ಅಕಾಲಿಕ ಮಳೆಯಿಂದ ದೇಶದಲ್ಲಿ ಬೆಳೆ ಹಾನಿಯಾಗಿದೆ. ಹೀಗಾಗಿ ರಾಜ್ಯಗಳಿಂದ ಕೃಷಿ ಹಾನಿಯ ಪ್ರಮಾಣದ ಬಗ್ಗೆ ವರದಿಗಾಗಿ ಕಾಯುತ್ತಿದ್ದೇವೆ. ವರದಿಯ ಬಳಿಕ ಕನಿಷ್ಟ ಬೆಂಬಲ ಬೆಲೆ ಘೋಷಣೆ ಮಾಡಲಾಗುವುದು ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ಥೋಮರ್ ಹೇಳಿದ್ದಾರೆ.
ಅಕಾಲಿಕ ಮಳೆಯಿಂದಾಗಿ ಆಹಾರ ಬೆಳೆಗಳ ಸಹಿತ ವಿವಿಧ ಬೆಳೆಗಳು ಹಾನಿಗೊಳಗಾಗಿವೆ. ಈ ಬಗ್ಗೆ ಸಮೀಕ್ಷೆ ನಡೆಯುತ್ತಿದೆ. ರೈತರು ಮುಂಗಾರು ಮಳೆಯ ಮೇಲೆ ಅವಲಂಬಿತರಾಗಿದ್ದಾರೆ. ಆದರೆ ಅನಿರೀಕ್ಷಿತವಾಗಿ ಮಳೆಯ ಕಾರಣದಿಂದ ಬೆಳೆ ಹಾನಿಯಾಗಿದೆ. ಹೀಗಾಗಿ ಹಿಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್ಪಿ) ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಅವರು ಹೇಳಿದರು.ಹಿಂಗಾರು ಬೆಳೆಗಳು, ವಿಶೇಷವಾಗಿ ಎಣ್ಣೆಕಾಳುಗಳು ಮತ್ತು ದ್ವಿದಳ ಧಾನ್ಯಗಳ ಬಿತ್ತನೆಯು ದೇಶಾದ್ಯಂತ ಪ್ರಾರಂಭವಾಗಿದೆ ಮತ್ತು ಇದುವರೆಗೆ ಸುಮಾರು 7.34 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದೆ ಎಂದು ಥೋಮರ್ ಹೇಳಿದರು.
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…