ಕೃಷಿ ತ್ಯಾಜ್ಯಗಳನ್ನು ಬೆಂಕಿಗೆ ಹಾಕೋದಲ್ಲ, ಮಣ್ಣಿಗೆ ಹಾಕಬೇಕು | ಅದರಿಂದಾಗುವ ಲಾಭಗಳ ಬಗ್ಗೆ ತಿಳಿಯಿರಿ..!

March 4, 2024
8:10 PM
ಕೃಷಿ ತ್ಯಾಜ್ಯಗಳನ್ನು ಸುಡುವುದರ ಬದಲಾಗಿ ಮಣ್ಣಿಗೆ ಹಾಕಬೇಕು, ಇದಕ್ಕೆ ಕಾರಣಗಳನ್ನು ಪ್ರಶಾಂತ್‌ ಜಯರಾಮ್‌ ಇಲ್ಲಿ ವಿವರಿಸಿದ್ದಾರೆ..

ಸಾಮಾನ್ಯವಾಗಿ ಯಾವುದೇ ಕೃಷಿ ತ್ಯಾಜ್ಯದಲ್ಲಿ(Agricultural waste) ಎಲ್ಲಾ ರೀತಿಯ ಪೋಷಕಾಂಶ(Nutrition) ಲಭ್ಯವಾಗುತ್ತದೆ. ಪ್ರಧಾನವಾಗಿ ಪರಿಗಣಿಸುವ NPK(ಸಾರಾಜನಕ(Nitrogen), ರಂಜಕ(Phosphorus), ಪೊಟಾಷ್(Potash )ತೆಗೆದುಕೊಂಡರೆ, ಪ್ರತಿ ಟನ್ ಒಂದಕ್ಕೆ 5.5 ಕೆಜಿ ಸಾರಾಜನಕ, 2.5 ಕೆಜಿ ರಂಜಕ, 25 ಕೆಜಿ ಪೊಟ್ಯಾಸಿಯಂ ರೀತಿ 04 ಟನ್ ಕೃಷಿ ತ್ಯಾಜ್ಯದಲ್ಲಿ 22 ಕೆಜಿ ಸಾರಾಜನಕ, 10 ಕೆಜಿ ರಂಜಕ, 100 ಕೆಜಿ ಪೊಟ್ಯಾಸಿಯಂ ಲಭ್ಯವಾಗುತ್ತದೆ.

Advertisement
Advertisement

ಈ ಪ್ರಮಾಣದ NPK ಯನ್ನು ರಸಗೊಬ್ಬರ(Fertilizer) ಮೂಲಕ ಬೆಳೆಗಳಿಗೆ ನೀಡಬೇಕಾದರೆ ಯೂರಿಯಾ :100 ಕೆಜಿ, ಡಿ.ಎ.ಪಿ:20 ಕೆಜಿ, ಮ್ಯೂರೇಟ್ ಆಫ್ ಪೊಟಾಷ್ (MOP):167 ಕೆಜಿ ನೀಡಬೇಕಾಗುತ್ತದೆ. ಈ ಪ್ರಮಾಣದ ರಾಸಾಯನಿಕ ಗೊಬ್ಬರಕ್ಕೆ ತಗುಲುವ ಮೂಲ ಬೆಲೆ ಸುಮಾರು ರೂ 16,000/ ಗಳು, ಈ ಪ್ರಕಾರ 01 ಟನ್ ಕೃಷಿ ತ್ಯಾಜ್ಯದ ಮೌಲ್ಯವನ್ನು ಕೇವಲ ರಸಗೊಬ್ಬರಕ್ಕೆ(NPK) ಸರಿಸಾಮಾನವಾಗಿ ನೋಡಿದಾಗ ರೂ 4000/.

