Advertisement
ಅನುಕ್ರಮ

ಕೃಷಿ ಅಂದರೆ ಒಂದು ಅದ್ಭುತ ಲೋಕ ಏಕೆಂದರೆ….. ? | ಕೃಷಿಕ ಟಿ ಆರ್‌ ಸುರೇಶ್ಚಂದ್ರ ಬರೆಯುತ್ತಾರೆ…. |

Share

ಕೃಷಿ ಅಂದರೆ ಒಂದು ಅದ್ಭುತ ಲೋಕ. ತಾಳ್ಮೆ,ಜಾಣ್ಮೆ,ನಿರೀಕ್ಷೆ, ತಿತೀಕ್ಷೆಗಳನ್ನು ಬಯಸುವ ಸುಂದರ ಲೋಕ.ನಾವು ಪ್ರೀತಿಸಿದಷ್ಟು ಹತ್ತಿರ ಬಂದು ಒಲಿವ ಲೋಕ. ವಿಚಾರ ಏನೂಂದ್ರೇ……

ಮಳೆಗಾಲದ ಈ ಮೊದಲ ದಿನಗಳಲ್ಲಿ ಗಾಳಿಗೋ, ಭಾರಕ್ಕೋ, ಮಣ್ಣು ಮೆತ್ತಗಾದ ಕಾರಣಕ್ಕೋ ಕಾಳುಮೆಣಸಿನ ಬಳ್ಳಿಗಳಿರುವ ಅಡಿಕೆ ಮರ ಧರಾಶಾಹಿಯಾಗಿರುವ ಸಮಯ. ಇಂತಹ ಸಂಧರ್ಭದಲ್ಲಿ ಈ ಬಿದ್ದ ಬಳ್ಳಿಗಳನ್ನು ಸದುಪಯೋಗ ಪಡಿಸಿಕೊಳ್ಳಲು ಸರಿಯಾದ ಸಮಯವಿದು. ಸಾಂಪ್ರದಾಯಿಕವಾಗಿ ಈಗ ಆರ್ಧಾ ನಕ್ಷತ್ರದ ದಿನಗಳು, ಕಾಳುಮೆಣಸಿನ ಬಳ್ಳಿಗಳನ್ನು ನೆಡಲು ಸರಿಯಾದ ಸಮಯ. ಅಂತೆಯೇ ಬಿದ್ದ ಬಳ್ಳಿಗಳನ್ನು ಅಡಿಕೆ ಮರಕ್ಕೆ ಪುನಃ ಎತ್ತಿ ಕಟ್ಟಲೂ ಸರಿಯಾದ ಸಮಯ. ಆದರೆ ಅತೀ ಉದ್ದದ ಬಳ್ಳಿಗಳನ್ನು ಎತ್ತಿ ಕಟ್ಟುವುದು ಸುಲಭವಲ್ಲ. ಅದಕ್ಕಾಗಿ ಉದ್ದ ಬಳ್ಳಿಗಳ ತುದಿಯನ್ನು ತುಂಡರಿಸಿ ಹತ್ತು ಹದಿನೈದು ಫೀಟ್ ಗಳಷ್ಟು ಉದ್ದದ ಮೂಲ ಬಳ್ಳಿಯನ್ನು ಪುನಃ ಅಡಿಕೆ ಮರಕ್ಕೆ ಕಟ್ಟಿ , ತುಂಡರಿಸಿದ ತುದಿಯ ಬಳ್ಳಿಗಳನ್ನು ನಾಲ್ಕೈದು ಪೀಟ್ ಗಳಷ್ಟು ಉದ್ದಕ್ಕೆ ತುಂಡರಿಸಿ ಅಡಿಕೆ ಮರಕ್ಕೋ,ತೆಂಗಿನ ಮರಕ್ಕೋ, ಮನೆಯ ಪರಿಸರದ ಬರೆಗಳಿಗೋ ನೆಟ್ಟಾಗ , ಬಿದ್ದ ಒಂದು ಬಳ್ಳಿಗೆ ಪ್ರತಿಯಾಗಿ ಹತ್ತು ಬಳ್ಳಿಗಳನ್ನು ಅಭಿವೃದ್ಧಿ ಮಾಡಿದಂತಹ ಸಂತೃಪ್ತಿ ಮತ್ತು ಬಳ್ಳಿಗಳು ಒಂದೆರಡು ವರ್ಷದಲ್ಲೇ ಫಸಲೂ ಕೊಟ್ಟಾಗ ಮಾಡಿದ ಕೆಲಸಕ್ಕೊಂದು ಪ್ರತಿಫಲವೂ ಲಭಿಸೀತಲ್ಲವೇ.

ಪ್ರಕೃತಿಯ ನಿಯಮವೂ ಅದುವೇ…”ಏಕೋಹಂ ಬಹುಸ್ಯಾಮಹ” ಅಂದರೆ ಒಬ್ಬನಿರುವವ ಬಹುವಾಗಿ ಪ್ರಕಟನಾಗುವುದೇ ಪ್ರಕ್ರೃತಿ ಧರ್ಮವಂತೆ.

ಬರಹ :
# ಟಿ ಆರ್‌ ಸುರೇಶ್ಚಂದ್ರ, ಕಲ್ಮಡ್ಕ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

2 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

2 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

5 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

14 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

15 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

21 hours ago