Advertisement
Opinion

ರೈತ ಉಪಯೋಗಿ ಬಗೆ ಬಗೆಯ ಸರಕು ಸಾಗಣೆ ಗಾಡಿಗಳು

Share

ಕೃಷಿ ಅಭಿವೃದ್ಧಿಯಲ್ಲಿ ಕೃಷಿ ಲೆಕ್ಕಾಚಾರವೂ ಅಗತ್ಯ. ಇಂದಿನ ಸನ್ನಿವೇಶದಲ್ಲಿ ಕೃಷಿ ಬೆಳವಣಿಗೆಗೆ ಏನು ಮಾಡಬೇಕು, ಯಂತ್ರಗಳ ಬಳಕೆ ತೀರಾ ಅಗತ್ಯ. ಹಾಗಿರುವು ಈ ಅನುಭವಗಳ ಆಧಾರದಲ್ಲಿ ನೋಡುವುದಾದರೆ….,

ಅನುಭವ ಒಂದು: ಅವರಿಗೆ ಮನೆಯಿಂದ ಎರಡು ಕಿಲೋ ಮೀಟರ್ ದೂರದಲ್ಲಿ ಮುಕ್ಕಾಲು ಎಕರೆ ಅಡಿಕೆ ಬಾಗಾಯ್ತಿದೆ‌ . ಒಂದು ಆರನೂರು ಅಡಿಕೆ ಕೊನೆ ಬರುತ್ತದೆ. ಉಪ ವೃತ್ತಿ ಏನೋ ಇದೆ ಅವರಿಗೆ ‌ ಒಮ್ಮೆ ಅವರು ಅಡಿಕೆ ಕೊನೆ ತೆಗೆಸಿದಾಗ ಅವರ ಸಮಯಕ್ಕೆ ಸರಿಯಾಗಿ ಗೂಡ್ಸ್ ಗಾಡಿಯವ ಬರಲಿಲ್ಲ. ಆ ಸಿಟ್ಟಿಗೆ ಅವರು ಉತ್ತಮ ಸದೃಢ ಕಂಡಿಷನ್ ಆಗಿದ್ದ ಮಾಡೆಲ್ ಇರುವ ಓಮಿನಿ ಕಾರನ್ನು ಕೊಯ್ಯಿಸಿ ಅದರಲ್ಲಿ ಪಿಕ್ ಅಪ್ ಮಾಡಿಸಿದರು. ಒಂದೊಳ್ಳೆಯ ಓಮ್ಬಿ ಯನ್ನು ವರ್ಷಕ್ಕೆ ಕೇವಲ ಮೂರ್ ನಾಕು ಟ್ರಿಪ್ ಕೊನೆ ತರಲು ದಂಡ ಅಥವಾ ಹಾಳು ಮಾಡಿದರು.

ಅನುಭವ ಎರಡು :  ಆತ ಯುವ ಕೃಷಿಕ. ಹೊಸದಾಗಿ ಹಾಕಿದ ಎರಡು ಎಕರೆ ಅಡಿಕೆ ತೋಟದಲ್ಲಿ ನಾಚಿಕೆ ಮುಳ್ಳು ಯಥೇಚ್ಛವಾಗಿ ಬೆಳದಿದ್ದು. ಯೂಟ್ಯೂಬ್ ನಲ್ಲಿ ನೋಡಿ ಹದಿನಾರು ಹೆಚ್ ಪಿ ಆಫ್ ರೋಡ್ ಟ್ರಾಕ್ಟರ್ ನಮೂನೆಯ ಒಂದು ಲಕ್ಷ ಎಂಬತ್ತು ಸಾವಿರ ಬೆಲೆ ಕಲ್ಟಿವೇಟರ್ ಇರುವ ವಾಹನ ತಂದ. ಅದು ಬಯಲು ಸೀಮೆಯ ವಿಶಾಲವಾದ ಕಪ್ಪು (ಬಸಿಗಾಲುವೆ) ಇರದ “ಬಣ” ದಲ್ಲಿ ಕಳೆ ಕೊಚ್ಚಲು ಇರುವ ವಾಹನವಾಗಿತ್ತು. ಅದಕ್ಕೆ ಚಿಕ್ಕ ಟ್ರೈಲರ್ ಬೇರೆ ಮಾಡಿಸಿದ್ದ. ಆ ಟ್ರಾಕ್ಟರ್ ನಲ್ಲಿ ಯೂಟ್ಯೂಬ್ ನಲ್ಲಿ ತೋರಿಸಿದಷ್ಟು ಉತ್ತಮವಾಗಿ ಕೆಲಸ ಮಾಡಲಾಗದೇ ಕೇವಲ ಮೂರು ನಾಲ್ಕು ಗಂಟೆಗಳ ಫೀಲ್ಡ್ ವರ್ಕ್ ಮಾಡಿ ಅದೀಗ ಬದಿಗೆ ನಿಂತಿದೆ.

