ಕೃಷಿ ಅಂದರೆ ಒಂದು ಅದ್ಭುತ ಲೋಕ. ತಾಳ್ಮೆ,ಜಾಣ್ಮೆ,ನಿರೀಕ್ಷೆ, ತಿತೀಕ್ಷೆಗಳನ್ನು ಬಯಸುವ ಸುಂದರ ಲೋಕ.ನಾವು ಪ್ರೀತಿಸಿದಷ್ಟು ಹತ್ತಿರ ಬಂದು ಒಲಿವ ಲೋಕ. ವಿಚಾರ ಏನೂಂದ್ರೇ……
ಮಳೆಗಾಲದ ಈ ಮೊದಲ ದಿನಗಳಲ್ಲಿ ಗಾಳಿಗೋ, ಭಾರಕ್ಕೋ, ಮಣ್ಣು ಮೆತ್ತಗಾದ ಕಾರಣಕ್ಕೋ ಕಾಳುಮೆಣಸಿನ ಬಳ್ಳಿಗಳಿರುವ ಅಡಿಕೆ ಮರ ಧರಾಶಾಹಿಯಾಗಿರುವ ಸಮಯ. ಇಂತಹ ಸಂಧರ್ಭದಲ್ಲಿ ಈ ಬಿದ್ದ ಬಳ್ಳಿಗಳನ್ನು ಸದುಪಯೋಗ ಪಡಿಸಿಕೊಳ್ಳಲು ಸರಿಯಾದ ಸಮಯವಿದು. ಸಾಂಪ್ರದಾಯಿಕವಾಗಿ ಈಗ ಆರ್ಧಾ ನಕ್ಷತ್ರದ ದಿನಗಳು, ಕಾಳುಮೆಣಸಿನ ಬಳ್ಳಿಗಳನ್ನು ನೆಡಲು ಸರಿಯಾದ ಸಮಯ. ಅಂತೆಯೇ ಬಿದ್ದ ಬಳ್ಳಿಗಳನ್ನು ಅಡಿಕೆ ಮರಕ್ಕೆ ಪುನಃ ಎತ್ತಿ ಕಟ್ಟಲೂ ಸರಿಯಾದ ಸಮಯ. ಆದರೆ ಅತೀ ಉದ್ದದ ಬಳ್ಳಿಗಳನ್ನು ಎತ್ತಿ ಕಟ್ಟುವುದು ಸುಲಭವಲ್ಲ. ಅದಕ್ಕಾಗಿ ಉದ್ದ ಬಳ್ಳಿಗಳ ತುದಿಯನ್ನು ತುಂಡರಿಸಿ ಹತ್ತು ಹದಿನೈದು ಫೀಟ್ ಗಳಷ್ಟು ಉದ್ದದ ಮೂಲ ಬಳ್ಳಿಯನ್ನು ಪುನಃ ಅಡಿಕೆ ಮರಕ್ಕೆ ಕಟ್ಟಿ , ತುಂಡರಿಸಿದ ತುದಿಯ ಬಳ್ಳಿಗಳನ್ನು ನಾಲ್ಕೈದು ಪೀಟ್ ಗಳಷ್ಟು ಉದ್ದಕ್ಕೆ ತುಂಡರಿಸಿ ಅಡಿಕೆ ಮರಕ್ಕೋ,ತೆಂಗಿನ ಮರಕ್ಕೋ, ಮನೆಯ ಪರಿಸರದ ಬರೆಗಳಿಗೋ ನೆಟ್ಟಾಗ , ಬಿದ್ದ ಒಂದು ಬಳ್ಳಿಗೆ ಪ್ರತಿಯಾಗಿ ಹತ್ತು ಬಳ್ಳಿಗಳನ್ನು ಅಭಿವೃದ್ಧಿ ಮಾಡಿದಂತಹ ಸಂತೃಪ್ತಿ ಮತ್ತು ಬಳ್ಳಿಗಳು ಒಂದೆರಡು ವರ್ಷದಲ್ಲೇ ಫಸಲೂ ಕೊಟ್ಟಾಗ ಮಾಡಿದ ಕೆಲಸಕ್ಕೊಂದು ಪ್ರತಿಫಲವೂ ಲಭಿಸೀತಲ್ಲವೇ.ಪ್ರಕೃತಿಯ ನಿಯಮವೂ ಅದುವೇ…”ಏಕೋಹಂ ಬಹುಸ್ಯಾಮಹ” ಅಂದರೆ ಒಬ್ಬನಿರುವವ ಬಹುವಾಗಿ ಪ್ರಕಟನಾಗುವುದೇ ಪ್ರಕ್ರೃತಿ ಧರ್ಮವಂತೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…