ನಮ್ಮ ದೇಶ ಹಾಗೂ ರಾಜ್ಯದ ಕೃಷಿ ಇಳುವರಿ ಇತರೇ ದೇಶಗಳಿಗೆ ಹೋಲಿಸಿದರೆ ನಿಗದಿತ ಪ್ರಮಾಣದಲ್ಲಿ ಏರಿಕೆಯಾಗದೆ ಇರುವ ಬಗ್ಗೆ ಕೃಷಿ ವಿಜ್ಞಾನಿಗಳು ಪರಿಶೀಲನೆ ನಡೆಸಬೇಕೆಂದು ರಾಜ್ಯ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ತಿಳಿಸಿದ್ದಾರೆ.
ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಇಂದು 24ನೇ ಸಾಲಿನ ಕೃಷಿ ಮೇಳ ಉದ್ಘಾಟಿಸಿ ಸಾಧಕ ಕೃಷಿಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಕೃಷಿ ವಿಜ್ಞಾನಿಗಳು ರೈತರ ಸಮಸ್ಯೆ ಆಲಿಸಿ ಪರಿಹಾರ ನೀಡಬೇಕು. ಜಿಲ್ಲೆಯಲ್ಲಿ ಕೃಷಿ ಸಮಸ್ಯೆಗಳ ಹಾಗೂ ಪರಿಹಾರಗಳ ಬಗ್ಗೆ ಜಿಲ್ಲಾಡಳಿತದ ಜೊತೆ ಆಗಾಗ್ಗೆ ಚರ್ಚಿಸಬೇಕು. ಕಂದಾಯ ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳು ಜೊತೆಗೂಡಿ ಸಹಕಾರದಿಂದ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.
ಸಭಾಪತಿ ಬಸವರಾಜ ಹೊರಟ್ಟಿ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಕರು ಕೃಷಿಯಿಂದ ದೂರವಾಗುತ್ತಿದ್ದು, ಕೃಷಿ ಕಾರ್ಮಿಕರು ದೊರೆಯುತ್ತಿಲ್ಲವೆಂದು ಕಳವಳ ವ್ಯಕ್ತಪಡಿಸಿದರು.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…