ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

July 31, 2022
3:13 PM

ಪ್ರಸಕ್ತ ಸಾಲಿನ ಕೃಷಿ ಪ್ರಶಸ್ತಿಗೆ ರೈತರಿಂದ ಹಾಗೂ ರೈತ ಮಹಿಳೆಯರಿಗೆ ಪತ್ಯೇಕವಾಗಿ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ರೈತರಿಗೆ 100 ರೂ.ಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ 25 ರೂಗಳ ನೋಂದಣಿ ಶುಲ್ಕವಿದ್ದು, ಕನಿಷ್ಠ ಒಂದು ಎಕರೆ ಪ್ರದೇಶದಲ್ಲಿ ಸ್ಪರ್ಧಾ ಬೆಳೆ ಬೆಳೆದಿರಬೇಕು ಹಾಗೂ ಸ್ವಂತ ಜಮೀನು ಇರುವ ಬಗ್ಗೆ ಪಹಣಿ ಪತ್ರ ಹೊಂದಿರಬೇಕು.

Advertisement
Advertisement
Advertisement
Advertisement
ನಿಬಂಧನೆಗಳು ಇದು...
Advertisement

ಯಾವುದೇ ಹಂತದಲ್ಲಿ ಒಮ್ಮೆ ಬಹುಮಾನ ಪಡೆದ ರೈತ, ರೈತ ಕುಟುಂಬದವರು ಮುಂದಿನ ಐದು ವರ್ಷಗಳ ಅವಧಿಗೆ ಆ ಹಂತದ ಬೆಳೆ ಸ್ಪರ್ಧೆಯ ಬಹುಮಾನಕ್ಕೆ ಅರ್ಹರಾಗಿರುವುದಿಲ್ಲ, ಆದರೆ ಆ ಬೆಳೆಯ ಮೇಲಿನ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ತಾಲೂಕು ಮಟ್ಟದಲ್ಲಿ ಬಹುಮಾನ ಪಡೆದವರು ಜಿಲ್ಲಾ ಮಟ್ಟಕ್ಕೆ ಹಾಗೂ ಜಿಲ್ಲಾ ಮಟ್ಟದಲ್ಲಿ ಬಹುಮಾನ ಪಡೆದವರು ರಾಜ್ಯ ಮಟ್ಟಕ್ಕೆ ಸ್ಪರ್ಧಿಸಬಹುದು. ಆದರೆ ಕೆಳ ಹಂತದ ಸ್ಪರ್ಧೆಗೆ ಸ್ಪರ್ಧಿಸುವಂತಿಲ್ಲ. ಕಟಾವಿಗೆ 15 ದಿನಗಳ ಮುಂಚಿತವಾಗಿ ಸಂಬಂಧಿಸಿದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಕಟಾವು ದಿನಾಂಕ ತಿಳಿಸಬೇಕು.

Advertisement

ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಚಿಸುವ ರೈತರು ಸಂಬಂಧಿಸಿದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಿ ನಿಗದಿತ ಅರ್ಜಿ ನಮೂನೆ ಪಡೆದು ಕಂದಾಯ ಇಲಾಖೆಯಿಂದ ಪಡೆದ ಪಹಣಿ ಪತ್ರದೊಂದಿಗೆ ಶುಲ್ಕ ಪಾವತಿಸಿ ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆ | ಹವಮಾನ ಇಲಾಖೆ ಮುನ್ಸೂಚನೆ
February 27, 2025
9:49 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 27-02-2025 | ಮಳೆಯ ಸಾಧ್ಯತೆ ಕ್ಷೀಣ | ಒಣ ಹವೆ ಮುಂದುವರಿಕೆ | ಕೆಲವು ಕಡೆ ತುಂತುರು ಮಳೆ ನಿರೀಕ್ಷೆ |
February 27, 2025
10:57 AM
by: ಸಾಯಿಶೇಖರ್ ಕರಿಕಳ
ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ | ಅಹೋ ರಾತ್ರಿ ಶಿವ ಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ
February 27, 2025
12:10 AM
by: The Rural Mirror ಸುದ್ದಿಜಾಲ
ಈಶಾ ಫೌಂಡೇಷನ್ ನಿಂದ ಶಿವರಾತ್ರಿ | ಆತ್ಮ ಜಾಗೃತಿಯ ರಾತ್ರಿ, ಆತ್ಮಕ್ಕೆ ಮೂಲ ಆಧಾರ
February 26, 2025
11:52 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror