ರೈತರು ತಮ್ಮ ಬೆಳೆ ಸಾಲ, ಪಶುಪಾಲನೆ, ಸಸ್ಯ ಸಂಸ್ಕರಣೆಗೆ ಬ್ಯಾಂಕ್ ನಲ್ಲಿ ಹೆಚ್ಚಿನ ಬಡ್ಡಿಯಲ್ಲಿ ಸಾಲ ಪಡೆದು ಕಷ್ಟಕ್ಕೆ ಸಿಲುಕುತ್ತಿದ್ದರೆ, ಈ ಕಾರಣದಿಂದಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ಶೂನ್ಯ ಬಡ್ಡಿ ಕೃಷಿ ಸಾಲವನ್ನು ಜಾರಿಗೊಳಿಸಿದೆ. ಆರ್ ಬಿ ಐ ಮಾರ್ಗಸೂಚಿಯ ಪ್ರಕಾರ, ಈ ಸಾಲಗಳ ಬಡ್ಡಿ ದರ 0% ಮತ್ತು ಸಹಕಾರಿ ಬ್ಯಾಂಕ್ ಗಳು 5 ಲಕ್ಷದವರೆಗೆ ಇದನ್ನು ವಿಸ್ತರಣೆ ಮಾಡಿವೆಯಾದರೂ ಸದ್ಯ 3 ಲಕ್ಷಕ್ಕಿಂತ ಅಧಿಕ ಸಾಲ ನೀಡುತ್ತಿಲ್ಲ.
ಭಾರತೀಯ ರಿಸರ್ವ ಬ್ಯಾಂಕ್ ಮಾರ್ಗಸೂಚಿಯ ಪ್ರಕಾರ ಈ ಸಾಲಗಳು ರೈತ ಕ್ರೆಡಿಟ್ ಸ್ಕೋರ್ ಸುಧಾರಿಸಿ, ಭವಿಷ್ಯದಲ್ಲಿ ಹೆಚ್ಚಿ ಸಹಾಯಕ್ಕೆ ಮಾರ್ಗ ಸುಗಮಗೊಳಿಸುತ್ತವೆ. ಈಗಾಗಲೇ ಈ ನಿಯಮದ ಅಡಿಯಲ್ಲಿ 14ಕೋಟಿ ರೈತರು ಲಾಭ ಪಡೆದಿದ್ದಾರೆ.
ಅಗತ್ಯ ದಾಖಲೆಗಳು:
• ಆಧಾರ್ ಕಾರ್ಡ್
• ಭೂಮಿ ಸಾಬೀತು
• ಆದಾಯ ಪ್ರಮಾಣ ಪತ್ರ
• ಬ್ಯಾಂಕ್ ವಿವರಗಳು
• ಪೋಟೋ
• ಜಾತಿ ಪತ್ರ
ಅರ್ಜಿ ಸಲ್ಲಿಸುವ ವಿಧಾನ: ಹತ್ತಿರದ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಅಥವಾ ಪ್ರಾಥಮಿಕ ಕೃಷಿ ಸಹಕಾರಿ ಸಂಸ್ಥೆಗೆ ತೆರಳಿ ಶೂನ್ಯ ಬಡ್ಡಿ ಕೃಷಿ ಸಾಲದ ಮಾಹಿತಿ ಪಡೆದುಕೊಳ್ಳಿ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"