Advertisement
ಸುದ್ದಿಗಳು

ಸುಳ್ಯ ತಾಲೂಕಿನ ಸಂಜೀವಿನಿ ಎನ್ ಆರ್ ಎಲ್ ಎಂ ಕೃಷಿ ಸಖಿಯರು, ಕೃಷಿಕರು ಹಾಗೂ ಸಂಜೀವಿನಿ ಸದಸ್ಯೆಯರಿಗೆ ಕೃಷಿ ಅಧ್ಯಯನ ಪ್ರವಾಸ ಮತ್ತು ಮಾಹಿತಿ ತರಬೇತಿ

Share

ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ (ಭಾ. ಕೃ. ಅ. ಸಂಸ್ಥೆ) ಕೇಂದ್ರ, ವಿಟ್ಲ,  3F ಆಯಿಲ್ ಪಾಮ್ ಪ್ರೈವೇಟ್ ಲಿಮಿಟೆಡ್, ರೇಷ್ಮೆ ಕೃಷಿ ಅಭಿವೃದ್ಧಿ ನಿಗಮ, ಮಂಗಳೂರು ಹಾಗೂ ಸಂಜೀವಿನಿ ಎನ್‌ಆರ್‌ಎಲ್‌ಎಂ ತಾಲೂಕು ಪಂಚಾಯತ್ ಸುಳ್ಯ ಇವರ ಸಹಯೋಗದಲ್ಲಿ ರೇಷ್ಮೆ ಕೃಷಿ ಮಾಹಿತಿ ಹಾಗೂ ತಾಳೆ ಕೃಷಿ ಕ್ಷೇತ್ರ ಭೇಟಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಭಾ. ಕೃ. ಅ. ಸಂಸ್ಥೆ ಕೇಂದ್ರ, ವಿಟ್ಲದ ವ್ಯವಸ್ಥಾಪನಾ ನಿರ್ದೇಶಕರಾದ ಎಂ. ಪ್ರಸಾದ್ ಶೆಟ್ಟಿ, ನಿವೃತ್ತ ರೇಷ್ಮೆ ನಿರೀಕ್ಷಕರಾದ ಬಿ.ಕೆ. ನಾಯಕ್, ರೇಷ್ಮೆ ವಿಸ್ತರಣಾಧಿಕಾರಿ ಶಾಂಭವಿ ಹೆಚ್ (ದ.ಕ. ಜಿಲ್ಲಾ ಪಂಚಾಯತ್, ಮಂಗಳೂರು), ರೇಷ್ಮೆ ನಿರೀಕ್ಷಕರಾದ ಹೇಮಾ (ದ.ಕ. ಜಿಲ್ಲಾ ಪಂಚಾಯತ್, ಮಂಗಳೂರು), 3F ಆಯಿಲ್ ಪಾಮ್ ಪ್ರೈ. ಲಿ., ಉಡುಪಿಯ ಏರಿಯಾ ಮ್ಯಾನೇಜರ್ ಕೃಷ್ಣಾ ವೈ.ಟಿ., ಸಂಜೀವಿನಿ ಕ್ಲಸ್ಟರ್ ಅಧಿಕಾರಿಗಳಾದ ರವಿಶಂಕರ್ (ಸುಳ್ಯ ತಾಲೂಕು) ಹಾಗೂ ರಾಬರ್ಟ್ (ಬಂಟ್ವಾಳ–ಬೆಳ್ತಂಗಡಿ ತಾಲೂಕು) ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅಧಿಕಾರಿಗಳು, ಕೃಷಿ ಭೂಮಿ ಹೊಂದಿರುವವರು ಹಾಗೂ ಅಲ್ಪ ಜಾಗವಿರುವವರಿಗೂ ರೇಷ್ಮೆ ಕೃಷಿ ಕೈಗೊಳ್ಳಲು ಅವಕಾಶವಿದ್ದು, ಉತ್ತಮ ಆದಾಯ ಗಳಿಸಲು ಸಾಧ್ಯವಿದೆ ಎಂದು ತಿಳಿಸಿದರು. ಹೆಚ್ಚಿನ ಭೂಮಿ ಹೊಂದಿರುವ ಕೃಷಿಕರಿಗೆ ತಾಳೆ ಕೃಷಿ ಮಾಡಲು ಅವಕಾಶವಿದ್ದು, ಸಂಬಂಧಿತ ಇಲಾಖೆಗಳಿಂದ ಎಲ್ಲಾ ರೀತಿಯ ಸಹಕಾರ ಲಭ್ಯವಿರುತ್ತದೆ ಎಂದರು. ರೇಷ್ಮೆ ಬೆಳೆಗಾರರಿಗೆ ಉತ್ಪನ್ನಗಳ ಮಾರಾಟ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಅಗತ್ಯ ತಾಂತ್ರಿಕ ಮಾರ್ಗದರ್ಶನ ಹಾಗೂ ಸಲಕರಣೆಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ತಾಳೆ ಬೆಳೆ ಈಗಾಗಲೇ ಹಲವು ಕಡೆಗಳಲ್ಲಿ ಬೆಳೆಸಲಾಗುತ್ತಿದ್ದು, ಅದರ ಮಾರಾಟ ವ್ಯವಸ್ಥೆಯೂ ಇದೆ ಎಂದು ತಿಳಿಸಿದರು. ಬಂಟ್ವಾಳ ತಾಲೂಕಿನ ತಾಳೆ ಕೃಷಿಕರಾದ ಗೋವಿಂದ ಭಟ್ ಇಡುಕ್ಕಿ ಹಾಗೂ ಬಿ. ಬಾಲಕೃಷ್ಣ ಭಟ್  ತೋಟಕ್ಕೆ ಭೇಟಿ ಮಾಡಿಸಲಾಯಿತು.

ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ವ್ಯವಸ್ಥಾಪನಾ ನಿರ್ದೇಶಕರು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಕೃಷಿಕರಿಗಾಗಿ ಇರುವ ವಿವಿಧ ಯೋಜನೆಗಳು, ಸವಲತ್ತುಗಳು, ಕೃಷಿ ಸಲಕರಣಿಗಳು, ಸಬ್ಸಿಡಿಯಲ್ಲಿ ಸಿಗಬಹುದಾದ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಐ ಐ ಹೆಚ್ ಆರ್ ಬೆಂಗಳೂರುನ ವಿಜ್ಞಾನಿಗಳು ಸಂಶೋಧಿಸಿ ಅಭಿವೃದ್ಧಿ ಪಡಿಸಿದ ಜೈವಿಕ ಪೋಷಕಾಂಶವುಳ್ಳ ಗೊಬ್ಬರವನ್ನು ಕೃಷಿಕರಿಗೆ ಉಚಿತವಾಗಿ ಸಂಸ್ಥೆಯಿಂದ ವಿತರಿಸಿದರು.

ಈ ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಕೃಷಿಕರು, ಬಟ್ಟೆಕಜೆ ರಾಜೇಶ್ ಮತ್ತು ಕೃಷಿಸಖಿಯರಾದ ಪುಷ್ಪಲತಾ ಮಡಪ್ಪಾಡಿ, ಕನಕ ಮಜಲು ಪ್ರೇಮಾ ಅಡ್ಕಾರು, ಜಾಲ್ಸೂರು ವಿಜಯಾ, ಅಜ್ಜಾವರ ಪೂರ್ಣಿಮಾ, ಆಲೆಟ್ಟಿ ಲೋಚನ ಮತ್ತು ಸಂಪಾಜೆ ಗ್ರಾಮದ ಕೃಷಿ ಸಖಿ ಮೋಹಿನಿ ವಿಶ್ವನಾಥ್ ( ನಿಶಾ ) ಪಾಲ್ಗೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

8 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

8 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

9 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

23 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

23 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

2 days ago