Advertisement
The Rural Mirror ವಾರದ ವಿಶೇಷ

ಭಾರತದ ಕೃಷಿಯಲ್ಲಿ ಮಹಿಳಾ ಪ್ರಾತಿನಿಧ್ಯಕ್ಕೆ ಆದ್ಯತೆ |

Share

ಕೃಷಿ ಶಿಕ್ಷಣ ಕಾರ್ಯಕ್ರಮಗಳಲ್ಲಿ ಒಟ್ಟು ದಾಖಲಾತಿಯಲ್ಲಿ ಮಹಿಳೆಯರು ಶೇ. 30-40 ರಷ್ಟಿದ್ದರೂ, ಈ ವಲಯದಲ್ಲಿ ಉದ್ಯೋಗಕ್ಕೆ ಪರಿವರ್ತನೆಗೊಳ್ಳುವ ಪ್ರಮಾಣ ಬಹಳ ಕಡಿಮೆ ಎಂದು ಭಾರತದ ಕೃಷಿ ವಲಯದಲ್ಲಿನ ಹೊಸ ವರದಿಯೊಂದು ಗಮನ ಸೆಳೆದಿದೆ. ಕೃಷಿ ಕಾರ್ಯಪಡೆಯಲ್ಲಿ ಮಹಿಳೆಯರು 64.4% ರಷ್ಟಿದ್ದರೂ, ಕೇವಲ 6-10% ಮಾತ್ರ ಉನ್ನತ ಕೃಷಿ ವ್ಯವಹಾರ ಮತ್ತು ಸಂಬಂಧಿತ ಕಂಪನಿಗಳಲ್ಲಿ ಸ್ಥಾನಗಳನ್ನು ಹೊಂದಿದ್ದಾರೆ.
ಭಾರತದ ಕೃಷಿ ವಲಯದಲ್ಲಿನ ತೀವ್ರ ವ್ಯತಿರಿಕ್ತತೆಯ ವರದಿ ಇದು ಎಂದು ವರದಿ ಹೇಳಿದೆ.

“ಕೃಷಿ ವ್ಯವಹಾರದಲ್ಲಿ ಮಹಿಳೆಯರು – ಅವಕಾಶಗಳು ಮತ್ತು ಸವಾಲುಗಳು” ಎಂಬ ಶೀರ್ಷಿಕೆಯ ಈ ವರದಿಯನ್ನು ಗೋದ್ರೇಜ್ ಆಗ್ರೋವೆಟ್ ಲಿಮಿಟೆಡ್ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಅಹಮದಾಬಾದ್ ಮತ್ತು ಗೋದ್ರೇಜ್  ಲ್ಯಾಬ್ ಸಹಯೋಗದೊಂದಿಗೆ ಆಯೋಜಿಸಿದ್ದ ಎರಡನೇ ಕೃಷಿ ಮಹಿಳಾ ಸಭೆಯಲ್ಲಿ ಈ ವರದಿಯನ್ನು ಅನಾವರಣಗೊಳಿಸಲಾಯಿತು ಹಾಗೂ ವಿಶ್ಲೇಷಿಸಲಾಯಿತು. ಮಹಿಳೆಯರನ್ನು ಕೃಷಿ ಕ್ಷೇತ್ರದಲ್ಲೂ ಸಬಲೀಕರಣಗೊಳಿಸುವ ಮೂಲಕ ಕೃಷಿಯ ಭವಿಷ್ಯವನ್ನು ಇನ್ನಷ್ಟು ಗಟ್ಟಿ ಮಾಡಬಹುದು ಎನ್ನುವುದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.  ಕೃಷಿ ಶಿಕ್ಷಣ ಕಾರ್ಯಕ್ರಮಗಳಲ್ಲಿ ಒಟ್ಟು ದಾಖಲಾತಿಯಲ್ಲಿ ಮಹಿಳೆಯರು ಶೇ. 30-40 ರಷ್ಟಿದ್ದರೂ, ಈ ವಲಯದಲ್ಲಿ ಉದ್ಯೋಗಕ್ಕೆ ಪರಿವರ್ತನೆಗೊಳ್ಳುವ ಪ್ರಮಾಣ ಬಹಳ ಕಡಿಮೆ ಎಂದು ವರದಿ ಗಮನಸೆಳೆದಿದೆ.

ಐಐಎಂಎಯ ಅಧ್ಯಾಪಕ ಸದಸ್ಯೆ ವಿದ್ಯಾ ಅವರು ಈ ಡಾಟಾವು ವಿರೋಧಾಭಾಸವಾಗಿದೆ ಎಂದಿದ್ದಾರೆ. ಕೃಷಿ ಕಾರ್ಯಪಡೆ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಮಹಿಳೆಯರು ಗುರುತಿಸಿಕೊಂಡರೂ  ಕೃಷಿ  ಉದ್ಯೋಗ ದ ವೇಳೆ ಹಿಂದೆ ಉಳಿಯುವುದರ ಬಗ್ಗೆ ಕಾರಣ ಹುಡುಕಬೇಕಿದೆ ಎಂದಿದ್ದಾರೆ.

ಕೃಷಿಯ ಭವಿಷ್ಯವು ಭಾರತದಲ್ಲಿ ಇನ್ನಷ್ಟು ಗಟ್ಟಿಯಾಗಲು ಮಹಿಳಾ ಪ್ರಾತಿನಿಧ್ಯ ಕೃಷಿಯಲ್ಲೂ ಹೆಚ್ಚಾಗಬೇಕು, ಅದು ಉದ್ಯೋಗವಾಗಿ ಪರಿವರ್ತನೆಯಾಗಬೇಕು, ಅಷ್ಟೇ ಅಲ್ಲ ಕೃಷಿ ಸಂಸ್ಥೆಗಳಲ್ಲೂ ಮಹಿಳೆಯರು ಉದ್ಯೋಗ ಪಡೆಯಬೇಕು.ಈ ಮೂಲಕ ಕೃಷಿಯ ಉಳಿವು ಕೂಡಾ ಸಾಧ್ಯವಿದೆ ಎನ್ನುವುದು ವರದಿಯ ಸಾರಂಶ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

5 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

6 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

7 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

8 hours ago

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

14 hours ago