Advertisement
ಅನುಕ್ರಮ

ಕೃಷಿ ಅಂದರೆ ಒಂದು ಅದ್ಭುತ ಲೋಕ ಏಕೆಂದರೆ….. ? | ಕೃಷಿಕ ಟಿ ಆರ್‌ ಸುರೇಶ್ಚಂದ್ರ ಬರೆಯುತ್ತಾರೆ…. |

Share

ಕೃಷಿ ಅಂದರೆ ಒಂದು ಅದ್ಭುತ ಲೋಕ. ತಾಳ್ಮೆ,ಜಾಣ್ಮೆ,ನಿರೀಕ್ಷೆ, ತಿತೀಕ್ಷೆಗಳನ್ನು ಬಯಸುವ ಸುಂದರ ಲೋಕ.ನಾವು ಪ್ರೀತಿಸಿದಷ್ಟು ಹತ್ತಿರ ಬಂದು ಒಲಿವ ಲೋಕ. ವಿಚಾರ ಏನೂಂದ್ರೇ……

ಮಳೆಗಾಲದ ಈ ಮೊದಲ ದಿನಗಳಲ್ಲಿ ಗಾಳಿಗೋ, ಭಾರಕ್ಕೋ, ಮಣ್ಣು ಮೆತ್ತಗಾದ ಕಾರಣಕ್ಕೋ ಕಾಳುಮೆಣಸಿನ ಬಳ್ಳಿಗಳಿರುವ ಅಡಿಕೆ ಮರ ಧರಾಶಾಹಿಯಾಗಿರುವ ಸಮಯ. ಇಂತಹ ಸಂಧರ್ಭದಲ್ಲಿ ಈ ಬಿದ್ದ ಬಳ್ಳಿಗಳನ್ನು ಸದುಪಯೋಗ ಪಡಿಸಿಕೊಳ್ಳಲು ಸರಿಯಾದ ಸಮಯವಿದು. ಸಾಂಪ್ರದಾಯಿಕವಾಗಿ ಈಗ ಆರ್ಧಾ ನಕ್ಷತ್ರದ ದಿನಗಳು, ಕಾಳುಮೆಣಸಿನ ಬಳ್ಳಿಗಳನ್ನು ನೆಡಲು ಸರಿಯಾದ ಸಮಯ. ಅಂತೆಯೇ ಬಿದ್ದ ಬಳ್ಳಿಗಳನ್ನು ಅಡಿಕೆ ಮರಕ್ಕೆ ಪುನಃ ಎತ್ತಿ ಕಟ್ಟಲೂ ಸರಿಯಾದ ಸಮಯ. ಆದರೆ ಅತೀ ಉದ್ದದ ಬಳ್ಳಿಗಳನ್ನು ಎತ್ತಿ ಕಟ್ಟುವುದು ಸುಲಭವಲ್ಲ. ಅದಕ್ಕಾಗಿ ಉದ್ದ ಬಳ್ಳಿಗಳ ತುದಿಯನ್ನು ತುಂಡರಿಸಿ ಹತ್ತು ಹದಿನೈದು ಫೀಟ್ ಗಳಷ್ಟು ಉದ್ದದ ಮೂಲ ಬಳ್ಳಿಯನ್ನು ಪುನಃ ಅಡಿಕೆ ಮರಕ್ಕೆ ಕಟ್ಟಿ , ತುಂಡರಿಸಿದ ತುದಿಯ ಬಳ್ಳಿಗಳನ್ನು ನಾಲ್ಕೈದು ಪೀಟ್ ಗಳಷ್ಟು ಉದ್ದಕ್ಕೆ ತುಂಡರಿಸಿ ಅಡಿಕೆ ಮರಕ್ಕೋ,ತೆಂಗಿನ ಮರಕ್ಕೋ, ಮನೆಯ ಪರಿಸರದ ಬರೆಗಳಿಗೋ ನೆಟ್ಟಾಗ , ಬಿದ್ದ ಒಂದು ಬಳ್ಳಿಗೆ ಪ್ರತಿಯಾಗಿ ಹತ್ತು ಬಳ್ಳಿಗಳನ್ನು ಅಭಿವೃದ್ಧಿ ಮಾಡಿದಂತಹ ಸಂತೃಪ್ತಿ ಮತ್ತು ಬಳ್ಳಿಗಳು ಒಂದೆರಡು ವರ್ಷದಲ್ಲೇ ಫಸಲೂ ಕೊಟ್ಟಾಗ ಮಾಡಿದ ಕೆಲಸಕ್ಕೊಂದು ಪ್ರತಿಫಲವೂ ಲಭಿಸೀತಲ್ಲವೇ.

ಪ್ರಕೃತಿಯ ನಿಯಮವೂ ಅದುವೇ…”ಏಕೋಹಂ ಬಹುಸ್ಯಾಮಹ” ಅಂದರೆ ಒಬ್ಬನಿರುವವ ಬಹುವಾಗಿ ಪ್ರಕಟನಾಗುವುದೇ ಪ್ರಕ್ರೃತಿ ಧರ್ಮವಂತೆ.

ಬರಹ :
# ಟಿ ಆರ್‌ ಸುರೇಶ್ಚಂದ್ರ, ಕಲ್ಮಡ್ಕ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

5 hours ago

ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ

ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…

7 hours ago

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

19 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

20 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

1 day ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

1 day ago