01 ಟನ್ ಕೃಷಿ ತ್ಯಾಜ್ಯಕ್ಕೆ ಬೆಂಕಿ ಹಾಕಿ ಸುಟ್ಟರೆ 1460 ಕೆಜಿ ಕಾರ್ಬನ್ ಡೈಆಕ್ಸೈಡ್ ಜೊತೆಗೆ ನೈಟ್ರಸ್ ಆಕ್ಸೈಡ್, ಕಾರ್ಬನ್ ಮಾನಾಕ್ಸೈಡ್, ಮೀಥೇನ್ ಮತ್ತು ಇನ್ನಿತರೇ ವಿಷಕಾರಕ ಅನಿಲಗಳು ವಾತಾವರಣಕ್ಕೆ ಸೇರುವುದರಿಂದ ಹವಾಮಾನ ಬದಲಾವಣೆಗೆ ಕಾರಣವಾಗಿ ಪರಿಸರದಲ್ಲಿ ಅಸಮತೋಲನ ಉಂಟಾಗುತ್ತದೆ. ಕೃಷಿ ತ್ಯಾಜ್ಯಗಳಿಗೆ ಬೆಂಕಿ ಹಾಕುವುದರಿಂದ ಮಣ್ಣಿನಲ್ಲಿರುವ ಸೊಕ್ಷ್ಮಜೀವಿಗಳು ಸಾಯುತ್ತದೆ. ಮಣ್ಣಿನ ಫಲವತ್ತತೆ ಕುಂಠಿತವಾಗುತ್ತದೆ. ಮಣ್ಣಿನಲ್ಲಿ ಸಾವಯವ ಅಂಶ ಕಡಿಮೆಯಾಗಿ ನೀರನ್ನು ಹಿಡಿದಿಟ್ಟುಕೊಳ್ಳಲು ವಿಫಲವಾಗುತ್ತದೆ,ಕೃಷಿ ತ್ಯಾಜ್ಯವನ್ನು ಸುಡುವುದರಿಂದ ಮತ್ತು ಮಣ್ಣಿಗೆ ಸೇರಿಸುವುದರಿಂದ ಪರಿಸರದ ಮೇಲೆ ಆಗುವ ನಷ್ಟ ಮತ್ತು ಲಾಭವನ್ನು ಹಣದ ರೂಪದಲ್ಲಿ ಲೆಕ್ಕ ಹಾಕಲಾಗದು.

ಕೃಷಿ ಭೂಮಿಯಲ್ಲಿ ಉತ್ಪತ್ತಿಯಾಗುವ ಕೃಷಿ ತ್ಯಾಜ್ಯಗಳನ್ನು ನಿರ್ವಹಣೆ ಮಾಡಲು ಕಾರ್ಮಿಕರ ಅಭಾವ, ತಿಳುವಳಿಕೆ ಕೊರತೆ, ಕೃಷಿ ತ್ಯಾಜ್ಯ ಪುಡಿ ಮಾಡುವ ಯಂತ್ರಗಳ ಅಲಭ್ಯತೆಯಿಂದಾಗಿ ಅತ್ಯಮೂಲ್ಯ ನೈಸರ್ಗಿಕ ಸಂಪತ್ತನ್ನು ಬೆಂಕಿ ಹಾಕಿ ಸುಟ್ಟು ಹಾಕಲಾಗುತ್ತಿದೆ. ಕೃಷಿ ತ್ಯಾಜ್ಯಗಳನ್ನು ಸುಡುವುದರಿಂದ ಪರಿಸರ ಮಾಲಿನ್ಯ ಮತ್ತು ಮಣ್ಣಿನ ಫಲವತ್ತತೆ ನಾಶವಾಗುತ್ತಿರುವುದರಿಂದ ಸಕಲ ಜೀವ ರಾಶಿಗಳ ಆರೋಗ್ಯದ ಮೇಲೆ ಕೆಟ್ಟ ಪರಿಣಾಮಗಳಾಗುತ್ತಿದೆ.

