ಅನುಕ್ರಮ

ಕೃಷಿ ಅಂದರೆ ಒಂದು ಅದ್ಭುತ ಲೋಕ ಏಕೆಂದರೆ….. ? | ಕೃಷಿಕ ಟಿ ಆರ್‌ ಸುರೇಶ್ಚಂದ್ರ ಬರೆಯುತ್ತಾರೆ…. |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೃಷಿ ಅಂದರೆ ಒಂದು ಅದ್ಭುತ ಲೋಕ. ತಾಳ್ಮೆ,ಜಾಣ್ಮೆ,ನಿರೀಕ್ಷೆ, ತಿತೀಕ್ಷೆಗಳನ್ನು ಬಯಸುವ ಸುಂದರ ಲೋಕ.ನಾವು ಪ್ರೀತಿಸಿದಷ್ಟು ಹತ್ತಿರ ಬಂದು ಒಲಿವ ಲೋಕ. ವಿಚಾರ ಏನೂಂದ್ರೇ……

Advertisement
Advertisement
ಮಳೆಗಾಲದ ಈ ಮೊದಲ ದಿನಗಳಲ್ಲಿ ಗಾಳಿಗೋ, ಭಾರಕ್ಕೋ, ಮಣ್ಣು ಮೆತ್ತಗಾದ ಕಾರಣಕ್ಕೋ ಕಾಳುಮೆಣಸಿನ ಬಳ್ಳಿಗಳಿರುವ ಅಡಿಕೆ ಮರ ಧರಾಶಾಹಿಯಾಗಿರುವ ಸಮಯ. ಇಂತಹ ಸಂಧರ್ಭದಲ್ಲಿ ಈ ಬಿದ್ದ ಬಳ್ಳಿಗಳನ್ನು ಸದುಪಯೋಗ ಪಡಿಸಿಕೊಳ್ಳಲು ಸರಿಯಾದ ಸಮಯವಿದು. ಸಾಂಪ್ರದಾಯಿಕವಾಗಿ ಈಗ ಆರ್ಧಾ ನಕ್ಷತ್ರದ ದಿನಗಳು, ಕಾಳುಮೆಣಸಿನ ಬಳ್ಳಿಗಳನ್ನು ನೆಡಲು ಸರಿಯಾದ ಸಮಯ. ಅಂತೆಯೇ ಬಿದ್ದ ಬಳ್ಳಿಗಳನ್ನು ಅಡಿಕೆ ಮರಕ್ಕೆ ಪುನಃ ಎತ್ತಿ ಕಟ್ಟಲೂ ಸರಿಯಾದ ಸಮಯ. ಆದರೆ ಅತೀ ಉದ್ದದ ಬಳ್ಳಿಗಳನ್ನು ಎತ್ತಿ ಕಟ್ಟುವುದು ಸುಲಭವಲ್ಲ. ಅದಕ್ಕಾಗಿ ಉದ್ದ ಬಳ್ಳಿಗಳ ತುದಿಯನ್ನು ತುಂಡರಿಸಿ ಹತ್ತು ಹದಿನೈದು ಫೀಟ್ ಗಳಷ್ಟು ಉದ್ದದ ಮೂಲ ಬಳ್ಳಿಯನ್ನು ಪುನಃ ಅಡಿಕೆ ಮರಕ್ಕೆ ಕಟ್ಟಿ , ತುಂಡರಿಸಿದ ತುದಿಯ ಬಳ್ಳಿಗಳನ್ನು ನಾಲ್ಕೈದು ಪೀಟ್ ಗಳಷ್ಟು ಉದ್ದಕ್ಕೆ ತುಂಡರಿಸಿ ಅಡಿಕೆ ಮರಕ್ಕೋ,ತೆಂಗಿನ ಮರಕ್ಕೋ, ಮನೆಯ ಪರಿಸರದ ಬರೆಗಳಿಗೋ ನೆಟ್ಟಾಗ , ಬಿದ್ದ ಒಂದು ಬಳ್ಳಿಗೆ ಪ್ರತಿಯಾಗಿ ಹತ್ತು ಬಳ್ಳಿಗಳನ್ನು ಅಭಿವೃದ್ಧಿ ಮಾಡಿದಂತಹ ಸಂತೃಪ್ತಿ ಮತ್ತು ಬಳ್ಳಿಗಳು ಒಂದೆರಡು ವರ್ಷದಲ್ಲೇ ಫಸಲೂ ಕೊಟ್ಟಾಗ ಮಾಡಿದ ಕೆಲಸಕ್ಕೊಂದು ಪ್ರತಿಫಲವೂ ಲಭಿಸೀತಲ್ಲವೇ.

ಪ್ರಕೃತಿಯ ನಿಯಮವೂ ಅದುವೇ…”ಏಕೋಹಂ ಬಹುಸ್ಯಾಮಹ” ಅಂದರೆ ಒಬ್ಬನಿರುವವ ಬಹುವಾಗಿ ಪ್ರಕಟನಾಗುವುದೇ ಪ್ರಕ್ರೃತಿ ಧರ್ಮವಂತೆ.

ಬರಹ :
# ಟಿ ಆರ್‌ ಸುರೇಶ್ಚಂದ್ರ, ಕಲ್ಮಡ್ಕ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…

10 minutes ago

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…

25 minutes ago

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…

38 minutes ago

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…

43 minutes ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಟಿ ನಿರ್ವಹಣೆ ಕುರಿತು ಸಭೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು, ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ…

47 minutes ago