ಅನುಕ್ರಮ

ಕೃಷಿ ಅಂದರೆ ಒಂದು ಅದ್ಭುತ ಲೋಕ ಏಕೆಂದರೆ….. ? | ಕೃಷಿಕ ಟಿ ಆರ್‌ ಸುರೇಶ್ಚಂದ್ರ ಬರೆಯುತ್ತಾರೆ…. |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೃಷಿ ಅಂದರೆ ಒಂದು ಅದ್ಭುತ ಲೋಕ. ತಾಳ್ಮೆ,ಜಾಣ್ಮೆ,ನಿರೀಕ್ಷೆ, ತಿತೀಕ್ಷೆಗಳನ್ನು ಬಯಸುವ ಸುಂದರ ಲೋಕ.ನಾವು ಪ್ರೀತಿಸಿದಷ್ಟು ಹತ್ತಿರ ಬಂದು ಒಲಿವ ಲೋಕ. ವಿಚಾರ ಏನೂಂದ್ರೇ……

Advertisement
ಮಳೆಗಾಲದ ಈ ಮೊದಲ ದಿನಗಳಲ್ಲಿ ಗಾಳಿಗೋ, ಭಾರಕ್ಕೋ, ಮಣ್ಣು ಮೆತ್ತಗಾದ ಕಾರಣಕ್ಕೋ ಕಾಳುಮೆಣಸಿನ ಬಳ್ಳಿಗಳಿರುವ ಅಡಿಕೆ ಮರ ಧರಾಶಾಹಿಯಾಗಿರುವ ಸಮಯ. ಇಂತಹ ಸಂಧರ್ಭದಲ್ಲಿ ಈ ಬಿದ್ದ ಬಳ್ಳಿಗಳನ್ನು ಸದುಪಯೋಗ ಪಡಿಸಿಕೊಳ್ಳಲು ಸರಿಯಾದ ಸಮಯವಿದು. ಸಾಂಪ್ರದಾಯಿಕವಾಗಿ ಈಗ ಆರ್ಧಾ ನಕ್ಷತ್ರದ ದಿನಗಳು, ಕಾಳುಮೆಣಸಿನ ಬಳ್ಳಿಗಳನ್ನು ನೆಡಲು ಸರಿಯಾದ ಸಮಯ. ಅಂತೆಯೇ ಬಿದ್ದ ಬಳ್ಳಿಗಳನ್ನು ಅಡಿಕೆ ಮರಕ್ಕೆ ಪುನಃ ಎತ್ತಿ ಕಟ್ಟಲೂ ಸರಿಯಾದ ಸಮಯ. ಆದರೆ ಅತೀ ಉದ್ದದ ಬಳ್ಳಿಗಳನ್ನು ಎತ್ತಿ ಕಟ್ಟುವುದು ಸುಲಭವಲ್ಲ. ಅದಕ್ಕಾಗಿ ಉದ್ದ ಬಳ್ಳಿಗಳ ತುದಿಯನ್ನು ತುಂಡರಿಸಿ ಹತ್ತು ಹದಿನೈದು ಫೀಟ್ ಗಳಷ್ಟು ಉದ್ದದ ಮೂಲ ಬಳ್ಳಿಯನ್ನು ಪುನಃ ಅಡಿಕೆ ಮರಕ್ಕೆ ಕಟ್ಟಿ , ತುಂಡರಿಸಿದ ತುದಿಯ ಬಳ್ಳಿಗಳನ್ನು ನಾಲ್ಕೈದು ಪೀಟ್ ಗಳಷ್ಟು ಉದ್ದಕ್ಕೆ ತುಂಡರಿಸಿ ಅಡಿಕೆ ಮರಕ್ಕೋ,ತೆಂಗಿನ ಮರಕ್ಕೋ, ಮನೆಯ ಪರಿಸರದ ಬರೆಗಳಿಗೋ ನೆಟ್ಟಾಗ , ಬಿದ್ದ ಒಂದು ಬಳ್ಳಿಗೆ ಪ್ರತಿಯಾಗಿ ಹತ್ತು ಬಳ್ಳಿಗಳನ್ನು ಅಭಿವೃದ್ಧಿ ಮಾಡಿದಂತಹ ಸಂತೃಪ್ತಿ ಮತ್ತು ಬಳ್ಳಿಗಳು ಒಂದೆರಡು ವರ್ಷದಲ್ಲೇ ಫಸಲೂ ಕೊಟ್ಟಾಗ ಮಾಡಿದ ಕೆಲಸಕ್ಕೊಂದು ಪ್ರತಿಫಲವೂ ಲಭಿಸೀತಲ್ಲವೇ.

ಪ್ರಕೃತಿಯ ನಿಯಮವೂ ಅದುವೇ…”ಏಕೋಹಂ ಬಹುಸ್ಯಾಮಹ” ಅಂದರೆ ಒಬ್ಬನಿರುವವ ಬಹುವಾಗಿ ಪ್ರಕಟನಾಗುವುದೇ ಪ್ರಕ್ರೃತಿ ಧರ್ಮವಂತೆ.

ಬರಹ :
# ಟಿ ಆರ್‌ ಸುರೇಶ್ಚಂದ್ರ, ಕಲ್ಮಡ್ಕ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಧರ್ಮವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ – ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಧಾರ್ಮಿಕ ಶ್ರದ್ಧೆ ಮತ್ತು ನಂಬಿಕೆಯನ್ನ ಗೌರವಿಸಿ ಪಾಲಿಸಬೇಕಾದುದ್ದೂ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಉಪಮುಖ್ಯಮಂತ್ರಿ…

6 hours ago

ಹವಾಮಾನ ವರದಿ | 20-04-2025 | ಕೆಲವು ಕಡೆ ಸಾಮಾನ್ಯ ಮಳೆ ಸಾಧ್ಯತೆ | ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆ ನಿರೀಕ್ಷೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಒಳನಾಡಿನಲ್ಲಿ…

9 hours ago

ತರಕಾರಿ,ಹಣ್ಣುಗಳಲ್ಲಿ ಶೇ. 15ರಷ್ಟು ತ್ಯಾಜ್ಯ ಉತ್ಪತ್ತಿ

ಕೇಂದ್ರ ವಾಣಿಜ್ಯ ಕೈಗಾರಿಕೆಗಳ ಸಚಿವಾಲಯ ಸಹಯೋಗದೊಂದಿಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ  ಕೇಂದ್ರ…

19 hours ago

ಬದುಕು ಪುರಾಣ | ‘ಅಲ್ಲಿ ತುಂಬಾ ರಾಮಾಯಣವಿದೆ !?’

ಧರ್ಮನಿಷ್ಠರಾಗಿ ಹೇಗೆ ಬದುಕಬೇಕು, ಹೇಗೆ ಬದುಕಬಹುದು ಎಂದು ಜಗತ್ತಿಗೆ ಸಾರಿದ ಮಹಾಕಾವ್ಯ ರಾಮಾಯಣ.…

19 hours ago

ಮನೆಗೆ 4 ರಿಂದ 6 ಬಾಗಿಲುಗಳು ಇದ್ದರೆ ಏನೆಲ್ಲಾ ಪ್ರಯೋಜನಗಳಿವೆ ..? ಹೀಗಿವೆ ಶುಭ, ಅಶುಭ ಫಲಗಳು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

19 hours ago

ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ ಆರೋಪ | ಶಿಕ್ಷಣ ಇಲಾಖೆ ಅಧಿಕಾರಿ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಸಂದರ್ಭದಲ್ಲಿ ಜನಿವಾರ ಧರಿಸಿದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿದ…

1 day ago