Advertisement
MIRROR FOCUS

ಕೃಷಿ ಮತ್ತು ಹವಾಮಾನ ಬದಲಾವಣೆ | ನೈಸರ್ಗಿಕ ಸಂಪನ್ಮೂಲಗಳ ಸಂ‌‌‌‌‌‌‌‌‌‍ರಕ್ಷಣೆ ಮತ್ತು ನಿರ್ವಹಣೆ ಬಗ್ಗೆ ಸಮಾಲೋಚನಾ ಸಭೆ

Share

ಕೃಷಿ ಮತ್ತು ಹವಾಮಾನ ಬದಲಾವಣೆಗೆ(Agriculture and climate change) ಸಂಬಂಧಿಸಿದಂತೆ – ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ(Natural resources) ಮತ್ತು ನಿರ್ವಹಣೆ(maintain) ಬಗ್ಗೆ ಸಮಾಲೋಚನಾ ಸಭೆಯು ಜ.21  ರಂದು ಚಾಮರಾಜನಗರದಲ್ಲಿ ನಡೆಯಲಿದೆ.

ಜೆ ಎಸ್ ಬಿ ಪ್ರತಿಷ್ಠಾನ, ಕೊಳ್ಳೇಗಾಲ ಇವರ ವತಿಯಿಂದ, ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ & ಹಸಿರು ಸೇನೆ, ಚಾಮರಾಜನಗರ ಶಾಖೆ, ಗಾಂಧಿಜೀ ಸಹಜ ಬೇಸಾಯ ಶಾಲೆ, ತುಮಕೂರು ಮತ್ತು ಕಾರ್ಯನಿರತ ಪತ್ರಕರ್ತರ ಸಂಘ, ಚಾಮರಾಜನಗರ ಜಿಲ್ಲಾ ಘಟಕ, ಇವರುಗಳ ಸಹಯೋಗದಲ್ಲಿ, ತಾಂತ್ರಿಕ ಪರಿಣಿತರೊಂದಿಗೆ ಈ ಸಂವಾದ ನಡೆಯಲಿದೆ.

ಹವಾಮಾನ ಬದಲಾವಣೆಗೆ ನೂರಾರು ಕಾರಣಗಳಿದ್ದರೂ ನೈಸರ್ಗಿಕ ಸಂಪನ್ಮೂಲಗಳ ದುರ್ಬಳಕೆ ಇವುಗಳಲ್ಲಿ ಪ್ರಮುಖವಾದದ್ದು. ನೈಸರ್ಗಿಕ ಸಂಪನ್ಮೂಲಗಳ ದುರ್ಬಳಕೆಯ ಪರಿಣಾಮ ಭೂಮಿಯ ತಾಪಮಾನವನ್ನು ಹೆಚ್ಚಿನ ಪ್ರಮಾಣದಲ್ಲಿ ಹೆಚ್ಚಿಸಿ ಪ್ರಕೃತಿಯಲ್ಲಿ ಅಸಮತೋಲನವನ್ನು ಉಂಟುಮಾಡುತ್ತಿದೆ. ಮನುಷ್ಯನು ತನ್ನ ಅಗತ್ಯ ಮತ್ತು ದುರಾಸೆಯಿಂದ ಪರಿಸರಕ್ಕೆ ಮಾತ್ರವಲ್ಲದೆ ತನಗೂ ಹಾನಿ ಮಾಡುವ ಅನೇಕ ಚಟುವಟಿಕೆಗಳನ್ನು ಮಾಡಿದ್ದಾನೆ. ಮಾನವ ಚಟುವಟಿಕೆಯಿಂದಾಗಿ ಅನೇಕ ಸಸ್ಯ ಮತ್ತು ಪ್ರಾಣಿ ಪ್ರಭೇದಗಳು ನಾಶವಾಗುತ್ತಿವೆ.

ಈ ಹವಾಮಾನ ಬದಲಾವಣೆಗಳು ಪರಿಸರದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿವೆ, ಸಾಗರದ ಮಟ್ಟ ಏರುತ್ತಿದೆ, ನದಿಗಳು ಹಿಂಗುತ್ತಿವೆ, ಹಿಮನದಿಗಳು ಕರಗುತ್ತಿವೆ, ಗಾಳಿಯಲ್ಲಿ ಇಂಗಾಲದ ಡೈಆಕ್ಸೈಡ್ ಹೆಚ್ಚುತ್ತಿದೆ, ಅರಣ್ಯ ಮತ್ತು ವನ್ಯಜೀವಿಗಳು ಕ್ಷೀಣಿಸುತ್ತಿವೆ, ನೀರಿನಲ್ಲಿ ಜೀವಿಸುವ ಜೀವಿಗಳು ತೊಂದರೆಗೊಳಗಾಗುತ್ತಿವೆ. ಇದಲ್ಲದೆ, ಈ ಬದಲಾವಣೆಯು ಮುಂದುವರಿದರೆ ಅನೇಕ ಜಾತಿಯ ಸಸ್ಯಗಳು ಮತ್ತು ಪ್ರಾಣಿಗಳು ನಾಶವಾಗುತ್ತವೆ ಹಾಗೂ ಪರಿಸರಕ್ಕೆ ಭಾರೀ ನಷ್ಟವಾಗಲಿದೆ.

ನಾವು ಏನನ್ನೂ ಮಾಡದಿದ್ದರೆ ಮತ್ತು ಈಗಿನಂತೆಯೇ ಕೆಲಸಗಳು ಮುಂದುವರಿದರೆ, ಭವಿಷ್ಯದಲ್ಲಿ ಮಾನವರು ಭೂಮಿಯ ಮೇಲ್ಮೈಯಿಂದ ನಿರ್ನಾಮವಾಗುವ ದಿನ ಬರುತ್ತದೆ. ಈ ಸಮಸ್ಯೆಗಳನ್ನು ನಿರ್ಲಕ್ಷಿಸುವ ಬದಲು ನಾವು ಕಾರ್ಯನಿರ್ವಹಿಸಲು ಪ್ರಾರಂಭಿಸೋಣ.. ಆಗ ನಾವು ಭೂಮಿ ಮತ್ತು ನಮ್ಮ ಭವಿಷ್ಯವನ್ನು ಉಳಿಸಬಹುದು..

ಹವಾಮಾನ ಬದಲಾವಣೆಯು ಮಾನವ ಮತ್ತು ನೈಸರ್ಗಿಕ ಕಾರಣಗಳಿಂದ ಸಂಭವಿಸುವ ವಿದ್ಯಮಾನವಾಗಿದೆ ಮತ್ತು ಇದು ಪರಿಸರದ ಮೇಲೆ ಮಾತ್ರವಲ್ಲದೆ ಮಾನವರು ಮತ್ತು ಇತರೆ ಎಲ್ಲಾ ಜೀವಿಗಳ ಮೇಲೂ ಪರಿಣಾಮ ಬೀರುವ ಅತ್ಯಂತ ಗಂಭೀರ ಸಮಸ್ಯೆಗಳಲ್ಲಿ ಒಂದಾಗಿದೆ. ಪರಿಸರದ ಮೇಲೆ ಪರಿಣಾಮ ಬೀರುವ ನಮ್ಮ ಕೆಟ್ಟ ಅಭ್ಯಾಸಗಳನ್ನು ಕಡಿಮೆ ಮಾಡುವ ಮತ್ತು ನಿಯಂತ್ರಿಸುವ ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಎಲ್ಲರಿಗೂ ಅರಿವು ಮೂಡಿಸಬೇಕು.

ಕೃಷಿ, ಆಹಾರ, ಆರೋಗ್ಯದ ವ್ಯವಸ್ಥೆಯನ್ನು ಪರಿಸರದ ಅವಿಭಾಜ್ಯ ಅಂಗವಾಗಿ ನೋಡುವ ದೃಷ್ಟಿಕೋನವನ್ನು ಬೆಳೆಸಿಕೊಳ್ಳಬೇಕಿದೆ ಮತ್ತು ಪರಿಸರಕ್ಕೆ ಪೂರಕವಾಗಿ ಕೃಷಿ ಪದ್ದತಿಗಳನ್ನು ಅಳವಡಿಸಿಕೊಳ್ಳುವುದು, ಕೃಷಿಯನ್ನು ತಂತ್ರಜ್ಞಾನಕ್ಕಿಂತ ಪರಿಸರ ವಿಜ್ಞಾನವೆಂದು ಒತ್ತಿ ಹೇಳುವ ಅನಿವಾರ್ಯತೆ ಎದುರಾಗಿದೆ. ನಗರ ಪ್ರದೇಶಗಳ ವಿಸ್ತರಣೆ, ಕ್ಷೀಣಿಸುತ್ತಿರುವ ಕೃಷಿ ಭೂಮಿ, ಹೆದ್ದಾರಿ ಅಭಿವೃದ್ಧಿಗಾಗಿ ಫಲವತ್ತಾದ ಕೃಷಿ ಮತ್ತು ಹುಲ್ಲುಗಾವಲು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದು ಮತ್ತು ಬೃಹತ್ ಪ್ರಮಾಣದ ನೀರಾವರಿ ಯೋಜನೆಗಳಿಗೆ ಅರಣ್ಯ ನಾಶ, ಪರಿಸರ ಮಾಲಿನ್ಯ ಇವುಗಳು ಭವಿಷ್ಯದ ಆಹಾರ ಉತ್ಪಾದನೆಗೆ ಅಪಾಯವನ್ನು ಉಂಟುಮಾಡುತ್ತದೆ.

ಕೃಷಿ ಮತ್ತು ಆಹಾರ ವ್ಯವಸ್ಥೆಯ ಭವಿಷ್ಯದ ಸುಸ್ಥಿರತೆಗಾಗಿ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ಮತ್ತು ನಿರ್ವಹಣೆ ಬಗೆಗಿನ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಲು ಅವಕಾಶ ಇದೆ.  ಹೆಚ್ಚಿನ ಮಾಹಿತಿಗೆ ಹಾಗೂ ಹೆಸರು ನೋಂದಾಯಿಸಲು  ಶಶಿಕುಮಾರ ಎಸ್., 9880949689 ಅವರನ್ನು ಸಂಪರ್ಕಿಸಲು ಮನವಿ ಮಾಡಲಾಗಿದೆ.

ಬರಹ :
ಪ್ರಶಾಂತ್ ಜಯರಾಮ್
 9342434530
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

2 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

4 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

5 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

8 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

9 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

12 hours ago