ನಮ್ಮ ದೇಶ ಹಾಗೂ ರಾಜ್ಯದ ಕೃಷಿ ಇಳುವರಿ ಇತರೇ ದೇಶಗಳಿಗೆ ಹೋಲಿಸಿದರೆ ನಿಗದಿತ ಪ್ರಮಾಣದಲ್ಲಿ ಏರಿಕೆಯಾಗದೆ ಇರುವ ಬಗ್ಗೆ ಕೃಷಿ ವಿಜ್ಞಾನಿಗಳು ಪರಿಶೀಲನೆ ನಡೆಸಬೇಕೆಂದು ರಾಜ್ಯ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ತಿಳಿಸಿದ್ದಾರೆ.
ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಇಂದು 24ನೇ ಸಾಲಿನ ಕೃಷಿ ಮೇಳ ಉದ್ಘಾಟಿಸಿ ಸಾಧಕ ಕೃಷಿಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಕೃಷಿ ವಿಜ್ಞಾನಿಗಳು ರೈತರ ಸಮಸ್ಯೆ ಆಲಿಸಿ ಪರಿಹಾರ ನೀಡಬೇಕು. ಜಿಲ್ಲೆಯಲ್ಲಿ ಕೃಷಿ ಸಮಸ್ಯೆಗಳ ಹಾಗೂ ಪರಿಹಾರಗಳ ಬಗ್ಗೆ ಜಿಲ್ಲಾಡಳಿತದ ಜೊತೆ ಆಗಾಗ್ಗೆ ಚರ್ಚಿಸಬೇಕು. ಕಂದಾಯ ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳು ಜೊತೆಗೂಡಿ ಸಹಕಾರದಿಂದ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.
ಸಭಾಪತಿ ಬಸವರಾಜ ಹೊರಟ್ಟಿ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಕರು ಕೃಷಿಯಿಂದ ದೂರವಾಗುತ್ತಿದ್ದು, ಕೃಷಿ ಕಾರ್ಮಿಕರು ದೊರೆಯುತ್ತಿಲ್ಲವೆಂದು ಕಳವಳ ವ್ಯಕ್ತಪಡಿಸಿದರು.
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…