Advertisement
ಸುದ್ದಿಗಳು

ಕೃಷಿ ವಿಶ್ವವಿದ್ಯಾಲಯ ರಾಯಚೂರು 21 ದಿನ ಕಾರ್ಯಗಾರ

Share

ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಸಾವಯವ ಕೃಷಿ ಸಂಶೋಧನಾ ಸಂಸ್ಥೆಯಲ್ಲಿಂದು ಆಯೋಜಿಸಿದ್ದ ಸುಸ್ಥಿರ ಮಣ್ಣಿನ ಆರೋಗ್ಯ, ಜೀವನೋಪಾಯ ಕುರಿತ ಕಾರ್ಯಾಗಾರಕ್ಕೆ  ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ. ಹನುಮಂತಪ್ಪ ಚಾಲನೆ ನೀಡಿದರು.

ಈ ವೇಳೆ ವಿಶ್ರಾಂತ ಕುಲಪತಿ ಡಾ. ಡಿ. ಪಿ ಬಿರಾದಾರ್, ಬಳ್ಳಾರಿ ಐಸಿಎಆರ್ ಪ್ರಧಾನ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಬಿ. ಕೃಷ್ಣರಾವ್, ವಿಸ್ತರಣಾ ನಿರ್ದೇಶಕ ಡಾ. ಎನ್. ಶಿವಶಂಕರ್, ಸೇರಿದಂತೆ  ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಡಾ. ಎಂ. ಹನುಮಂತಪ್ಪ, 21 ದಿನಗಳ ಕಾಲ  ಕಾರ್ಯಗಾರ ಹಮ್ಮಿಕೊಳ್ಳಲಾಗಿದ್ದು, ಮಣ್ಣಿನ ಸವೆತ, ಫಲವತ್ತತೆ ಕಾಪಾಡುವಲ್ಲಿ ಗುಣಮಟ್ಟದ ಸುಧಾರಣೆ ತರಲು ಈ ಕಾರ್ಯಗಾರ ಪ್ರಮುಖವಾಗಲಿದೆ ಎಂದು ತಿಳಿಸಿದರು.

ಸುದ್ದಿಗಾರರೊಂದಿಗೆ ಡಾ.  ಎಂ. ಎ. ಬಸವಣೇಪ್ಪ, ಸಾವಯವ ಕೃಷಿ ಮತ್ತು ಆಧುನಿಕ ಕೈಗಾರಿಕೆ ತಂತ್ರಜ್ಞಾನಗಳ ಬಗ್ಗೆ ಹೊಸ ಆವಿಷ್ಕಾರ ಸೇರಿದಂತೆ ವಿವಿಧ ವಿಷಯಗಳ ಕುರಿತು ಕಾರ್ಯಾಗಾರದಲ್ಲಿ ಚಿಂತನಾ-ಮಂಥನ ನಡೆಯಲಿದೆ. ಪ್ರಗತಿಪರ ರೈತರನ್ನು ಭೇಟಿ ಮಾಡಿ ಮಾಹಿತಿ ಪಡೆಯುವ ವ್ಯವಸ್ಥೆ ಕಲ್ಪಿಸಲಾಗಿದೆ. ಕಾರ್ಯಾಗಾರದಲ್ಲಿ ದೇಶದ 8 ರಾಜ್ಯಗಳಿಂದ 25ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದಾರೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

5 hours ago

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

22 hours ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

24 hours ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

1 day ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

1 day ago