Advertisement
ಸುದ್ದಿಗಳು

ಸುಳ್ಯ ತಾಲೂಕಿನ ಸಂಜೀವಿನಿ ಎನ್ ಆರ್ ಎಲ್ ಎಂ ಕೃಷಿ ಸಖಿಯರು, ಕೃಷಿಕರು ಹಾಗೂ ಸಂಜೀವಿನಿ ಸದಸ್ಯೆಯರಿಗೆ ಕೃಷಿ ಅಧ್ಯಯನ ಪ್ರವಾಸ ಮತ್ತು ಮಾಹಿತಿ ತರಬೇತಿ

Share

ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ (ಭಾ. ಕೃ. ಅ. ಸಂಸ್ಥೆ) ಕೇಂದ್ರ, ವಿಟ್ಲ,  3F ಆಯಿಲ್ ಪಾಮ್ ಪ್ರೈವೇಟ್ ಲಿಮಿಟೆಡ್, ರೇಷ್ಮೆ ಕೃಷಿ ಅಭಿವೃದ್ಧಿ ನಿಗಮ, ಮಂಗಳೂರು ಹಾಗೂ ಸಂಜೀವಿನಿ ಎನ್‌ಆರ್‌ಎಲ್‌ಎಂ ತಾಲೂಕು ಪಂಚಾಯತ್ ಸುಳ್ಯ ಇವರ ಸಹಯೋಗದಲ್ಲಿ ರೇಷ್ಮೆ ಕೃಷಿ ಮಾಹಿತಿ ಹಾಗೂ ತಾಳೆ ಕೃಷಿ ಕ್ಷೇತ್ರ ಭೇಟಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಭಾ. ಕೃ. ಅ. ಸಂಸ್ಥೆ ಕೇಂದ್ರ, ವಿಟ್ಲದ ವ್ಯವಸ್ಥಾಪನಾ ನಿರ್ದೇಶಕರಾದ ಎಂ. ಪ್ರಸಾದ್ ಶೆಟ್ಟಿ, ನಿವೃತ್ತ ರೇಷ್ಮೆ ನಿರೀಕ್ಷಕರಾದ ಬಿ.ಕೆ. ನಾಯಕ್, ರೇಷ್ಮೆ ವಿಸ್ತರಣಾಧಿಕಾರಿ ಶಾಂಭವಿ ಹೆಚ್ (ದ.ಕ. ಜಿಲ್ಲಾ ಪಂಚಾಯತ್, ಮಂಗಳೂರು), ರೇಷ್ಮೆ ನಿರೀಕ್ಷಕರಾದ ಹೇಮಾ (ದ.ಕ. ಜಿಲ್ಲಾ ಪಂಚಾಯತ್, ಮಂಗಳೂರು), 3F ಆಯಿಲ್ ಪಾಮ್ ಪ್ರೈ. ಲಿ., ಉಡುಪಿಯ ಏರಿಯಾ ಮ್ಯಾನೇಜರ್ ಕೃಷ್ಣಾ ವೈ.ಟಿ., ಸಂಜೀವಿನಿ ಕ್ಲಸ್ಟರ್ ಅಧಿಕಾರಿಗಳಾದ ರವಿಶಂಕರ್ (ಸುಳ್ಯ ತಾಲೂಕು) ಹಾಗೂ ರಾಬರ್ಟ್ (ಬಂಟ್ವಾಳ–ಬೆಳ್ತಂಗಡಿ ತಾಲೂಕು) ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅಧಿಕಾರಿಗಳು, ಕೃಷಿ ಭೂಮಿ ಹೊಂದಿರುವವರು ಹಾಗೂ ಅಲ್ಪ ಜಾಗವಿರುವವರಿಗೂ ರೇಷ್ಮೆ ಕೃಷಿ ಕೈಗೊಳ್ಳಲು ಅವಕಾಶವಿದ್ದು, ಉತ್ತಮ ಆದಾಯ ಗಳಿಸಲು ಸಾಧ್ಯವಿದೆ ಎಂದು ತಿಳಿಸಿದರು. ಹೆಚ್ಚಿನ ಭೂಮಿ ಹೊಂದಿರುವ ಕೃಷಿಕರಿಗೆ ತಾಳೆ ಕೃಷಿ ಮಾಡಲು ಅವಕಾಶವಿದ್ದು, ಸಂಬಂಧಿತ ಇಲಾಖೆಗಳಿಂದ ಎಲ್ಲಾ ರೀತಿಯ ಸಹಕಾರ ಲಭ್ಯವಿರುತ್ತದೆ ಎಂದರು. ರೇಷ್ಮೆ ಬೆಳೆಗಾರರಿಗೆ ಉತ್ಪನ್ನಗಳ ಮಾರಾಟ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಅಗತ್ಯ ತಾಂತ್ರಿಕ ಮಾರ್ಗದರ್ಶನ ಹಾಗೂ ಸಲಕರಣೆಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ತಾಳೆ ಬೆಳೆ ಈಗಾಗಲೇ ಹಲವು ಕಡೆಗಳಲ್ಲಿ ಬೆಳೆಸಲಾಗುತ್ತಿದ್ದು, ಅದರ ಮಾರಾಟ ವ್ಯವಸ್ಥೆಯೂ ಇದೆ ಎಂದು ತಿಳಿಸಿದರು. ಬಂಟ್ವಾಳ ತಾಲೂಕಿನ ತಾಳೆ ಕೃಷಿಕರಾದ ಗೋವಿಂದ ಭಟ್ ಇಡುಕ್ಕಿ ಹಾಗೂ ಬಿ. ಬಾಲಕೃಷ್ಣ ಭಟ್  ತೋಟಕ್ಕೆ ಭೇಟಿ ಮಾಡಿಸಲಾಯಿತು.

ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ವ್ಯವಸ್ಥಾಪನಾ ನಿರ್ದೇಶಕರು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಕೃಷಿಕರಿಗಾಗಿ ಇರುವ ವಿವಿಧ ಯೋಜನೆಗಳು, ಸವಲತ್ತುಗಳು, ಕೃಷಿ ಸಲಕರಣಿಗಳು, ಸಬ್ಸಿಡಿಯಲ್ಲಿ ಸಿಗಬಹುದಾದ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಐ ಐ ಹೆಚ್ ಆರ್ ಬೆಂಗಳೂರುನ ವಿಜ್ಞಾನಿಗಳು ಸಂಶೋಧಿಸಿ ಅಭಿವೃದ್ಧಿ ಪಡಿಸಿದ ಜೈವಿಕ ಪೋಷಕಾಂಶವುಳ್ಳ ಗೊಬ್ಬರವನ್ನು ಕೃಷಿಕರಿಗೆ ಉಚಿತವಾಗಿ ಸಂಸ್ಥೆಯಿಂದ ವಿತರಿಸಿದರು.

ಈ ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಕೃಷಿಕರು, ಬಟ್ಟೆಕಜೆ ರಾಜೇಶ್ ಮತ್ತು ಕೃಷಿಸಖಿಯರಾದ ಪುಷ್ಪಲತಾ ಮಡಪ್ಪಾಡಿ, ಕನಕ ಮಜಲು ಪ್ರೇಮಾ ಅಡ್ಕಾರು, ಜಾಲ್ಸೂರು ವಿಜಯಾ, ಅಜ್ಜಾವರ ಪೂರ್ಣಿಮಾ, ಆಲೆಟ್ಟಿ ಲೋಚನ ಮತ್ತು ಸಂಪಾಜೆ ಗ್ರಾಮದ ಕೃಷಿ ಸಖಿ ಮೋಹಿನಿ ವಿಶ್ವನಾಥ್ ( ನಿಶಾ ) ಪಾಲ್ಗೊಂಡಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

6 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

14 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

17 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

22 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

2 days ago