Advertisement
The Rural Mirror ವಾರದ ವಿಶೇಷ

ಭಾರತದ ಕೃಷಿಯಲ್ಲಿ ಮಹಿಳಾ ಪ್ರಾತಿನಿಧ್ಯಕ್ಕೆ ಆದ್ಯತೆ |

Share

ಕೃಷಿ ಶಿಕ್ಷಣ ಕಾರ್ಯಕ್ರಮಗಳಲ್ಲಿ ಒಟ್ಟು ದಾಖಲಾತಿಯಲ್ಲಿ ಮಹಿಳೆಯರು ಶೇ. 30-40 ರಷ್ಟಿದ್ದರೂ, ಈ ವಲಯದಲ್ಲಿ ಉದ್ಯೋಗಕ್ಕೆ ಪರಿವರ್ತನೆಗೊಳ್ಳುವ ಪ್ರಮಾಣ ಬಹಳ ಕಡಿಮೆ ಎಂದು ಭಾರತದ ಕೃಷಿ ವಲಯದಲ್ಲಿನ ಹೊಸ ವರದಿಯೊಂದು ಗಮನ ಸೆಳೆದಿದೆ. ಕೃಷಿ ಕಾರ್ಯಪಡೆಯಲ್ಲಿ ಮಹಿಳೆಯರು 64.4% ರಷ್ಟಿದ್ದರೂ, ಕೇವಲ 6-10% ಮಾತ್ರ ಉನ್ನತ ಕೃಷಿ ವ್ಯವಹಾರ ಮತ್ತು ಸಂಬಂಧಿತ ಕಂಪನಿಗಳಲ್ಲಿ ಸ್ಥಾನಗಳನ್ನು ಹೊಂದಿದ್ದಾರೆ.
ಭಾರತದ ಕೃಷಿ ವಲಯದಲ್ಲಿನ ತೀವ್ರ ವ್ಯತಿರಿಕ್ತತೆಯ ವರದಿ ಇದು ಎಂದು ವರದಿ ಹೇಳಿದೆ.

“ಕೃಷಿ ವ್ಯವಹಾರದಲ್ಲಿ ಮಹಿಳೆಯರು – ಅವಕಾಶಗಳು ಮತ್ತು ಸವಾಲುಗಳು” ಎಂಬ ಶೀರ್ಷಿಕೆಯ ಈ ವರದಿಯನ್ನು ಗೋದ್ರೇಜ್ ಆಗ್ರೋವೆಟ್ ಲಿಮಿಟೆಡ್ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಅಹಮದಾಬಾದ್ ಮತ್ತು ಗೋದ್ರೇಜ್  ಲ್ಯಾಬ್ ಸಹಯೋಗದೊಂದಿಗೆ ಆಯೋಜಿಸಿದ್ದ ಎರಡನೇ ಕೃಷಿ ಮಹಿಳಾ ಸಭೆಯಲ್ಲಿ ಈ ವರದಿಯನ್ನು ಅನಾವರಣಗೊಳಿಸಲಾಯಿತು ಹಾಗೂ ವಿಶ್ಲೇಷಿಸಲಾಯಿತು. ಮಹಿಳೆಯರನ್ನು ಕೃಷಿ ಕ್ಷೇತ್ರದಲ್ಲೂ ಸಬಲೀಕರಣಗೊಳಿಸುವ ಮೂಲಕ ಕೃಷಿಯ ಭವಿಷ್ಯವನ್ನು ಇನ್ನಷ್ಟು ಗಟ್ಟಿ ಮಾಡಬಹುದು ಎನ್ನುವುದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.  ಕೃಷಿ ಶಿಕ್ಷಣ ಕಾರ್ಯಕ್ರಮಗಳಲ್ಲಿ ಒಟ್ಟು ದಾಖಲಾತಿಯಲ್ಲಿ ಮಹಿಳೆಯರು ಶೇ. 30-40 ರಷ್ಟಿದ್ದರೂ, ಈ ವಲಯದಲ್ಲಿ ಉದ್ಯೋಗಕ್ಕೆ ಪರಿವರ್ತನೆಗೊಳ್ಳುವ ಪ್ರಮಾಣ ಬಹಳ ಕಡಿಮೆ ಎಂದು ವರದಿ ಗಮನಸೆಳೆದಿದೆ.

ಐಐಎಂಎಯ ಅಧ್ಯಾಪಕ ಸದಸ್ಯೆ ವಿದ್ಯಾ ಅವರು ಈ ಡಾಟಾವು ವಿರೋಧಾಭಾಸವಾಗಿದೆ ಎಂದಿದ್ದಾರೆ. ಕೃಷಿ ಕಾರ್ಯಪಡೆ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಮಹಿಳೆಯರು ಗುರುತಿಸಿಕೊಂಡರೂ  ಕೃಷಿ  ಉದ್ಯೋಗ ದ ವೇಳೆ ಹಿಂದೆ ಉಳಿಯುವುದರ ಬಗ್ಗೆ ಕಾರಣ ಹುಡುಕಬೇಕಿದೆ ಎಂದಿದ್ದಾರೆ.

ಕೃಷಿಯ ಭವಿಷ್ಯವು ಭಾರತದಲ್ಲಿ ಇನ್ನಷ್ಟು ಗಟ್ಟಿಯಾಗಲು ಮಹಿಳಾ ಪ್ರಾತಿನಿಧ್ಯ ಕೃಷಿಯಲ್ಲೂ ಹೆಚ್ಚಾಗಬೇಕು, ಅದು ಉದ್ಯೋಗವಾಗಿ ಪರಿವರ್ತನೆಯಾಗಬೇಕು, ಅಷ್ಟೇ ಅಲ್ಲ ಕೃಷಿ ಸಂಸ್ಥೆಗಳಲ್ಲೂ ಮಹಿಳೆಯರು ಉದ್ಯೋಗ ಪಡೆಯಬೇಕು.ಈ ಮೂಲಕ ಕೃಷಿಯ ಉಳಿವು ಕೂಡಾ ಸಾಧ್ಯವಿದೆ ಎನ್ನುವುದು ವರದಿಯ ಸಾರಂಶ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

4 hours ago

ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ

ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್‌ ಮತ್ತು ಆಹಾರ ವಿತರಣೆ…

4 hours ago

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

9 hours ago

ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ

Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…

9 hours ago

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…

9 hours ago

ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ

ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…

9 hours ago