Advertisement
ಅನುಕ್ರಮ

ಕೃಷಿ ಅಂದರೆ ಒಂದು ಅದ್ಭುತ ಲೋಕ ಏಕೆಂದರೆ….. ? | ಕೃಷಿಕ ಟಿ ಆರ್‌ ಸುರೇಶ್ಚಂದ್ರ ಬರೆಯುತ್ತಾರೆ…. |

Share

ಕೃಷಿ ಅಂದರೆ ಒಂದು ಅದ್ಭುತ ಲೋಕ. ತಾಳ್ಮೆ,ಜಾಣ್ಮೆ,ನಿರೀಕ್ಷೆ, ತಿತೀಕ್ಷೆಗಳನ್ನು ಬಯಸುವ ಸುಂದರ ಲೋಕ.ನಾವು ಪ್ರೀತಿಸಿದಷ್ಟು ಹತ್ತಿರ ಬಂದು ಒಲಿವ ಲೋಕ. ವಿಚಾರ ಏನೂಂದ್ರೇ……

ಮಳೆಗಾಲದ ಈ ಮೊದಲ ದಿನಗಳಲ್ಲಿ ಗಾಳಿಗೋ, ಭಾರಕ್ಕೋ, ಮಣ್ಣು ಮೆತ್ತಗಾದ ಕಾರಣಕ್ಕೋ ಕಾಳುಮೆಣಸಿನ ಬಳ್ಳಿಗಳಿರುವ ಅಡಿಕೆ ಮರ ಧರಾಶಾಹಿಯಾಗಿರುವ ಸಮಯ. ಇಂತಹ ಸಂಧರ್ಭದಲ್ಲಿ ಈ ಬಿದ್ದ ಬಳ್ಳಿಗಳನ್ನು ಸದುಪಯೋಗ ಪಡಿಸಿಕೊಳ್ಳಲು ಸರಿಯಾದ ಸಮಯವಿದು. ಸಾಂಪ್ರದಾಯಿಕವಾಗಿ ಈಗ ಆರ್ಧಾ ನಕ್ಷತ್ರದ ದಿನಗಳು, ಕಾಳುಮೆಣಸಿನ ಬಳ್ಳಿಗಳನ್ನು ನೆಡಲು ಸರಿಯಾದ ಸಮಯ. ಅಂತೆಯೇ ಬಿದ್ದ ಬಳ್ಳಿಗಳನ್ನು ಅಡಿಕೆ ಮರಕ್ಕೆ ಪುನಃ ಎತ್ತಿ ಕಟ್ಟಲೂ ಸರಿಯಾದ ಸಮಯ. ಆದರೆ ಅತೀ ಉದ್ದದ ಬಳ್ಳಿಗಳನ್ನು ಎತ್ತಿ ಕಟ್ಟುವುದು ಸುಲಭವಲ್ಲ. ಅದಕ್ಕಾಗಿ ಉದ್ದ ಬಳ್ಳಿಗಳ ತುದಿಯನ್ನು ತುಂಡರಿಸಿ ಹತ್ತು ಹದಿನೈದು ಫೀಟ್ ಗಳಷ್ಟು ಉದ್ದದ ಮೂಲ ಬಳ್ಳಿಯನ್ನು ಪುನಃ ಅಡಿಕೆ ಮರಕ್ಕೆ ಕಟ್ಟಿ , ತುಂಡರಿಸಿದ ತುದಿಯ ಬಳ್ಳಿಗಳನ್ನು ನಾಲ್ಕೈದು ಪೀಟ್ ಗಳಷ್ಟು ಉದ್ದಕ್ಕೆ ತುಂಡರಿಸಿ ಅಡಿಕೆ ಮರಕ್ಕೋ,ತೆಂಗಿನ ಮರಕ್ಕೋ, ಮನೆಯ ಪರಿಸರದ ಬರೆಗಳಿಗೋ ನೆಟ್ಟಾಗ , ಬಿದ್ದ ಒಂದು ಬಳ್ಳಿಗೆ ಪ್ರತಿಯಾಗಿ ಹತ್ತು ಬಳ್ಳಿಗಳನ್ನು ಅಭಿವೃದ್ಧಿ ಮಾಡಿದಂತಹ ಸಂತೃಪ್ತಿ ಮತ್ತು ಬಳ್ಳಿಗಳು ಒಂದೆರಡು ವರ್ಷದಲ್ಲೇ ಫಸಲೂ ಕೊಟ್ಟಾಗ ಮಾಡಿದ ಕೆಲಸಕ್ಕೊಂದು ಪ್ರತಿಫಲವೂ ಲಭಿಸೀತಲ್ಲವೇ.

ಪ್ರಕೃತಿಯ ನಿಯಮವೂ ಅದುವೇ…”ಏಕೋಹಂ ಬಹುಸ್ಯಾಮಹ” ಅಂದರೆ ಒಬ್ಬನಿರುವವ ಬಹುವಾಗಿ ಪ್ರಕಟನಾಗುವುದೇ ಪ್ರಕ್ರೃತಿ ಧರ್ಮವಂತೆ.

ಬರಹ :
# ಟಿ ಆರ್‌ ಸುರೇಶ್ಚಂದ್ರ, ಕಲ್ಮಡ್ಕ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

5 days ago