Advertisement
The Rural Mirror ವಾರದ ವಿಶೇಷ

ಭಾರತದ ಕೃಷಿಯಲ್ಲಿ ಮಹಿಳಾ ಪ್ರಾತಿನಿಧ್ಯಕ್ಕೆ ಆದ್ಯತೆ |

Share

ಕೃಷಿ ಶಿಕ್ಷಣ ಕಾರ್ಯಕ್ರಮಗಳಲ್ಲಿ ಒಟ್ಟು ದಾಖಲಾತಿಯಲ್ಲಿ ಮಹಿಳೆಯರು ಶೇ. 30-40 ರಷ್ಟಿದ್ದರೂ, ಈ ವಲಯದಲ್ಲಿ ಉದ್ಯೋಗಕ್ಕೆ ಪರಿವರ್ತನೆಗೊಳ್ಳುವ ಪ್ರಮಾಣ ಬಹಳ ಕಡಿಮೆ ಎಂದು ಭಾರತದ ಕೃಷಿ ವಲಯದಲ್ಲಿನ ಹೊಸ ವರದಿಯೊಂದು ಗಮನ ಸೆಳೆದಿದೆ. ಕೃಷಿ ಕಾರ್ಯಪಡೆಯಲ್ಲಿ ಮಹಿಳೆಯರು 64.4% ರಷ್ಟಿದ್ದರೂ, ಕೇವಲ 6-10% ಮಾತ್ರ ಉನ್ನತ ಕೃಷಿ ವ್ಯವಹಾರ ಮತ್ತು ಸಂಬಂಧಿತ ಕಂಪನಿಗಳಲ್ಲಿ ಸ್ಥಾನಗಳನ್ನು ಹೊಂದಿದ್ದಾರೆ.
ಭಾರತದ ಕೃಷಿ ವಲಯದಲ್ಲಿನ ತೀವ್ರ ವ್ಯತಿರಿಕ್ತತೆಯ ವರದಿ ಇದು ಎಂದು ವರದಿ ಹೇಳಿದೆ.

“ಕೃಷಿ ವ್ಯವಹಾರದಲ್ಲಿ ಮಹಿಳೆಯರು – ಅವಕಾಶಗಳು ಮತ್ತು ಸವಾಲುಗಳು” ಎಂಬ ಶೀರ್ಷಿಕೆಯ ಈ ವರದಿಯನ್ನು ಗೋದ್ರೇಜ್ ಆಗ್ರೋವೆಟ್ ಲಿಮಿಟೆಡ್ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಅಹಮದಾಬಾದ್ ಮತ್ತು ಗೋದ್ರೇಜ್  ಲ್ಯಾಬ್ ಸಹಯೋಗದೊಂದಿಗೆ ಆಯೋಜಿಸಿದ್ದ ಎರಡನೇ ಕೃಷಿ ಮಹಿಳಾ ಸಭೆಯಲ್ಲಿ ಈ ವರದಿಯನ್ನು ಅನಾವರಣಗೊಳಿಸಲಾಯಿತು ಹಾಗೂ ವಿಶ್ಲೇಷಿಸಲಾಯಿತು. ಮಹಿಳೆಯರನ್ನು ಕೃಷಿ ಕ್ಷೇತ್ರದಲ್ಲೂ ಸಬಲೀಕರಣಗೊಳಿಸುವ ಮೂಲಕ ಕೃಷಿಯ ಭವಿಷ್ಯವನ್ನು ಇನ್ನಷ್ಟು ಗಟ್ಟಿ ಮಾಡಬಹುದು ಎನ್ನುವುದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.  ಕೃಷಿ ಶಿಕ್ಷಣ ಕಾರ್ಯಕ್ರಮಗಳಲ್ಲಿ ಒಟ್ಟು ದಾಖಲಾತಿಯಲ್ಲಿ ಮಹಿಳೆಯರು ಶೇ. 30-40 ರಷ್ಟಿದ್ದರೂ, ಈ ವಲಯದಲ್ಲಿ ಉದ್ಯೋಗಕ್ಕೆ ಪರಿವರ್ತನೆಗೊಳ್ಳುವ ಪ್ರಮಾಣ ಬಹಳ ಕಡಿಮೆ ಎಂದು ವರದಿ ಗಮನಸೆಳೆದಿದೆ.

ಐಐಎಂಎಯ ಅಧ್ಯಾಪಕ ಸದಸ್ಯೆ ವಿದ್ಯಾ ಅವರು ಈ ಡಾಟಾವು ವಿರೋಧಾಭಾಸವಾಗಿದೆ ಎಂದಿದ್ದಾರೆ. ಕೃಷಿ ಕಾರ್ಯಪಡೆ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಮಹಿಳೆಯರು ಗುರುತಿಸಿಕೊಂಡರೂ  ಕೃಷಿ  ಉದ್ಯೋಗ ದ ವೇಳೆ ಹಿಂದೆ ಉಳಿಯುವುದರ ಬಗ್ಗೆ ಕಾರಣ ಹುಡುಕಬೇಕಿದೆ ಎಂದಿದ್ದಾರೆ.

ಕೃಷಿಯ ಭವಿಷ್ಯವು ಭಾರತದಲ್ಲಿ ಇನ್ನಷ್ಟು ಗಟ್ಟಿಯಾಗಲು ಮಹಿಳಾ ಪ್ರಾತಿನಿಧ್ಯ ಕೃಷಿಯಲ್ಲೂ ಹೆಚ್ಚಾಗಬೇಕು, ಅದು ಉದ್ಯೋಗವಾಗಿ ಪರಿವರ್ತನೆಯಾಗಬೇಕು, ಅಷ್ಟೇ ಅಲ್ಲ ಕೃಷಿ ಸಂಸ್ಥೆಗಳಲ್ಲೂ ಮಹಿಳೆಯರು ಉದ್ಯೋಗ ಪಡೆಯಬೇಕು.ಈ ಮೂಲಕ ಕೃಷಿಯ ಉಳಿವು ಕೂಡಾ ಸಾಧ್ಯವಿದೆ ಎನ್ನುವುದು ವರದಿಯ ಸಾರಂಶ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

19 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

19 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

19 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

1 day ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

1 day ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

1 day ago