ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಸಾವಯವ ಕೃಷಿ ಸಂಶೋಧನಾ ಸಂಸ್ಥೆಯಲ್ಲಿಂದು ಆಯೋಜಿಸಿದ್ದ ಸುಸ್ಥಿರ ಮಣ್ಣಿನ ಆರೋಗ್ಯ, ಜೀವನೋಪಾಯ ಕುರಿತ ಕಾರ್ಯಾಗಾರಕ್ಕೆ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ. ಹನುಮಂತಪ್ಪ ಚಾಲನೆ ನೀಡಿದರು.
ಈ ವೇಳೆ ವಿಶ್ರಾಂತ ಕುಲಪತಿ ಡಾ. ಡಿ. ಪಿ ಬಿರಾದಾರ್, ಬಳ್ಳಾರಿ ಐಸಿಎಆರ್ ಪ್ರಧಾನ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಬಿ. ಕೃಷ್ಣರಾವ್, ವಿಸ್ತರಣಾ ನಿರ್ದೇಶಕ ಡಾ. ಎನ್. ಶಿವಶಂಕರ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಡಾ. ಎಂ. ಹನುಮಂತಪ್ಪ, 21 ದಿನಗಳ ಕಾಲ ಕಾರ್ಯಗಾರ ಹಮ್ಮಿಕೊಳ್ಳಲಾಗಿದ್ದು, ಮಣ್ಣಿನ ಸವೆತ, ಫಲವತ್ತತೆ ಕಾಪಾಡುವಲ್ಲಿ ಗುಣಮಟ್ಟದ ಸುಧಾರಣೆ ತರಲು ಈ ಕಾರ್ಯಗಾರ ಪ್ರಮುಖವಾಗಲಿದೆ ಎಂದು ತಿಳಿಸಿದರು.
ಸುದ್ದಿಗಾರರೊಂದಿಗೆ ಡಾ. ಎಂ. ಎ. ಬಸವಣೇಪ್ಪ, ಸಾವಯವ ಕೃಷಿ ಮತ್ತು ಆಧುನಿಕ ಕೈಗಾರಿಕೆ ತಂತ್ರಜ್ಞಾನಗಳ ಬಗ್ಗೆ ಹೊಸ ಆವಿಷ್ಕಾರ ಸೇರಿದಂತೆ ವಿವಿಧ ವಿಷಯಗಳ ಕುರಿತು ಕಾರ್ಯಾಗಾರದಲ್ಲಿ ಚಿಂತನಾ-ಮಂಥನ ನಡೆಯಲಿದೆ. ಪ್ರಗತಿಪರ ರೈತರನ್ನು ಭೇಟಿ ಮಾಡಿ ಮಾಹಿತಿ ಪಡೆಯುವ ವ್ಯವಸ್ಥೆ ಕಲ್ಪಿಸಲಾಗಿದೆ. ಕಾರ್ಯಾಗಾರದಲ್ಲಿ ದೇಶದ 8 ರಾಜ್ಯಗಳಿಂದ 25ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದಾರೆ ಎಂದರು.
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…