಹುದು..? ಕೃಷಿಗೆ ಯುವಕರು ಬರುವುದು ಹೇಗೆ..? ಕೃಷಿ ಕಾರ್ಮಿಕರ ಸಮಸ್ಯೆಗೆ ಪರಿಹಾರ ಹೇಗೆ..? ಇನ್ನೂ ಹತ್ತಾರು ಪ್ರಶ್ನೆಗಳು… ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಹೇಗೆ? ಸಾಮೂಹಿಕ ಚಿಂತನೆ ಹೇಗೆ..? ಇದೆಲ್ಲಾ ಮಾತುಕತೆ ನಡೆಸುವುದು ಹಾಗೂ ಕೃಷಿ ಹಬ್ಬವು ಜ.7 ರಂದು ಅಡ್ಯನಡ್ಕ ಬಳಿಯ ಸಾರಡ್ಕದಲ್ಲಿ ನಡೆಯಲಿದೆ.
ಸಾರಡ್ಕದ ಆರಾಧನಾ ಕಲಾಭವನ ಸಾರಥ್ಯದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಹಲವು ಗೋಷ್ಟಿಗಳು, ಸಂವಾದಗಳು ನಡೆಯಲಿದೆ. ಕಾರ್ಯಕ್ರಮವನ್ನು ಕೇಪು ಪಂಚಾಯತ್ ಅಧ್ಯಕ್ಷರಾದ ರಾಘವ ಸಾರಡ್ಕ ನೆರವೇರಿಸಲಿರುವರು ಅಧ್ಯಕ್ಷತೆಯನ್ನು ಅಡಿಕೆ ಪತ್ರಿಕೆ ಸಂಪಾದಕ ಶ್ರೀಪಡ್ರೆ ವಹಿಸುವರು. ಅತಿಥಿಗಳಾಗಿ ಅಖಿಲ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ ಕಿನಿಲ, ಅಡ್ಯನಡ್ಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗೋವಿಂದ ಪ್ರಕಾಶ್ ಸಾಯ ಮೊದಲಾದವರು ಭಾಗವಹಿಸುವರು ಎಂದು ಕೃಷಿ ಹಬ್ಬ ಆಯೋಜನಕ ಶಂಕರ್ ಸಾರಡ್ಕ ತಿಳಿಸಿದ್ದಾರೆ.
ಸಭಾಕಾರ್ಯಕ್ರಮದ ಬಳಿಕ ಸಂವಾದ ಕಾರ್ಯಕ್ರಮ ನಡೆಯಲಿದೆ. ಕೃಷಿಯಲ್ಲಿ ಸಾಧನೆಗೈದ ಸಾಧಕರ ಜೊತೆ ಸಂವಾದ ನಡೆಯಲಿದೆ. ಮಧ್ಯಾಹ್ನದ ಬಳಿಕ ಕೃಷಿಕರು ತಯಾರಿಸಿದ ಯಂತ್ರಗಳು ಹಾಗೂ ಅವುಗಳ ಅಭಿವೃದ್ಧಿ , ಕೃಷಿ ಮಾರುಕಟ್ಟೆ ಇತ್ಯಾದಿಗಳ ಬಗ್ಗೆ ಸಂವಾದ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿವಿಧ ಬಗೆಯ ಮಳಿಗೆಗಳು ಇರಲಿದೆ ಎಂದು ಶಂಕರ ಸಾರಡ್ಕ ತಿಳಿಸಿದ್ದಾರೆ.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…