ನವೆಂಬರ್ ತಿಂಗಳಲ್ಲಿ ರಾಮನಗರ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬರೋಬ್ಬರಿ 41,644 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ನಾಶವಾಗಿದೆ. ಹೀಗಾಗಿ ಸಂಕಷ್ಟದಲ್ಲಿರುವ ಜಿಲ್ಲೆಯ ರೈತರಿಗೆ ಸರ್ಕಾರದಿಂದ ಪರಿಹಾರ ಧನ ವಿತರಣೆ ಕಾರ್ಯ ನಡೆದಿದೆ. ಸುಮಾರು 46,225 ರೈತರ ಖಾತೆಗಳಿಗೆ ಈಗಾಗಲೇ ಪರಿಹಾರ ಹಣ ಜಮೆಯಾಗಿದೆ. ಮಾತ್ರವಲ್ಲದೆ 24,314 ಹೆಕ್ಟೆರ್ ಪ್ರದೇಶಕ್ಕೆ ಒಟ್ಟು ರೂ. 16.55 ಕೋಟಿ ಹಣ ಜಮೆಯಾಗಿದೆ ಎಂದು ಜಿಲ್ಲಾಡಳಿತ ಅಧಿಕಾರಿಗಳು ತಿಳಿಸಿದ್ದಾರೆ.
ಕೃಷಿ, ಕಂದಾಯ ಇಲಾಖೆಗಳ ಜೊತೆಯಲ್ಲಿ ತೋಟಗಾರಿಕೆ ಇಲಾಖೆಯಿಂದಲೂ ಜಿಲ್ಲೆಯ ರೈತರಿಗೆ ಪರಿಹಾರ ಸಿಗಲಿವೆ. ಬುಧವಾರದವರೆಗೆ ಒಟ್ಟು 1,27,695 ಅರ್ಜಿಗಳನ್ನು ಸಲ್ಲಿಕೆಯಾಗಿದ್ದು, ಇದರಲ್ಲಿ ಕೆಲ ಅರ್ಜಿಗಳನ್ನು ಪರೀಶೀಲನೆ ಮಾಡಲಾಗಿದೆ. ಇನ್ನು ಉಳಿದಿರುವ ಅರ್ಜಿಗಳನ್ನು ಪರಿಶೀಲನೆ ನಡೆಸಿ ರೈತರಿಗೆ ಸರಿಯಾದ ಪರಿಹಾರ ಧನವನ್ನು ನೀಡಲಾಗುತ್ತದೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…