ಅನುಭವ ಮೂರು :  ಬೈಕ್ ಟ್ರಾಲಿ…, ಪರಿಚಿತರೊಬ್ಬರು ಯಾವುದೋ ಕೃಷಿ ಮೇಳದ ಪ್ರಾತ್ಯಕ್ಷಿಕೆ ನೋಡಿ ಬೈಕ್ ಗೆ ಸಿಕ್ಕಿಸಿಕೊಂಡು ಹೋಗುವ ಟ್ರ್ಯಾಲಿ ಮನೆಗೆ ತಂದು ತನ್ನ ಆಳದ ತೋಟದಿಂದ ಕೊನೆ ತುಂಬಿ ಎತ್ತರಕ್ಕೆ ಅದನ್ನು ಚಾಲನೆ ಮಾಡಿ ಕೊಂಡು ಬರುವಾಗ ಪಲ್ಟಿಯಾಗಿ ಬಿದ್ದು ಆತನ ಸೊಂಟಕ್ಕೆ ಬಲವಾಗಿ ಪೆಟ್ಟಾಗಿ ಏಳೆಂಟು ಲಕ್ಷ ಖರ್ಚಾಯಿತು. ಅವನೀಗ ಮೊದಲಿನಂತೆ ಗಟ್ಟಿ ಕೆಲಸ ಮಾಡಲಾರ….!.ನಮ್ಮ ಮದ್ಯಮ ವರ್ಗದ ರೈತರ ಮನೆಯ ಕಡಿಮಾಡಿನಲ್ಲಿ ಅಂಗಳದಲ್ಲಿ ಸ್ಟೋರ್ ರೂಮಿನಲ್ಲಿ ಹೀಗಿನ ಬಗೆ ಬಗೆಯ ಯಂತ್ರೋಪಕರಣಗಳು ಬಲೆ ಕಟ್ಟಿ ನಿಂತಿರುತ್ತದೆ.ಯೂಟ್ಯೂಬ್ ನಲ್ಲೋ , ಕೃಷಿ ಮೇಳದ ಸ್ಟಾಲ್ ನಲ್ಲೋ ತೋರಿಸಿದ ನೋಡದ ಗಾಡಿಗಳು ನಮ್ಮ ಮಲೆನಾಡು ಕರಾವಳಿಯ ಹೂದಲು ಮಣ್ಣು, ಏರು ತಗ್ಗಿನ ಜಾಗಗಳಲ್ಲಿ ನಿರೀಕ್ಷಿತ ಕೆಲಸ ಮಾಡಲಾಗದೇ ಸೋತು ಬದಿಗೆ ನಿಲ್ಲುತ್ತವೆ…

ಈ ವಾಹನ ನಮಗೆಷ್ಟು worth….,  ನಮ್ಮ ತೋಟ ನಮ್ಮ ಮನೆಯಿಂದ ಎರಡು ಕಿಲೋ ಮೀಟರ್. ನಾವು ಗೊಬ್ಬರ ಸಾಗಣೆಗೆ, ಕೊನೆ ತರಲು ಖಾಸಗಿ ಗೂಡ್ಸ್ ವಾಹನಗಳಿಗೆ ಅವಲಂಬಿತರು. ಮಧ್ಯಮ ವರ್ಗದ ನಾವು ವರ್ಷಕ್ಕೆ ಒಂದು ಎಂಟು ಹತ್ತು ಟ್ರಿಪ್ ಸಾಗಣೆ ಮಾಡಲು ಎರಡು ಲಕ್ಷದ ಗೂಡ್ಸೋ ,ಆಲ್ಟ್ರೇಷನ್ ವಾಹನವೋ ಮಾಡಿದರೆ ದೊಡ್ಡ ನಷ್ಟ. ಐವತ್ತು ವರ್ಷ ದಾಟಿದ ಮೇಲೆ ಮೂಟೆಯೋ , ತೂಕದ ಕೊನೆಯೋ ಹೊತ್ತು ಗಾಡಿಗೆ ಹಾಕುವುದೂ ಕಷ್ಟ. ಮಲೆನಾಡಿನ ಇಳಿಜಾರು, ಎತ್ತರದ ಜಾಗ , ಕಡಿದಾದ ತಿರುವುಗಳಲ್ಲಿ ಈ ಆಲ್ಟ್ರೇಷನ್ ವಾಹನಗಳು ಅಪಾಯಕಾರಿ. ಪ್ರತಿ ಊರಿನಲ್ಲೂ ಬಾಡಿಗೆಗೆ 4×4 ಪಿಕ್ ಅಪ್ ವಾಹನಗಳು ಇರುತ್ತದೆ. ಯಾರನ್ನೋ ಖಾಯಂ ಆಗಿ ಗೊತ್ತು ಮಾಡಿಕೊಂಡು ಅವರಿಗೆ ನಿಗದಿತ ಸಮಯಕ್ಕೆ ಬಂದು ನಿಮ್ಮ ಕೃಷಿ ಸರಕು ಸಾಗಣೆ ಮಾಡಿ..

ಈಗ ಎಲೆಚುಕ್ಕಿ ಸಂವತ್ಸರ… ಇಂತಹ ಲಕ್ಷದ ಮೇಲ್ಪಟ್ಟ ವಾಹನಗಳಿಗೆ ಬಂಡವಾಳ ಹಾಕುವುದು ಮದ್ಯಮ ವರ್ಗದ ರೈತರಿಗಂತೂ ರಿಸ್ಕು,. ಕಳೆಮಿಷನ್ ಮನೆಯಲ್ಲಿ ಇರುತ್ತದೆ, ಆದರೆ ಬಹಳ ಹೊತ್ತು ನಿಂತು ಕಳೆ ಹೊಡೆಯಲು ಸೊಂಟ ನೋವು. ಅದಕ್ಕೆ ಬಾಡಿಗೆ ಕಳೆ ಮಿಷನ್ ನವರಲ್ಲಿ ಕಳೆ ಹೊಡೆಸುತ್ತೇವೆ… ಮಿಷನ್ ಗರಗಸ ಇದೆ…. ಆದರೆ ನಾವು ಸ್ವಂತ ಕಟ್ಟಿಗೆ ಕೊಯ್ಯೋಲ್ಲ.

ಹೀಗೆ ಹೊಂಡ ಮಾಡುವ ಯಂತ್ರ, ಚಿಕ್ಕ ಹೂಟಿ ಮಾಡುವ ಯಂತ್ರ,  ಎಲ್ಲವೂ ಸ್ಟೋರ್ ರೂಮಿನಲ್ಲಿ ಚಿರ ನಿದ್ರೆಯತ್ತಾ ಸಾಗಿವೆ…!!.  ಇಂತಹ ಎಲ್ಲಾ ಯಂತ್ರ ಕೊಂಡು ರೈತ ಸ್ವಾವಲಂಬಿ ಆಗುವ ಕನಸು ಮುರುಟಿದೆ.  ಏಕೆಂದರೆ ಈ ಯಂತ್ರ ಗಳ ಬಳಸುವುದು ನಿರ್ವಹಣೆ ಯೂಟ್ಯೂಬ್ ನಲ್ಲಿ ನೋಡಿದಷ್ಟು ಸುಲಭವಲ್ಲ. ವರ್ಷಕ್ಕೆ ಒಂದು ಪಿಕ್ ಅಪ್ ಕಟ್ಟಿಗೆ ಬೇಕಾಗುವ ಒಬ್ಬ ರೈತನಿಗೇಕೆ ಹದಿನೈದು ಸಾವಿರ ರೂಪಾಯಿ ಚೈನ್ ಸಾ..? ಒಂದು ಸಾವಿರ ರೂಪಾಯಿ ಬಾಡಿಗೆ ಕೊಟ್ಟರೆ ಮನೆ ಬಾಗಿಲಿಗೆ ಬಂದು ಕಟ್ಟಿಗೆ ಕೊಯ್ದು ಕೊಟ್ಟು ಹೋಗೋಲ್ವಾ…? ರೈತರು ಇದೆಲ್ಲಾ ಯೋಚನೆ ಮಾಡಬೇಕು.

ಅಡಿಕೆ ಸುಲಿಯುವ ಯಂತ್ರ , ಗೊರಬಲು ಪಾಲಿಷರ್ ಯಂತ್ರ, ಸೇರಿದಂತೆ ಅಡಿಕೆ ಸಂಸ್ಕರಣೆಗೆ ಬೇಕಾದ ಎಲ್ಲಾ ಪರಿಕರ ರೈತರ ಮನೆಯಲ್ಲಿದೆ. ಆದರೆ ರೈತ ಮನೆಯಲ್ಲಿ ಸ್ವಂತ ಅಡಿಕೆ ಸಂಸ್ಕರಣೆ ಮಾಡದೇ ವರ್ಷಗಳೇ ಕಳೆದಿದೆ. ಇದೆಲ್ಲಾ ಲಕ್ಷಾಂತರ ಬೆಲೆ ಬಾಳುವಂತಹದ್ದು….??!

ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು ಯೋಚಿಸಿ ನಂತರ ಕೊಳ್ಳುವುದು ಒಳಿತು ಅಲ್ವಾ…? ಒಂದು ಕಡೆ ಆರ್ಥಿಕ ಹೊರೆ. ಅದೇ ರೀತಿಯಲ್ಲಿ ಇಂತಹ ವಾಹನಗಳ ಚಾಲನೆ ನಿರ್ವಹಣೆ ದೈಹಿಕವಾಗಿಯೂ ದಣಿಸುತ್ತದೆ.
ಇಂತಹ ಯಂತ್ರ ಕೊಂಡು ಅವುಗಳ ನಿರ್ವಹಣೆ , ದೈಹಕ ಸವಕಳಿ ನಂತರದ ಆಸ್ಪತ್ರೆ ವೆಚ್ಚದ ಬಗ್ಗೆ ಲೆಕ್ಕಾಚಾರ ಹಾಕಿದರೆ ಹೊರಗಿನವರ ಕೈಲಿ ಕೆಲಸ ಮಾಡಿಸೋದೇ ಒಳ್ಳೆಯದು.

ನಾಲ್ಕು ಲಕ್ಷ ದ ಓಮಿನಿ‌ ಈಗ ನಲವತ್ತು ಸಾವಿರಕ್ಕೂ ಯಾರೂ ಕೇಳೋಲ್ಲ..! ಒಂದು ಲಕ್ಷದ ಎಂಬತ್ತು ಸಾವಿರದ ಟ್ರಾಕ್ಟರ್ ಇದೀಗ ಐವತ್ತು ಸಾವಿರವೂ ಬೆಲೆ ಬಾಳೋಲ್ಲ. ಕೆಳಗಿನ ತೋಟದಿಂದ ಸುಲಭವಾಗಿ ಬೈಕ್ ಟ್ರ್ಯಾಲಿಯಲ್ಲಿ ಕೊನೆ ತರುತ್ತೇನೆಂದು ಹೋಗಿ ಬಿದ್ದು ಸೊಂಟ ಮುರಿದು ಕೊಂಡವನ ಲೈಫೇ ಸ್ಕ್ರಾಪು….

ಇಂತಹ ಲಕ್ಷ ಬೆಲೆಬಾಳುವ ಗಾಡಿ ಇತರೆ ಪರಿಕರ ಕೊಳ್ಳುವಾಗ ಮಾತ್ರ ಬೆಲೆ.  ನಿಮಗೆ ಪ್ರಯೋಜನ ಇಲ್ಲಾಂತಾದರೆ ಮಾರಾಟ ಮಾಡುವುದಾದಲ್ಲಿ ಮೂರು ಕಾಸಿನ ಬೆಲೆ ಇಲ್ಲ…!!

ಇಪ್ಪತ್ತು ಇಪ್ಪತ್ತೈದು ಸಾವಿರ ಕ್ಕೆ ಸಿಕ್ಕುವ ಎಫ್ ಸಿ ಮುಗಿದ ಮಾರುತಿ 800 ನ್ನು ಕಡಿಮೆ ವೆಚ್ಚದಲ್ಲಿ alter ಮಾಡಿ ಬಳಸಿ. ಬೈಕ್ ನ್ನ ಚಿಕ್ಕ ವೆಚ್ಚದಲ್ಲಿ alter ಮಾಡಿ ಬಳಸಿ. ಸ್ಥಳೀಯ ವಾಗಿ ಗೂಡ್ಸ್ ವಾಹನದವರು ಲಭ್ಯ ವಿದ್ದರೆ ಅವರಿಗೆ ಬಾಡಿಗೆ ಕೊಡಿ‌. ಅನಗತ್ಯ ವೆಚ್ಚ ಮಾಡುವ ಸಮಯ ಇದಲ್ಲ…

ಬರಹ :
ಪ್ರಬಂಧ ಅಂಬುತೀರ್ಥ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

Published by
ಪ್ರಬಂಧ ಅಂಬುತೀರ್ಥ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

11 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

17 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago