Advertisement
ಸುದ್ದಿಗಳು

ಸುಳ್ಯ ತಾಲೂಕಿನ ಸಂಜೀವಿನಿ ಎನ್ ಆರ್ ಎಲ್ ಎಂ ಕೃಷಿ ಸಖಿಯರು, ಕೃಷಿಕರು ಹಾಗೂ ಸಂಜೀವಿನಿ ಸದಸ್ಯೆಯರಿಗೆ ಕೃಷಿ ಅಧ್ಯಯನ ಪ್ರವಾಸ ಮತ್ತು ಮಾಹಿತಿ ತರಬೇತಿ

Share

ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ (ಭಾ. ಕೃ. ಅ. ಸಂಸ್ಥೆ) ಕೇಂದ್ರ, ವಿಟ್ಲ,  3F ಆಯಿಲ್ ಪಾಮ್ ಪ್ರೈವೇಟ್ ಲಿಮಿಟೆಡ್, ರೇಷ್ಮೆ ಕೃಷಿ ಅಭಿವೃದ್ಧಿ ನಿಗಮ, ಮಂಗಳೂರು ಹಾಗೂ ಸಂಜೀವಿನಿ ಎನ್‌ಆರ್‌ಎಲ್‌ಎಂ ತಾಲೂಕು ಪಂಚಾಯತ್ ಸುಳ್ಯ ಇವರ ಸಹಯೋಗದಲ್ಲಿ ರೇಷ್ಮೆ ಕೃಷಿ ಮಾಹಿತಿ ಹಾಗೂ ತಾಳೆ ಕೃಷಿ ಕ್ಷೇತ್ರ ಭೇಟಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಭಾ. ಕೃ. ಅ. ಸಂಸ್ಥೆ ಕೇಂದ್ರ, ವಿಟ್ಲದ ವ್ಯವಸ್ಥಾಪನಾ ನಿರ್ದೇಶಕರಾದ ಎಂ. ಪ್ರಸಾದ್ ಶೆಟ್ಟಿ, ನಿವೃತ್ತ ರೇಷ್ಮೆ ನಿರೀಕ್ಷಕರಾದ ಬಿ.ಕೆ. ನಾಯಕ್, ರೇಷ್ಮೆ ವಿಸ್ತರಣಾಧಿಕಾರಿ ಶಾಂಭವಿ ಹೆಚ್ (ದ.ಕ. ಜಿಲ್ಲಾ ಪಂಚಾಯತ್, ಮಂಗಳೂರು), ರೇಷ್ಮೆ ನಿರೀಕ್ಷಕರಾದ ಹೇಮಾ (ದ.ಕ. ಜಿಲ್ಲಾ ಪಂಚಾಯತ್, ಮಂಗಳೂರು), 3F ಆಯಿಲ್ ಪಾಮ್ ಪ್ರೈ. ಲಿ., ಉಡುಪಿಯ ಏರಿಯಾ ಮ್ಯಾನೇಜರ್ ಕೃಷ್ಣಾ ವೈ.ಟಿ., ಸಂಜೀವಿನಿ ಕ್ಲಸ್ಟರ್ ಅಧಿಕಾರಿಗಳಾದ ರವಿಶಂಕರ್ (ಸುಳ್ಯ ತಾಲೂಕು) ಹಾಗೂ ರಾಬರ್ಟ್ (ಬಂಟ್ವಾಳ–ಬೆಳ್ತಂಗಡಿ ತಾಲೂಕು) ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅಧಿಕಾರಿಗಳು, ಕೃಷಿ ಭೂಮಿ ಹೊಂದಿರುವವರು ಹಾಗೂ ಅಲ್ಪ ಜಾಗವಿರುವವರಿಗೂ ರೇಷ್ಮೆ ಕೃಷಿ ಕೈಗೊಳ್ಳಲು ಅವಕಾಶವಿದ್ದು, ಉತ್ತಮ ಆದಾಯ ಗಳಿಸಲು ಸಾಧ್ಯವಿದೆ ಎಂದು ತಿಳಿಸಿದರು. ಹೆಚ್ಚಿನ ಭೂಮಿ ಹೊಂದಿರುವ ಕೃಷಿಕರಿಗೆ ತಾಳೆ ಕೃಷಿ ಮಾಡಲು ಅವಕಾಶವಿದ್ದು, ಸಂಬಂಧಿತ ಇಲಾಖೆಗಳಿಂದ ಎಲ್ಲಾ ರೀತಿಯ ಸಹಕಾರ ಲಭ್ಯವಿರುತ್ತದೆ ಎಂದರು. ರೇಷ್ಮೆ ಬೆಳೆಗಾರರಿಗೆ ಉತ್ಪನ್ನಗಳ ಮಾರಾಟ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಅಗತ್ಯ ತಾಂತ್ರಿಕ ಮಾರ್ಗದರ್ಶನ ಹಾಗೂ ಸಲಕರಣೆಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ತಾಳೆ ಬೆಳೆ ಈಗಾಗಲೇ ಹಲವು ಕಡೆಗಳಲ್ಲಿ ಬೆಳೆಸಲಾಗುತ್ತಿದ್ದು, ಅದರ ಮಾರಾಟ ವ್ಯವಸ್ಥೆಯೂ ಇದೆ ಎಂದು ತಿಳಿಸಿದರು. ಬಂಟ್ವಾಳ ತಾಲೂಕಿನ ತಾಳೆ ಕೃಷಿಕರಾದ ಗೋವಿಂದ ಭಟ್ ಇಡುಕ್ಕಿ ಹಾಗೂ ಬಿ. ಬಾಲಕೃಷ್ಣ ಭಟ್  ತೋಟಕ್ಕೆ ಭೇಟಿ ಮಾಡಿಸಲಾಯಿತು.

ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ವ್ಯವಸ್ಥಾಪನಾ ನಿರ್ದೇಶಕರು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಕೃಷಿಕರಿಗಾಗಿ ಇರುವ ವಿವಿಧ ಯೋಜನೆಗಳು, ಸವಲತ್ತುಗಳು, ಕೃಷಿ ಸಲಕರಣಿಗಳು, ಸಬ್ಸಿಡಿಯಲ್ಲಿ ಸಿಗಬಹುದಾದ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಐ ಐ ಹೆಚ್ ಆರ್ ಬೆಂಗಳೂರುನ ವಿಜ್ಞಾನಿಗಳು ಸಂಶೋಧಿಸಿ ಅಭಿವೃದ್ಧಿ ಪಡಿಸಿದ ಜೈವಿಕ ಪೋಷಕಾಂಶವುಳ್ಳ ಗೊಬ್ಬರವನ್ನು ಕೃಷಿಕರಿಗೆ ಉಚಿತವಾಗಿ ಸಂಸ್ಥೆಯಿಂದ ವಿತರಿಸಿದರು.

ಈ ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಕೃಷಿಕರು, ಬಟ್ಟೆಕಜೆ ರಾಜೇಶ್ ಮತ್ತು ಕೃಷಿಸಖಿಯರಾದ ಪುಷ್ಪಲತಾ ಮಡಪ್ಪಾಡಿ, ಕನಕ ಮಜಲು ಪ್ರೇಮಾ ಅಡ್ಕಾರು, ಜಾಲ್ಸೂರು ವಿಜಯಾ, ಅಜ್ಜಾವರ ಪೂರ್ಣಿಮಾ, ಆಲೆಟ್ಟಿ ಲೋಚನ ಮತ್ತು ಸಂಪಾಜೆ ಗ್ರಾಮದ ಕೃಷಿ ಸಖಿ ಮೋಹಿನಿ ವಿಶ್ವನಾಥ್ ( ನಿಶಾ ) ಪಾಲ್ಗೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

13 hours ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

21 hours ago

ಹವಾಮಾನ ವರದಿ | 21-05-2026 | ಮೇ ಅಂತ್ಯದವರೆಗೂ ಜೋರು ಮಳೆಯ ಲಕ್ಷಣವಿಲ್ಲ..! ಕರ್ನಾಟಕದಲ್ಲಿ ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ

ರಾಜ್ಯದಲ್ಲಿ ಮಳೆಯ ಚಟುವಟಿಕೆ ಕಡಿಮೆಯಾಗಿದ್ದು, ಮೇ ಅಂತ್ಯದವರೆಗೂ ಜೋರು ಮಳೆಯ ಸಾಧ್ಯತೆ ಕಡಿಮೆ…

21 hours ago

“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!

ಕಾಕ್ರೋಚ್‌ ಜನತಾ ಪಾರ್ಟಿ ಎಂಬ ವ್ಯಂಗ್ಯಾತ್ಮಕ ಸಾಮಾಜಿಕ ಜಾಲತಾಣ ಚಳವಳಿ 60 ಲಕ್ಷಕ್ಕೂ…

2 days ago

ಹವಾಮಾನ ವರದಿ | 20.05.2026 | ಮೇ 26 ಬಳಿಕ ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಸಾಧ್ಯತೆ| ಕರಾವಳಿಯಲ್ಲಿ ಮಳೆ ಕುಂಠಿತ, ಉತ್ತರ ಭಾರತಕ್ಕೆ ಮಳೆ ಸೂಚನೆ

ಕರ್ನಾಟಕದಲ್ಲಿ ಮುಂಗಾರು ಪೂರ್ವ ಚಟುವಟಿಕೆಗಳು ನಿಧಾನಗೊಂಡಿರುವ ನಡುವೆ, 21.05.2026ರ ಬೆಳಿಗ್ಗೆ 8 ಗಂಟೆವರೆಗಿನ…

2 days ago

ಉತ್ತರ ಭಾರತ ಉರಿಯುತ್ತಿದೆ – ಮೇ 25ರವರೆಗೆ ತೀವ್ರ ಬಿಸಿಗಾಳಿ ಎಚ್ಚರಿಕೆ

ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…

2 days ago