Advertisement
The Rural Mirror ವಾರದ ವಿಶೇಷ

ಭಾರತದ ಕೃಷಿಯಲ್ಲಿ ಮಹಿಳಾ ಪ್ರಾತಿನಿಧ್ಯಕ್ಕೆ ಆದ್ಯತೆ |

Share

ಕೃಷಿ ಶಿಕ್ಷಣ ಕಾರ್ಯಕ್ರಮಗಳಲ್ಲಿ ಒಟ್ಟು ದಾಖಲಾತಿಯಲ್ಲಿ ಮಹಿಳೆಯರು ಶೇ. 30-40 ರಷ್ಟಿದ್ದರೂ, ಈ ವಲಯದಲ್ಲಿ ಉದ್ಯೋಗಕ್ಕೆ ಪರಿವರ್ತನೆಗೊಳ್ಳುವ ಪ್ರಮಾಣ ಬಹಳ ಕಡಿಮೆ ಎಂದು ಭಾರತದ ಕೃಷಿ ವಲಯದಲ್ಲಿನ ಹೊಸ ವರದಿಯೊಂದು ಗಮನ ಸೆಳೆದಿದೆ. ಕೃಷಿ ಕಾರ್ಯಪಡೆಯಲ್ಲಿ ಮಹಿಳೆಯರು 64.4% ರಷ್ಟಿದ್ದರೂ, ಕೇವಲ 6-10% ಮಾತ್ರ ಉನ್ನತ ಕೃಷಿ ವ್ಯವಹಾರ ಮತ್ತು ಸಂಬಂಧಿತ ಕಂಪನಿಗಳಲ್ಲಿ ಸ್ಥಾನಗಳನ್ನು ಹೊಂದಿದ್ದಾರೆ.
ಭಾರತದ ಕೃಷಿ ವಲಯದಲ್ಲಿನ ತೀವ್ರ ವ್ಯತಿರಿಕ್ತತೆಯ ವರದಿ ಇದು ಎಂದು ವರದಿ ಹೇಳಿದೆ.

“ಕೃಷಿ ವ್ಯವಹಾರದಲ್ಲಿ ಮಹಿಳೆಯರು – ಅವಕಾಶಗಳು ಮತ್ತು ಸವಾಲುಗಳು” ಎಂಬ ಶೀರ್ಷಿಕೆಯ ಈ ವರದಿಯನ್ನು ಗೋದ್ರೇಜ್ ಆಗ್ರೋವೆಟ್ ಲಿಮಿಟೆಡ್ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಅಹಮದಾಬಾದ್ ಮತ್ತು ಗೋದ್ರೇಜ್  ಲ್ಯಾಬ್ ಸಹಯೋಗದೊಂದಿಗೆ ಆಯೋಜಿಸಿದ್ದ ಎರಡನೇ ಕೃಷಿ ಮಹಿಳಾ ಸಭೆಯಲ್ಲಿ ಈ ವರದಿಯನ್ನು ಅನಾವರಣಗೊಳಿಸಲಾಯಿತು ಹಾಗೂ ವಿಶ್ಲೇಷಿಸಲಾಯಿತು. ಮಹಿಳೆಯರನ್ನು ಕೃಷಿ ಕ್ಷೇತ್ರದಲ್ಲೂ ಸಬಲೀಕರಣಗೊಳಿಸುವ ಮೂಲಕ ಕೃಷಿಯ ಭವಿಷ್ಯವನ್ನು ಇನ್ನಷ್ಟು ಗಟ್ಟಿ ಮಾಡಬಹುದು ಎನ್ನುವುದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.  ಕೃಷಿ ಶಿಕ್ಷಣ ಕಾರ್ಯಕ್ರಮಗಳಲ್ಲಿ ಒಟ್ಟು ದಾಖಲಾತಿಯಲ್ಲಿ ಮಹಿಳೆಯರು ಶೇ. 30-40 ರಷ್ಟಿದ್ದರೂ, ಈ ವಲಯದಲ್ಲಿ ಉದ್ಯೋಗಕ್ಕೆ ಪರಿವರ್ತನೆಗೊಳ್ಳುವ ಪ್ರಮಾಣ ಬಹಳ ಕಡಿಮೆ ಎಂದು ವರದಿ ಗಮನಸೆಳೆದಿದೆ.

