ಕೃಷಿ ಅಂದರೆ ಒಂದು ಅದ್ಭುತ ಲೋಕ. ತಾಳ್ಮೆ,ಜಾಣ್ಮೆ,ನಿರೀಕ್ಷೆ, ತಿತೀಕ್ಷೆಗಳನ್ನು ಬಯಸುವ ಸುಂದರ ಲೋಕ.ನಾವು ಪ್ರೀತಿಸಿದಷ್ಟು ಹತ್ತಿರ ಬಂದು ಒಲಿವ ಲೋಕ. ವಿಚಾರ ಏನೂಂದ್ರೇ……
ಮಳೆಗಾಲದ ಈ ಮೊದಲ ದಿನಗಳಲ್ಲಿ ಗಾಳಿಗೋ, ಭಾರಕ್ಕೋ, ಮಣ್ಣು ಮೆತ್ತಗಾದ ಕಾರಣಕ್ಕೋ ಕಾಳುಮೆಣಸಿನ ಬಳ್ಳಿಗಳಿರುವ ಅಡಿಕೆ ಮರ ಧರಾಶಾಹಿಯಾಗಿರುವ ಸಮಯ. ಇಂತಹ ಸಂಧರ್ಭದಲ್ಲಿ ಈ ಬಿದ್ದ ಬಳ್ಳಿಗಳನ್ನು ಸದುಪಯೋಗ ಪಡಿಸಿಕೊಳ್ಳಲು ಸರಿಯಾದ ಸಮಯವಿದು. ಸಾಂಪ್ರದಾಯಿಕವಾಗಿ ಈಗ ಆರ್ಧಾ ನಕ್ಷತ್ರದ ದಿನಗಳು, ಕಾಳುಮೆಣಸಿನ ಬಳ್ಳಿಗಳನ್ನು ನೆಡಲು ಸರಿಯಾದ ಸಮಯ. ಅಂತೆಯೇ ಬಿದ್ದ ಬಳ್ಳಿಗಳನ್ನು ಅಡಿಕೆ ಮರಕ್ಕೆ ಪುನಃ ಎತ್ತಿ ಕಟ್ಟಲೂ ಸರಿಯಾದ ಸಮಯ. ಆದರೆ ಅತೀ ಉದ್ದದ ಬಳ್ಳಿಗಳನ್ನು ಎತ್ತಿ ಕಟ್ಟುವುದು ಸುಲಭವಲ್ಲ. ಅದಕ್ಕಾಗಿ ಉದ್ದ ಬಳ್ಳಿಗಳ ತುದಿಯನ್ನು ತುಂಡರಿಸಿ ಹತ್ತು ಹದಿನೈದು ಫೀಟ್ ಗಳಷ್ಟು ಉದ್ದದ ಮೂಲ ಬಳ್ಳಿಯನ್ನು ಪುನಃ ಅಡಿಕೆ ಮರಕ್ಕೆ ಕಟ್ಟಿ , ತುಂಡರಿಸಿದ ತುದಿಯ ಬಳ್ಳಿಗಳನ್ನು ನಾಲ್ಕೈದು ಪೀಟ್ ಗಳಷ್ಟು ಉದ್ದಕ್ಕೆ ತುಂಡರಿಸಿ ಅಡಿಕೆ ಮರಕ್ಕೋ,ತೆಂಗಿನ ಮರಕ್ಕೋ, ಮನೆಯ ಪರಿಸರದ ಬರೆಗಳಿಗೋ ನೆಟ್ಟಾಗ , ಬಿದ್ದ ಒಂದು ಬಳ್ಳಿಗೆ ಪ್ರತಿಯಾಗಿ ಹತ್ತು ಬಳ್ಳಿಗಳನ್ನು ಅಭಿವೃದ್ಧಿ ಮಾಡಿದಂತಹ ಸಂತೃಪ್ತಿ ಮತ್ತು ಬಳ್ಳಿಗಳು ಒಂದೆರಡು ವರ್ಷದಲ್ಲೇ ಫಸಲೂ ಕೊಟ್ಟಾಗ ಮಾಡಿದ ಕೆಲಸಕ್ಕೊಂದು ಪ್ರತಿಫಲವೂ ಲಭಿಸೀತಲ್ಲವೇ.ಪ್ರಕೃತಿಯ ನಿಯಮವೂ ಅದುವೇ…”ಏಕೋಹಂ ಬಹುಸ್ಯಾಮಹ” ಅಂದರೆ ಒಬ್ಬನಿರುವವ ಬಹುವಾಗಿ ಪ್ರಕಟನಾಗುವುದೇ ಪ್ರಕ್ರೃತಿ ಧರ್ಮವಂತೆ.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…