ಕೃಷಿ ತ್ಯಾಜ್ಯಗಳನ್ನು ಮಣ್ಣಿಗೆ ಸೇರಿಸುವುದರಿಂದ ಮಣ್ಣಿನ ಭೌತಿಕ ಮತ್ತು ಜೈವಿಕ ರಚನೆ ಸುಧಾರಿಸುತ್ತದೆ.ಸೂಕ್ಷ್ಮಜೀವಿಗಳ ಸಂಖ್ಯೆ ವೃದ್ಧಿಸುತ್ತದೆ. ಪೋಷಕಾಂಶ ಕೊರತೆ ನೀಗುವುದರಿಂದ ಗೊಬ್ಬರ ಕೊಡುವ ಅವಶ್ಯಕತೆ ಬರುವುದಿಲ್ಲ. ಸಾವಯವ ಇಂಗಾಲ ಹೆಚ್ಚಾಗಿ ನೀರು ಹಿಡಿದಿಡುವ ಸಾಮರ್ಥ್ಯ ಹೆಚ್ಚುತ್ತದೆ. ಪೌಷ್ಟಿಕಭರಿತ ಆಹಾರ ಉತ್ಪತ್ತಿಯಾಗುತ್ತದೆ. ಕೃಷಿ/ತೋಟಗಾರಿಕೆ ಇಲಾಖೆಯವರು ಕೃಷಿ ತ್ಯಾಜ್ಯಗಳನ್ನು ಪುಡಿ ಮಾಡುವ ಯಂತ್ರಗಳನ್ನು (Farm waste Shredder machine) ರೈತರಿಗೆ ಬಾಡಿಗೆ ಆಧಾರದಲ್ಲಿ ಸೇವೆ ನೀಡಲು ಮತ್ತು ರೈತರು ಖರೀದಿಸಲು ಸಬ್ಸಿಡಿ ಮತ್ತು ತಾಂತ್ರಿಕ ಮಾಹಿತಿ ಒದಗಿಸಿ ಕೃಷಿ ತ್ಯಾಜ್ಯಗಳನ್ನು ಬೆಂಕಿಗೆ ಹಾಕೋದಲ್ಲ. ಮಣ್ಣಿಗೆ ಹಾಕಬೇಕು ಅನ್ನೋ ಕಾರ್ಯಕ್ರಮಗಳನ್ನು ವ್ಯಪಾಕವಾಗಿ ಮಾಡಿ ರೈತರಲ್ಲಿ ಜಾಗೃತಿ ಉಂಟು ಮಾಡುವಂತಾಗಲಿ.

Advertisement
ಬರಹ
ಪ್ರಶಾಂತ್ ಜಯರಾಮ್
, ಕೃಷಿಕರು ಮತ್ತು ಕೃಷಿ ಸಲಹೆಗಾರರು, ಮೊಬೈಲ್ :9342434530


Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೆಂಗಳೂರು-ಮೈಸೂರಿನಲ್ಲಿ ವಿವಿಧ  ತಳಿಗಳ ಮಾವು, ಹಲಸು ಪ್ರದರ್ಶನ ಮತ್ತು ಮಾರಾಟ
May 23, 2025
10:04 PM
by: The Rural Mirror ಸುದ್ದಿಜಾಲ
ಸುಳ್ಯದಲ್ಲಿ ಜೇನು ಚಾಕಲೇಟ್ ಬಿಡುಗಡೆ | ಜೇನಿನಿಂದಲೇ ಚಾಕಲೇಟ್ ಉತ್ತಮ ಬೆಳವಣಿಗೆ – ಶೋಭಾ ಕರಂದ್ಲಾಜೆ
May 23, 2025
9:54 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23.05.2025 | ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಉತ್ತಮ ಮಳೆ
May 23, 2025
4:03 PM
by: ಸಾಯಿಶೇಖರ್ ಕರಿಕಳ
ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ಇವರಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಕಡೆಯಿಂದ ಸನ್ಮಾನ
May 23, 2025
3:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group