ಐಐಎಂಎಯ ಅಧ್ಯಾಪಕ ಸದಸ್ಯೆ ವಿದ್ಯಾ ಅವರು ಈ ಡಾಟಾವು ವಿರೋಧಾಭಾಸವಾಗಿದೆ ಎಂದಿದ್ದಾರೆ. ಕೃಷಿ ಕಾರ್ಯಪಡೆ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಮಹಿಳೆಯರು ಗುರುತಿಸಿಕೊಂಡರೂ  ಕೃಷಿ  ಉದ್ಯೋಗ ದ ವೇಳೆ ಹಿಂದೆ ಉಳಿಯುವುದರ ಬಗ್ಗೆ ಕಾರಣ ಹುಡುಕಬೇಕಿದೆ ಎಂದಿದ್ದಾರೆ.

ಕೃಷಿಯ ಭವಿಷ್ಯವು ಭಾರತದಲ್ಲಿ ಇನ್ನಷ್ಟು ಗಟ್ಟಿಯಾಗಲು ಮಹಿಳಾ ಪ್ರಾತಿನಿಧ್ಯ ಕೃಷಿಯಲ್ಲೂ ಹೆಚ್ಚಾಗಬೇಕು, ಅದು ಉದ್ಯೋಗವಾಗಿ ಪರಿವರ್ತನೆಯಾಗಬೇಕು, ಅಷ್ಟೇ ಅಲ್ಲ ಕೃಷಿ ಸಂಸ್ಥೆಗಳಲ್ಲೂ ಮಹಿಳೆಯರು ಉದ್ಯೋಗ ಪಡೆಯಬೇಕು.ಈ ಮೂಲಕ ಕೃಷಿಯ ಉಳಿವು ಕೂಡಾ ಸಾಧ್ಯವಿದೆ ಎನ್ನುವುದು ವರದಿಯ ಸಾರಂಶ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

17 hours ago

ಕೂದಲಿಗೆ ಬಳಸುವ ಎಣ್ಣೆಯ ಪ್ರಯೋಜನ

ಚಳಿಗಾಲ ಎಂದರೆ ಒಂದು ರೀತಿಯಲ್ಲಿ ಕಿರಿಕಿರಿ. ವಯಸ್ಸಾದವರಂತೆ ಚರ್ಮ ಸುಕ್ಕು ಕಟ್ಟುವುದು, ಆರೋಗ್ಯದಲ್ಲಿ…

23 hours ago

ಚಳಿಗಾಲದಲ್ಲಿ ಹೃದಯದ ಕಾಳಜಿಯ ಬಗ್ಗೆ ನಿರ್ಲಕ್ಷ್ಯ ಬೇಡ- ಎಚ್ಚರಿಕೆ ಇರಲಿ

ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣುತ್ತದೆ. ಆದರಲ್ಲೂ ಹೃದಯದ ಸಮಸ್ಯೆಗಳ ಬಗ್ಗೆ ಕಾಳಜಿ…

23 hours ago

ಮಹಿಳೆಯರಿಗಾಗಿ ಉಚಿತ ಆರಿ ವರ್ಕ್ಸ್ ತರಬೇತಿ

ಮಹಿಳೆಯರು ಸಹ ಉದ್ಯೋಗವನ್ನು ಮಾಡಬೇಕೆಂದು ಸರ್ಕಾರವು ಅನೇಕ ರೀತಿಯ ಯೋಜನೆಯನ್ನು ಜಾರಿಗೊಳಿಸಿದ್ದು, ಟ್ರೈಲರಿಂಗ್…

23 hours ago

ಮೊಟ್ಟೆಯಲ್ಲಿ ಅಪಾಯಕಾರಿ ಕ್ಯಾನ್ಸರ್ ಅಂಶ ಪತ್ತೆ ಎಂಬ ಊಹಪೋಹಗಳಿಗೆ ಬ್ರೇಕ್

ಮೊಟ್ಟೆಗಳು ಉತ್ತಮ ಗುಣಮಟ್ಟದ ಪ್ರೋಟೀನ್ ಅಂಶ ವಾಗಿದ್ದು, ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ನೀಡುತ್ತಿದ್ದರು.…

23 hours ago

ಗೃಹಲಕ್ಷ್ಮಿ ಸಹಕಾರ ಬ್ಯಾಂಕ್ ಕಡಿಮೆ ಬಡ್ಡಿಯಲಿ ಸಾಲ ಪಡೆಯಿರಿ

ಹಣದ ಅವಶ್ಯಕತೆಯಿರುವ ಎಲ್ಲರೂ ಬ್ಯಾಂಕ್ ಗಳಲ್ಲಿ ಸಾಲಕ್ಕೆ ಮೊರೆ ಹೋಗಿ ಅಧಿಕ ಬಡ್ಡಿಯನ್ನು…

23 hours ago