Advertisement
The Rural Mirror ವಾರದ ವಿಶೇಷ

ಭಾರತದ ಕೃಷಿಯಲ್ಲಿ ಮಹಿಳಾ ಪ್ರಾತಿನಿಧ್ಯಕ್ಕೆ ಆದ್ಯತೆ |

Share

ಕೃಷಿ ಶಿಕ್ಷಣ ಕಾರ್ಯಕ್ರಮಗಳಲ್ಲಿ ಒಟ್ಟು ದಾಖಲಾತಿಯಲ್ಲಿ ಮಹಿಳೆಯರು ಶೇ. 30-40 ರಷ್ಟಿದ್ದರೂ, ಈ ವಲಯದಲ್ಲಿ ಉದ್ಯೋಗಕ್ಕೆ ಪರಿವರ್ತನೆಗೊಳ್ಳುವ ಪ್ರಮಾಣ ಬಹಳ ಕಡಿಮೆ ಎಂದು ಭಾರತದ ಕೃಷಿ ವಲಯದಲ್ಲಿನ ಹೊಸ ವರದಿಯೊಂದು ಗಮನ ಸೆಳೆದಿದೆ. ಕೃಷಿ ಕಾರ್ಯಪಡೆಯಲ್ಲಿ ಮಹಿಳೆಯರು 64.4% ರಷ್ಟಿದ್ದರೂ, ಕೇವಲ 6-10% ಮಾತ್ರ ಉನ್ನತ ಕೃಷಿ ವ್ಯವಹಾರ ಮತ್ತು ಸಂಬಂಧಿತ ಕಂಪನಿಗಳಲ್ಲಿ ಸ್ಥಾನಗಳನ್ನು ಹೊಂದಿದ್ದಾರೆ.
ಭಾರತದ ಕೃಷಿ ವಲಯದಲ್ಲಿನ ತೀವ್ರ ವ್ಯತಿರಿಕ್ತತೆಯ ವರದಿ ಇದು ಎಂದು ವರದಿ ಹೇಳಿದೆ.

“ಕೃಷಿ ವ್ಯವಹಾರದಲ್ಲಿ ಮಹಿಳೆಯರು – ಅವಕಾಶಗಳು ಮತ್ತು ಸವಾಲುಗಳು” ಎಂಬ ಶೀರ್ಷಿಕೆಯ ಈ ವರದಿಯನ್ನು ಗೋದ್ರೇಜ್ ಆಗ್ರೋವೆಟ್ ಲಿಮಿಟೆಡ್ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಅಹಮದಾಬಾದ್ ಮತ್ತು ಗೋದ್ರೇಜ್  ಲ್ಯಾಬ್ ಸಹಯೋಗದೊಂದಿಗೆ ಆಯೋಜಿಸಿದ್ದ ಎರಡನೇ ಕೃಷಿ ಮಹಿಳಾ ಸಭೆಯಲ್ಲಿ ಈ ವರದಿಯನ್ನು ಅನಾವರಣಗೊಳಿಸಲಾಯಿತು ಹಾಗೂ ವಿಶ್ಲೇಷಿಸಲಾಯಿತು. ಮಹಿಳೆಯರನ್ನು ಕೃಷಿ ಕ್ಷೇತ್ರದಲ್ಲೂ ಸಬಲೀಕರಣಗೊಳಿಸುವ ಮೂಲಕ ಕೃಷಿಯ ಭವಿಷ್ಯವನ್ನು ಇನ್ನಷ್ಟು ಗಟ್ಟಿ ಮಾಡಬಹುದು ಎನ್ನುವುದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.  ಕೃಷಿ ಶಿಕ್ಷಣ ಕಾರ್ಯಕ್ರಮಗಳಲ್ಲಿ ಒಟ್ಟು ದಾಖಲಾತಿಯಲ್ಲಿ ಮಹಿಳೆಯರು ಶೇ. 30-40 ರಷ್ಟಿದ್ದರೂ, ಈ ವಲಯದಲ್ಲಿ ಉದ್ಯೋಗಕ್ಕೆ ಪರಿವರ್ತನೆಗೊಳ್ಳುವ ಪ್ರಮಾಣ ಬಹಳ ಕಡಿಮೆ ಎಂದು ವರದಿ ಗಮನಸೆಳೆದಿದೆ.

ಐಐಎಂಎಯ ಅಧ್ಯಾಪಕ ಸದಸ್ಯೆ ವಿದ್ಯಾ ಅವರು ಈ ಡಾಟಾವು ವಿರೋಧಾಭಾಸವಾಗಿದೆ ಎಂದಿದ್ದಾರೆ. ಕೃಷಿ ಕಾರ್ಯಪಡೆ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಮಹಿಳೆಯರು ಗುರುತಿಸಿಕೊಂಡರೂ  ಕೃಷಿ  ಉದ್ಯೋಗ ದ ವೇಳೆ ಹಿಂದೆ ಉಳಿಯುವುದರ ಬಗ್ಗೆ ಕಾರಣ ಹುಡುಕಬೇಕಿದೆ ಎಂದಿದ್ದಾರೆ.

ಕೃಷಿಯ ಭವಿಷ್ಯವು ಭಾರತದಲ್ಲಿ ಇನ್ನಷ್ಟು ಗಟ್ಟಿಯಾಗಲು ಮಹಿಳಾ ಪ್ರಾತಿನಿಧ್ಯ ಕೃಷಿಯಲ್ಲೂ ಹೆಚ್ಚಾಗಬೇಕು, ಅದು ಉದ್ಯೋಗವಾಗಿ ಪರಿವರ್ತನೆಯಾಗಬೇಕು, ಅಷ್ಟೇ ಅಲ್ಲ ಕೃಷಿ ಸಂಸ್ಥೆಗಳಲ್ಲೂ ಮಹಿಳೆಯರು ಉದ್ಯೋಗ ಪಡೆಯಬೇಕು.ಈ ಮೂಲಕ ಕೃಷಿಯ ಉಳಿವು ಕೂಡಾ ಸಾಧ್ಯವಿದೆ ಎನ್ನುವುದು ವರದಿಯ ಸಾರಂಶ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

6 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

13 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago